Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮನಸ್ಸು
Share:
Poems September 7, 2020 ಕೆ.ಆರ್ ಮಂಗಳಾ

ಮನಸ್ಸು

ಏನ ಹೇಳಲಿ ಗುರುವೇ ಮನಸಿನ ಬಗೆಗೆ?
ಹಿಂದಕ್ಕೆ ಜಾರುತ್ತಾ
ಮುಂದಕ್ಕೆ ತುಯ್ಯುತ್ತಾ
ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ
ಇದಾವ ಮರದ ಕೊಂಬೆಗೆ
ನೇತು ಹಾಕಿಕೊಂಡಿದೆ…

ಎಂದು ಕಟ್ಟಿದೆನೋ
ಅದ್ಹೇಗೆ ಏರಿ ಕೊಂಡೆನೋ
ಹಿಗ್ಗುತ್ತಾ ಹತ್ತಿ ಕೂತವಳನು
ತೂಗಿದ ಮೊದಲ ಕೈ ಅದಾವುದೋ?
ಪರಂಪರೆಯ ಉದ್ದಕ್ಕೂ
ಮೂಲ ಹುಡುಕುವುದೆಲ್ಲಿ…

ಜೀಕುವ ಆಟಕ್ಕೆ ಜೋತು ಬಿದ್ದಾಗಿದೆ
ಇಷ್ಟಾನಿಷ್ಟಗಳ ಖಯಾಲಿ
ಗಾಳಿಯಲಿ ತೇಲುವ ಸುಖ
ನೆಲಕೆ ಕಾಲಿಡಲೊಲ್ಲದ ಮರೆವು
ತೂಗಿಸಿದ ಹಗ್ಗ ಬಂಧನದ ಪಾಶವಾದದ್ದು
ತಿಳಿಯಲೇ ಇಲ್ಲ ಈ ಜೀಕಾಟದಲ್ಲಿ!

ಅತ್ತಿಂದಿತ್ತ ಇತ್ತಿಂದತ್ತ
ಕಾಲ ಸವೆಸುವ ಆಟ
ಹುಟ್ಟುತ್ತಾ- ಹೊಂದುತ್ತಾ,
ಜೀವವನೊತ್ತೆ ಇಟ್ಟು
ಜೀಕಿಕೊಳ್ಳುತ್ತಲೇ ಇದ್ದೇನೆ
ಹಿಂದಕ್ಕೆ ಮುಂದಕ್ಕೆ ಮತ್ತೆ ಮತ್ತೆ…

Previous post ಸಂತೆಯ ಸಂತ
ಸಂತೆಯ ಸಂತ
Next post ನದಿಯನರಸುತ್ತಾ…
ನದಿಯನರಸುತ್ತಾ…

Related Posts

ನಾನರಿಯದ ಬಯಲು
Share:
Poems

ನಾನರಿಯದ ಬಯಲು

April 9, 2021 ಜ್ಯೋತಿಲಿಂಗಪ್ಪ
ಈ ಬಯಲಿಗೆ ಎಷ್ಟು ಮುಖವಯ್ಯಾ ಇರುವ ಮುಖದ ಇರವ ನಾನರಿಯೆ ಇರದ ಮುಖದ ಇರವನೂ ನಾನರಿಯೆ ನಾನರಿಯದೆ ಮುಖ ಇರುವುದೆಲ್ಲಿ ಇರದ ಬಯಲೊಳು ಇರವು ಇರದು ಅರಿವಿನೊಳು ಇರವು ಇರುವುದು ಅರಿ...
ಹುಲಿ ಸವಾರಿ…
Share:
Poems

ಹುಲಿ ಸವಾರಿ…

June 10, 2023 ಜ್ಯೋತಿಲಿಂಗಪ್ಪ
ಖಾಲೀ… ಇರುವೆಯಲ್ಲಾ ಏನಾದರೂ ನೋಡು ಕಣ್ಣು ತುಂಬಿದೆ ನೋಡಲೇನುಂಟು ನೋಡದು ಏನಾದರೂ ಕೇಳು ಕಿವಿ ತುಂಬಿದೆ ಕೇಳಲೇನುಂಟು ಕೇಳದು ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ...

Comments 1

  1. Ganesh A.P
    Sep 13, 2020 Reply

    ಕವನದ ಜೋಲಿಯಲ್ಲಿ ನಾನೂ ತೂಗುತ್ತಿದ್ದೇನೆ. ಅರ್ಥಗರ್ಭಿತ ಕವನ.

Leave a Reply to Ganesh A.P Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೆಮ್ಮದಿ
ನೆಮ್ಮದಿ
April 6, 2020
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಸಂಸ್ಕೃತ ಕೃತಿಗಳು
ಸಂಸ್ಕೃತ ಕೃತಿಗಳು
October 10, 2023
ಬಯಲಾದ ದೇವರು
ಬಯಲಾದ ದೇವರು
January 15, 2026
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
June 5, 2021
ವಚನ – ಚಿಂತನ
ವಚನ – ಚಿಂತನ
October 10, 2023
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
ಅನುಪಮ ಯೋಗಿ ಅನಿಮಿಷ
ಅನುಪಮ ಯೋಗಿ ಅನಿಮಿಷ
May 6, 2020
Copyright © 2026 Bayalu