Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮರೆತೆ…
Share:
Poems July 4, 2022 ಜ್ಯೋತಿಲಿಂಗಪ್ಪ

ಮರೆತೆ…

ಮಗುವಾಗಬೇಕು ನಿಜ
ಮರಳದು ಚೈತನ್ಯ ಮರೆತೆ

ಹೂಳಲಾಗದು ನೆಳಲು ನಿಜ
ನೆಳಲು ಹಿಂಬಾಲಿಸುವುದು ಮರೆತೆ

ನೆರಳು ಯಾವಾಗಲೂ ಇರದು ನಿಜ
ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ

ಸಮಯ ಕಳೆಯುವುದು ನಿಜ
ಕಳೆದ ಸಮಯ ಕಳೆದುದು ಮರೆತೆ

ಸಮಯಕೆ ಸಾವಿಲ್ಲ ನಿಜ
ಸಾಯುವ ಸಮಯ ಬರುವುದು ಮರೆತೆ

ಸುಖವೇನೂ ಸುಮ್ಮನೆ ಬರುವುದಿಲ್ಲ ನಿಜ
ದುಃಖವೂ ಜೊತೆಗೆ ಇರುವುದು ಮರೆತೆ

ಖಾಲೀ ಮಡಿಕೆ ಶಬ್ದ ಮಾಡುವುದು ನಿಜ
ಖಾಲಿಯಲಿ ಬಯಲು ತುಂಬುವುದು ಮರೆತೆ

ಏಕಾಂತ ಒಂಟಿತನವಲ್ಲ ನಿಜ
ಒಂಟಿತನವ ಏಕಾಂತವಾಗಿಸುವುದು ಮರೆತೆ

ಸತ್ಯದ ಮುಖವ ಕಾಣಿಸದು ಕತ್ತಲು ನಿಜ
ಕತ್ತಲೊಳಗೂ ಸತ್ಯ ಇರುವುದು ಮರೆತೆ

ಧ್ಯಾನವೇ ಸಾಧನೆಯಲ್ಲ ನಿಜ
ಸಾಧಿಸಿದುದೆಲ್ಲವೂ ಧ್ಯಾನ ಮರೆತೆ

ಬಯಲು ಓದಲು ಬಯಲಿಗಿಳಿದೆ ನಿಜ
ಬಯಲು ಬೆತ್ತಲಾಗಿಸಿ ಬಟ್ಟೆ ತೊಟ್ಟುದ ಮರೆತೆ.

ಬೇರಿಲ್ಲದೆ ಎಲೆಗಳಿರವು ನಿಜ
ಎಲೆಗಳಿರದೆ ಬೇರೂ ನಿಲ್ಲದು ಮರೆತೆ.

ಬೇರು ನೆಲದೊಳಗಿಳೀಯುವಾಗ ಎಲೆಗಳು ನಗುವವು ನಿಜ
ಎಲೆಗಳು ಒಣಗಿ ನೆಲಕುದುರುವಾಗ ಬೇರು ನಗುವುದು ಮರೆತೆ.

Previous post ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
Next post ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…

Related Posts

ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...
ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...

Comments 2

  1. Praveen Kammar
    Jul 5, 2022 Reply

    ಮರೆತದ್ದೇನು, ಅರಿತದ್ದೇನು? ದ್ವಂದ್ವಗಳಲ್ಲಿ ಸಿಕ್ಕಿದ್ದೇನು? ಸುಂದರ ಕವನ.

  2. Channabasappa B
    Jul 7, 2022 Reply

    ಮರೆಯಬೇಕಾದವುಗಳನ್ನು ಮರೆತಾಗಲೇ ಅರಿವು ಕಣ್ಣುತೆರೆಯುವುದು, ಬಯಲು ಸಾಕ್ಷಾತ್ಕಾರವಾಗುವುದು!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ನೋಟದ ಕೂಟ…
ನೋಟದ ಕೂಟ…
May 10, 2023
ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
November 7, 2020
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ಲಿಂಗಾಯತ ಮಠಗಳು ಮತ್ತು ಬಸವತತ್ವ
ಲಿಂಗಾಯತ ಮಠಗಳು ಮತ್ತು ಬಸವತತ್ವ
July 21, 2024
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಶಿವಾಚಾರ
ಶಿವಾಚಾರ
April 9, 2021
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
Copyright © 2025 Bayalu