Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮರೆತೆ…
Share:
Poems July 4, 2022 ಜ್ಯೋತಿಲಿಂಗಪ್ಪ

ಮರೆತೆ…

ಮಗುವಾಗಬೇಕು ನಿಜ
ಮರಳದು ಚೈತನ್ಯ ಮರೆತೆ

ಹೂಳಲಾಗದು ನೆಳಲು ನಿಜ
ನೆಳಲು ಹಿಂಬಾಲಿಸುವುದು ಮರೆತೆ

ನೆರಳು ಯಾವಾಗಲೂ ಇರದು ನಿಜ
ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ

ಸಮಯ ಕಳೆಯುವುದು ನಿಜ
ಕಳೆದ ಸಮಯ ಕಳೆದುದು ಮರೆತೆ

ಸಮಯಕೆ ಸಾವಿಲ್ಲ ನಿಜ
ಸಾಯುವ ಸಮಯ ಬರುವುದು ಮರೆತೆ

ಸುಖವೇನೂ ಸುಮ್ಮನೆ ಬರುವುದಿಲ್ಲ ನಿಜ
ದುಃಖವೂ ಜೊತೆಗೆ ಇರುವುದು ಮರೆತೆ

ಖಾಲೀ ಮಡಿಕೆ ಶಬ್ದ ಮಾಡುವುದು ನಿಜ
ಖಾಲಿಯಲಿ ಬಯಲು ತುಂಬುವುದು ಮರೆತೆ

ಏಕಾಂತ ಒಂಟಿತನವಲ್ಲ ನಿಜ
ಒಂಟಿತನವ ಏಕಾಂತವಾಗಿಸುವುದು ಮರೆತೆ

ಸತ್ಯದ ಮುಖವ ಕಾಣಿಸದು ಕತ್ತಲು ನಿಜ
ಕತ್ತಲೊಳಗೂ ಸತ್ಯ ಇರುವುದು ಮರೆತೆ

ಧ್ಯಾನವೇ ಸಾಧನೆಯಲ್ಲ ನಿಜ
ಸಾಧಿಸಿದುದೆಲ್ಲವೂ ಧ್ಯಾನ ಮರೆತೆ

ಬಯಲು ಓದಲು ಬಯಲಿಗಿಳಿದೆ ನಿಜ
ಬಯಲು ಬೆತ್ತಲಾಗಿಸಿ ಬಟ್ಟೆ ತೊಟ್ಟುದ ಮರೆತೆ.

ಬೇರಿಲ್ಲದೆ ಎಲೆಗಳಿರವು ನಿಜ
ಎಲೆಗಳಿರದೆ ಬೇರೂ ನಿಲ್ಲದು ಮರೆತೆ.

ಬೇರು ನೆಲದೊಳಗಿಳೀಯುವಾಗ ಎಲೆಗಳು ನಗುವವು ನಿಜ
ಎಲೆಗಳು ಒಣಗಿ ನೆಲಕುದುರುವಾಗ ಬೇರು ನಗುವುದು ಮರೆತೆ.

Previous post ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
Next post ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…

Related Posts

ಗ್ರಹಣ
Share:
Poems

ಗ್ರಹಣ

December 9, 2025 ಡಾ. ಪಂಚಾಕ್ಷರಿ ಹಳೇಬೀಡು
ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...
ನಾನೆಲ್ಲಿ ಇದ್ದೆ?
Share:
Poems

ನಾನೆಲ್ಲಿ ಇದ್ದೆ?

April 29, 2018 ಕೆ.ಆರ್ ಮಂಗಳಾ
ಶರಧಿ ಭೂಮಿಯ ನುಂಗಿ ಸೂರ್ಯ ಶರಧಿಯ ನುಂಗಿ ಆಗಸ ಸೂರ್ಯನ ನುಂಗಿ ವಾಯು ಆಗಸ ನುಂಗಿ ಎಲ್ಲ ಎಲ್ಲವ ನುಂಗಿ ನೊಣೆಯುವಾಗ ನಾನೆಲ್ಲಿ ಅಡಗಿದ್ದೆ? ಬಾಲ್ಯ ಭ್ರೂಣವ ನುಂಗಿ ಹರಯ ಬಾಲ್ಯವ...

Comments 2

  1. Praveen Kammar
    Jul 5, 2022 Reply

    ಮರೆತದ್ದೇನು, ಅರಿತದ್ದೇನು? ದ್ವಂದ್ವಗಳಲ್ಲಿ ಸಿಕ್ಕಿದ್ದೇನು? ಸುಂದರ ಕವನ.

  2. Channabasappa B
    Jul 7, 2022 Reply

    ಮರೆಯಬೇಕಾದವುಗಳನ್ನು ಮರೆತಾಗಲೇ ಅರಿವು ಕಣ್ಣುತೆರೆಯುವುದು, ಬಯಲು ಸಾಕ್ಷಾತ್ಕಾರವಾಗುವುದು!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
April 6, 2023
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ನಾನೆಂಬ ನಿನಾದ…
ನಾನೆಂಬ ನಿನಾದ…
January 15, 2026
Copyright © 2026 Bayalu