Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮರೆತೆ…
Share:
Poems July 4, 2022 ಜ್ಯೋತಿಲಿಂಗಪ್ಪ

ಮರೆತೆ…

ಮಗುವಾಗಬೇಕು ನಿಜ
ಮರಳದು ಚೈತನ್ಯ ಮರೆತೆ

ಹೂಳಲಾಗದು ನೆಳಲು ನಿಜ
ನೆಳಲು ಹಿಂಬಾಲಿಸುವುದು ಮರೆತೆ

ನೆರಳು ಯಾವಾಗಲೂ ಇರದು ನಿಜ
ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ

ಸಮಯ ಕಳೆಯುವುದು ನಿಜ
ಕಳೆದ ಸಮಯ ಕಳೆದುದು ಮರೆತೆ

ಸಮಯಕೆ ಸಾವಿಲ್ಲ ನಿಜ
ಸಾಯುವ ಸಮಯ ಬರುವುದು ಮರೆತೆ

ಸುಖವೇನೂ ಸುಮ್ಮನೆ ಬರುವುದಿಲ್ಲ ನಿಜ
ದುಃಖವೂ ಜೊತೆಗೆ ಇರುವುದು ಮರೆತೆ

ಖಾಲೀ ಮಡಿಕೆ ಶಬ್ದ ಮಾಡುವುದು ನಿಜ
ಖಾಲಿಯಲಿ ಬಯಲು ತುಂಬುವುದು ಮರೆತೆ

ಏಕಾಂತ ಒಂಟಿತನವಲ್ಲ ನಿಜ
ಒಂಟಿತನವ ಏಕಾಂತವಾಗಿಸುವುದು ಮರೆತೆ

ಸತ್ಯದ ಮುಖವ ಕಾಣಿಸದು ಕತ್ತಲು ನಿಜ
ಕತ್ತಲೊಳಗೂ ಸತ್ಯ ಇರುವುದು ಮರೆತೆ

ಧ್ಯಾನವೇ ಸಾಧನೆಯಲ್ಲ ನಿಜ
ಸಾಧಿಸಿದುದೆಲ್ಲವೂ ಧ್ಯಾನ ಮರೆತೆ

ಬಯಲು ಓದಲು ಬಯಲಿಗಿಳಿದೆ ನಿಜ
ಬಯಲು ಬೆತ್ತಲಾಗಿಸಿ ಬಟ್ಟೆ ತೊಟ್ಟುದ ಮರೆತೆ.

ಬೇರಿಲ್ಲದೆ ಎಲೆಗಳಿರವು ನಿಜ
ಎಲೆಗಳಿರದೆ ಬೇರೂ ನಿಲ್ಲದು ಮರೆತೆ.

ಬೇರು ನೆಲದೊಳಗಿಳೀಯುವಾಗ ಎಲೆಗಳು ನಗುವವು ನಿಜ
ಎಲೆಗಳು ಒಣಗಿ ನೆಲಕುದುರುವಾಗ ಬೇರು ನಗುವುದು ಮರೆತೆ.

Previous post ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
Next post ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…

Related Posts

ನಾನು ಯಾರು?
Share:
Poems

ನಾನು ಯಾರು?

December 8, 2021 Bayalu
ಕನ್ನಡಿ ಪ್ರತಿಬಿಂಬದಲ್ಲಿ ಕಂಡ ಕರಿಮೈಯ ಕವಚ ನೋಡಿ ಊಹಿಸಿಕೊಂಡದ್ದು ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ ಹೋದವರನು ಕಂಡು ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು...
ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...

Comments 2

  1. Praveen Kammar
    Jul 5, 2022 Reply

    ಮರೆತದ್ದೇನು, ಅರಿತದ್ದೇನು? ದ್ವಂದ್ವಗಳಲ್ಲಿ ಸಿಕ್ಕಿದ್ದೇನು? ಸುಂದರ ಕವನ.

  2. Channabasappa B
    Jul 7, 2022 Reply

    ಮರೆಯಬೇಕಾದವುಗಳನ್ನು ಮರೆತಾಗಲೇ ಅರಿವು ಕಣ್ಣುತೆರೆಯುವುದು, ಬಯಲು ಸಾಕ್ಷಾತ್ಕಾರವಾಗುವುದು!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಕು ನುಂಗಿದ ಕತ್ತಲು
ಬೆಳಕು ನುಂಗಿದ ಕತ್ತಲು
December 9, 2025
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
ಶಿವಾಚಾರ
ಶಿವಾಚಾರ
April 9, 2021
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ಅದ್ವಿತೀಯ ಶರಣರು
ಅದ್ವಿತೀಯ ಶರಣರು
February 6, 2025
Copyright © 2026 Bayalu