Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮರೆತೆ…
Share:
Poems July 4, 2022 ಜ್ಯೋತಿಲಿಂಗಪ್ಪ

ಮರೆತೆ…

ಮಗುವಾಗಬೇಕು ನಿಜ
ಮರಳದು ಚೈತನ್ಯ ಮರೆತೆ

ಹೂಳಲಾಗದು ನೆಳಲು ನಿಜ
ನೆಳಲು ಹಿಂಬಾಲಿಸುವುದು ಮರೆತೆ

ನೆರಳು ಯಾವಾಗಲೂ ಇರದು ನಿಜ
ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ

ಸಮಯ ಕಳೆಯುವುದು ನಿಜ
ಕಳೆದ ಸಮಯ ಕಳೆದುದು ಮರೆತೆ

ಸಮಯಕೆ ಸಾವಿಲ್ಲ ನಿಜ
ಸಾಯುವ ಸಮಯ ಬರುವುದು ಮರೆತೆ

ಸುಖವೇನೂ ಸುಮ್ಮನೆ ಬರುವುದಿಲ್ಲ ನಿಜ
ದುಃಖವೂ ಜೊತೆಗೆ ಇರುವುದು ಮರೆತೆ

ಖಾಲೀ ಮಡಿಕೆ ಶಬ್ದ ಮಾಡುವುದು ನಿಜ
ಖಾಲಿಯಲಿ ಬಯಲು ತುಂಬುವುದು ಮರೆತೆ

ಏಕಾಂತ ಒಂಟಿತನವಲ್ಲ ನಿಜ
ಒಂಟಿತನವ ಏಕಾಂತವಾಗಿಸುವುದು ಮರೆತೆ

ಸತ್ಯದ ಮುಖವ ಕಾಣಿಸದು ಕತ್ತಲು ನಿಜ
ಕತ್ತಲೊಳಗೂ ಸತ್ಯ ಇರುವುದು ಮರೆತೆ

ಧ್ಯಾನವೇ ಸಾಧನೆಯಲ್ಲ ನಿಜ
ಸಾಧಿಸಿದುದೆಲ್ಲವೂ ಧ್ಯಾನ ಮರೆತೆ

ಬಯಲು ಓದಲು ಬಯಲಿಗಿಳಿದೆ ನಿಜ
ಬಯಲು ಬೆತ್ತಲಾಗಿಸಿ ಬಟ್ಟೆ ತೊಟ್ಟುದ ಮರೆತೆ.

ಬೇರಿಲ್ಲದೆ ಎಲೆಗಳಿರವು ನಿಜ
ಎಲೆಗಳಿರದೆ ಬೇರೂ ನಿಲ್ಲದು ಮರೆತೆ.

ಬೇರು ನೆಲದೊಳಗಿಳೀಯುವಾಗ ಎಲೆಗಳು ನಗುವವು ನಿಜ
ಎಲೆಗಳು ಒಣಗಿ ನೆಲಕುದುರುವಾಗ ಬೇರು ನಗುವುದು ಮರೆತೆ.

Previous post ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
Next post ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…

Related Posts

ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...
ನಾನೆಂಬ ನಿನಾದ…
Share:
Poems

ನಾನೆಂಬ ನಿನಾದ…

January 15, 2026 ಕೆ.ಆರ್ ಮಂಗಳಾ
ನಾ ಹುಟ್ಟುವ ಮುನ್ನ ಹೇಗಿದ್ದೆ ನೆನಪಿಲ್ಲಾ ಹುಟ್ಟಿನೊಡನೆ ಬಂದ ಬಳುವಳಿಯೇ ನಾನೆಂಬ ಎಳೆ ಈ ಅಹಮಿಕೆಗೆ ಪ್ರಾಣ ಒತ್ತೆಯಿಟ್ಟು ಎಷ್ಟು ಯುಗಗಳಾದವು? ಒಂದೆಳೆ ಇದ್ದುದು ಒತ್ತೊತ್ತಾಗಿ...

Comments 2

  1. Praveen Kammar
    Jul 5, 2022 Reply

    ಮರೆತದ್ದೇನು, ಅರಿತದ್ದೇನು? ದ್ವಂದ್ವಗಳಲ್ಲಿ ಸಿಕ್ಕಿದ್ದೇನು? ಸುಂದರ ಕವನ.

  2. Channabasappa B
    Jul 7, 2022 Reply

    ಮರೆಯಬೇಕಾದವುಗಳನ್ನು ಮರೆತಾಗಲೇ ಅರಿವು ಕಣ್ಣುತೆರೆಯುವುದು, ಬಯಲು ಸಾಕ್ಷಾತ್ಕಾರವಾಗುವುದು!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗ್ರಹಣ
ಗ್ರಹಣ
December 9, 2025
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ಮಾನವರ ವಿಘಟನೆಗೆ ಕಾರಣರಾರು?
ಮಾನವರ ವಿಘಟನೆಗೆ ಕಾರಣರಾರು?
September 6, 2026
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
Copyright © 2026 Bayalu