Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮರೆತೆ…
Share:
Poems July 4, 2022 ಜ್ಯೋತಿಲಿಂಗಪ್ಪ

ಮರೆತೆ…

ಮಗುವಾಗಬೇಕು ನಿಜ
ಮರಳದು ಚೈತನ್ಯ ಮರೆತೆ

ಹೂಳಲಾಗದು ನೆಳಲು ನಿಜ
ನೆಳಲು ಹಿಂಬಾಲಿಸುವುದು ಮರೆತೆ

ನೆರಳು ಯಾವಾಗಲೂ ಇರದು ನಿಜ
ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ

ಸಮಯ ಕಳೆಯುವುದು ನಿಜ
ಕಳೆದ ಸಮಯ ಕಳೆದುದು ಮರೆತೆ

ಸಮಯಕೆ ಸಾವಿಲ್ಲ ನಿಜ
ಸಾಯುವ ಸಮಯ ಬರುವುದು ಮರೆತೆ

ಸುಖವೇನೂ ಸುಮ್ಮನೆ ಬರುವುದಿಲ್ಲ ನಿಜ
ದುಃಖವೂ ಜೊತೆಗೆ ಇರುವುದು ಮರೆತೆ

ಖಾಲೀ ಮಡಿಕೆ ಶಬ್ದ ಮಾಡುವುದು ನಿಜ
ಖಾಲಿಯಲಿ ಬಯಲು ತುಂಬುವುದು ಮರೆತೆ

ಏಕಾಂತ ಒಂಟಿತನವಲ್ಲ ನಿಜ
ಒಂಟಿತನವ ಏಕಾಂತವಾಗಿಸುವುದು ಮರೆತೆ

ಸತ್ಯದ ಮುಖವ ಕಾಣಿಸದು ಕತ್ತಲು ನಿಜ
ಕತ್ತಲೊಳಗೂ ಸತ್ಯ ಇರುವುದು ಮರೆತೆ

ಧ್ಯಾನವೇ ಸಾಧನೆಯಲ್ಲ ನಿಜ
ಸಾಧಿಸಿದುದೆಲ್ಲವೂ ಧ್ಯಾನ ಮರೆತೆ

ಬಯಲು ಓದಲು ಬಯಲಿಗಿಳಿದೆ ನಿಜ
ಬಯಲು ಬೆತ್ತಲಾಗಿಸಿ ಬಟ್ಟೆ ತೊಟ್ಟುದ ಮರೆತೆ.

ಬೇರಿಲ್ಲದೆ ಎಲೆಗಳಿರವು ನಿಜ
ಎಲೆಗಳಿರದೆ ಬೇರೂ ನಿಲ್ಲದು ಮರೆತೆ.

ಬೇರು ನೆಲದೊಳಗಿಳೀಯುವಾಗ ಎಲೆಗಳು ನಗುವವು ನಿಜ
ಎಲೆಗಳು ಒಣಗಿ ನೆಲಕುದುರುವಾಗ ಬೇರು ನಗುವುದು ಮರೆತೆ.

Previous post ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
Next post ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…

Related Posts

ಕಾಯೋ ಗುರುವೇ…
Share:
Poems

ಕಾಯೋ ಗುರುವೇ…

February 11, 2022 ಕೆ.ಆರ್ ಮಂಗಳಾ
ನಾನು: ಗಾಳಿಯೇ ಆಡದ, ಕತ್ತಲ ಕೋಣ್ಯಾಗ ಕಳೆದು ಹೋಗಿನಿ ನನ ಗುರುವೆ ಚಿಲಕವ ಸರಿಸಿ, ಬಾಗಿಲು ತೆಗೆದು ಬೆಳಕಾ ತೋರಿಸು ನನ ಗುರುವೆ ತಡವುತ ಎಡವುತ, ಅಲ್ಲಲ್ಲೇ ಸುತ್ತುತ ಹೈರಾಣಾಗಿಹೆ...
ಗೆರೆ ಎಳೆಯದೆ…
Share:
Poems

ಗೆರೆ ಎಳೆಯದೆ…

October 13, 2022 ಜ್ಯೋತಿಲಿಂಗಪ್ಪ
ನೀನು ಕೂಗುವ ತನಕ ನನ್ನ ಕಿವಿಯಲಿ ಸದ್ದಿರಲಿಲ್ಲ ನನ್ನ ಸದ್ದಲಿ ನಿನ್ನ ಕಿವಿಯು ತೆರೆಯಲಿಲ್ಲ ನನ್ನ ನಿನ್ನ ಪ್ರತಿಷ್ಠೆ ಕಣ್ಣಲಿ ಬೆಳಕಾಗಲಿಲ್ಲ ಈ ಗಾಯಕೆ ಮುಲಾಮು ನಿನ್ನಿಂದ...

Comments 2

  1. Praveen Kammar
    Jul 5, 2022 Reply

    ಮರೆತದ್ದೇನು, ಅರಿತದ್ದೇನು? ದ್ವಂದ್ವಗಳಲ್ಲಿ ಸಿಕ್ಕಿದ್ದೇನು? ಸುಂದರ ಕವನ.

  2. Channabasappa B
    Jul 7, 2022 Reply

    ಮರೆಯಬೇಕಾದವುಗಳನ್ನು ಮರೆತಾಗಲೇ ಅರಿವು ಕಣ್ಣುತೆರೆಯುವುದು, ಬಯಲು ಸಾಕ್ಷಾತ್ಕಾರವಾಗುವುದು!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ನಾನರಿಯದ ಬಯಲು
ನಾನರಿಯದ ಬಯಲು
April 9, 2021
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
Copyright © 2025 Bayalu