Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮರೆತೆ…
Share:
Poems July 4, 2022 ಜ್ಯೋತಿಲಿಂಗಪ್ಪ

ಮರೆತೆ…

ಮಗುವಾಗಬೇಕು ನಿಜ
ಮರಳದು ಚೈತನ್ಯ ಮರೆತೆ

ಹೂಳಲಾಗದು ನೆಳಲು ನಿಜ
ನೆಳಲು ಹಿಂಬಾಲಿಸುವುದು ಮರೆತೆ

ನೆರಳು ಯಾವಾಗಲೂ ಇರದು ನಿಜ
ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ

ಸಮಯ ಕಳೆಯುವುದು ನಿಜ
ಕಳೆದ ಸಮಯ ಕಳೆದುದು ಮರೆತೆ

ಸಮಯಕೆ ಸಾವಿಲ್ಲ ನಿಜ
ಸಾಯುವ ಸಮಯ ಬರುವುದು ಮರೆತೆ

ಸುಖವೇನೂ ಸುಮ್ಮನೆ ಬರುವುದಿಲ್ಲ ನಿಜ
ದುಃಖವೂ ಜೊತೆಗೆ ಇರುವುದು ಮರೆತೆ

ಖಾಲೀ ಮಡಿಕೆ ಶಬ್ದ ಮಾಡುವುದು ನಿಜ
ಖಾಲಿಯಲಿ ಬಯಲು ತುಂಬುವುದು ಮರೆತೆ

ಏಕಾಂತ ಒಂಟಿತನವಲ್ಲ ನಿಜ
ಒಂಟಿತನವ ಏಕಾಂತವಾಗಿಸುವುದು ಮರೆತೆ

ಸತ್ಯದ ಮುಖವ ಕಾಣಿಸದು ಕತ್ತಲು ನಿಜ
ಕತ್ತಲೊಳಗೂ ಸತ್ಯ ಇರುವುದು ಮರೆತೆ

ಧ್ಯಾನವೇ ಸಾಧನೆಯಲ್ಲ ನಿಜ
ಸಾಧಿಸಿದುದೆಲ್ಲವೂ ಧ್ಯಾನ ಮರೆತೆ

ಬಯಲು ಓದಲು ಬಯಲಿಗಿಳಿದೆ ನಿಜ
ಬಯಲು ಬೆತ್ತಲಾಗಿಸಿ ಬಟ್ಟೆ ತೊಟ್ಟುದ ಮರೆತೆ.

ಬೇರಿಲ್ಲದೆ ಎಲೆಗಳಿರವು ನಿಜ
ಎಲೆಗಳಿರದೆ ಬೇರೂ ನಿಲ್ಲದು ಮರೆತೆ.

ಬೇರು ನೆಲದೊಳಗಿಳೀಯುವಾಗ ಎಲೆಗಳು ನಗುವವು ನಿಜ
ಎಲೆಗಳು ಒಣಗಿ ನೆಲಕುದುರುವಾಗ ಬೇರು ನಗುವುದು ಮರೆತೆ.

Previous post ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
Next post ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…

Related Posts

ಒಳಗಣ ಮರ
Share:
Poems

ಒಳಗಣ ಮರ

March 12, 2022 ಜ್ಯೋತಿಲಿಂಗಪ್ಪ
ಈ ಪದ ಏನು ನಿಜ ಹೇಳುತ್ತಾ ನಿಜ ಹೇಳುವುದು ಅಲ್ಲಾ ಕಾಣುವುದು ಅಲ್ಲಾ ಕೇಳುವುದು ಅಲ್ಲಾ ಅನುಭಾವಿಸುವುದು ಭಾವದಲಿ ಆನು ನಿಜವಾಗುವುದು ಈ ಪದ ಅರ್ಥದಲಿ ಏನಿದೆಯೋ ಅಕ್ಷರ ಬಲ್ಲವರು...
ಆಕಾರ-ನಿರಾಕಾರ
Share:
Poems

ಆಕಾರ-ನಿರಾಕಾರ

January 7, 2022 ಜ್ಯೋತಿಲಿಂಗಪ್ಪ
ಇರಯ್ಯಾ ಕಾಯುವವನೇ ಇರದಿರುವಾಗ ನಿನಗೇತರ ಅವಸರ ಕಾಯುತ್ತಾನೆಂದು ಕಾಯುವೆಯಲ್ಲಾ ಸಾವ ಕಾಯುವ ನ್ಯಾಯ ಅದಾವುದಯ್ಯಾ ಕೇಡಿಲ್ಲ ಅಳಿಯೆನೆಂದು ಹಲ್ಲ ಮಸೆಯದಿರು ಕಾಯ ಕಾಯದು ಆಕಾರಕೆ...

Comments 2

  1. Praveen Kammar
    Jul 5, 2022 Reply

    ಮರೆತದ್ದೇನು, ಅರಿತದ್ದೇನು? ದ್ವಂದ್ವಗಳಲ್ಲಿ ಸಿಕ್ಕಿದ್ದೇನು? ಸುಂದರ ಕವನ.

  2. Channabasappa B
    Jul 7, 2022 Reply

    ಮರೆಯಬೇಕಾದವುಗಳನ್ನು ಮರೆತಾಗಲೇ ಅರಿವು ಕಣ್ಣುತೆರೆಯುವುದು, ಬಯಲು ಸಾಕ್ಷಾತ್ಕಾರವಾಗುವುದು!!!

Leave a Reply to Praveen Kammar Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ನಾನು ಯಾರು? ಎಂಬ ಆಳ-ನಿರಾಳ-5
ನಾನು ಯಾರು? ಎಂಬ ಆಳ-ನಿರಾಳ-5
August 2, 2020
ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
March 9, 2023
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
ಗುರುವಂದನೆ
ಗುರುವಂದನೆ
October 13, 2022
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ನಾನೆಲ್ಲಿ ಇದ್ದೆ?
ನಾನೆಲ್ಲಿ ಇದ್ದೆ?
April 29, 2018
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
Copyright © 2026 Bayalu