Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮರೆತೆ…
Share:
Poems July 4, 2022 ಜ್ಯೋತಿಲಿಂಗಪ್ಪ

ಮರೆತೆ…

ಮಗುವಾಗಬೇಕು ನಿಜ
ಮರಳದು ಚೈತನ್ಯ ಮರೆತೆ

ಹೂಳಲಾಗದು ನೆಳಲು ನಿಜ
ನೆಳಲು ಹಿಂಬಾಲಿಸುವುದು ಮರೆತೆ

ನೆರಳು ಯಾವಾಗಲೂ ಇರದು ನಿಜ
ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ

ಸಮಯ ಕಳೆಯುವುದು ನಿಜ
ಕಳೆದ ಸಮಯ ಕಳೆದುದು ಮರೆತೆ

ಸಮಯಕೆ ಸಾವಿಲ್ಲ ನಿಜ
ಸಾಯುವ ಸಮಯ ಬರುವುದು ಮರೆತೆ

ಸುಖವೇನೂ ಸುಮ್ಮನೆ ಬರುವುದಿಲ್ಲ ನಿಜ
ದುಃಖವೂ ಜೊತೆಗೆ ಇರುವುದು ಮರೆತೆ

ಖಾಲೀ ಮಡಿಕೆ ಶಬ್ದ ಮಾಡುವುದು ನಿಜ
ಖಾಲಿಯಲಿ ಬಯಲು ತುಂಬುವುದು ಮರೆತೆ

ಏಕಾಂತ ಒಂಟಿತನವಲ್ಲ ನಿಜ
ಒಂಟಿತನವ ಏಕಾಂತವಾಗಿಸುವುದು ಮರೆತೆ

ಸತ್ಯದ ಮುಖವ ಕಾಣಿಸದು ಕತ್ತಲು ನಿಜ
ಕತ್ತಲೊಳಗೂ ಸತ್ಯ ಇರುವುದು ಮರೆತೆ

ಧ್ಯಾನವೇ ಸಾಧನೆಯಲ್ಲ ನಿಜ
ಸಾಧಿಸಿದುದೆಲ್ಲವೂ ಧ್ಯಾನ ಮರೆತೆ

ಬಯಲು ಓದಲು ಬಯಲಿಗಿಳಿದೆ ನಿಜ
ಬಯಲು ಬೆತ್ತಲಾಗಿಸಿ ಬಟ್ಟೆ ತೊಟ್ಟುದ ಮರೆತೆ.

ಬೇರಿಲ್ಲದೆ ಎಲೆಗಳಿರವು ನಿಜ
ಎಲೆಗಳಿರದೆ ಬೇರೂ ನಿಲ್ಲದು ಮರೆತೆ.

ಬೇರು ನೆಲದೊಳಗಿಳೀಯುವಾಗ ಎಲೆಗಳು ನಗುವವು ನಿಜ
ಎಲೆಗಳು ಒಣಗಿ ನೆಲಕುದುರುವಾಗ ಬೇರು ನಗುವುದು ಮರೆತೆ.

Previous post ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
Next post ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…

Related Posts

ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...
ಕಾಯದೊಳಗಣ ಬಯಲು
Share:
Poems

ಕಾಯದೊಳಗಣ ಬಯಲು

November 7, 2020 ಜ್ಯೋತಿಲಿಂಗಪ್ಪ
ಈ ಬಯಲು ಗುರುತಿಸಲಾರೆ ನನ್ನ ಕಣ್ಣ ಎದುರು ನಾನು ಬಯಸುವ ರೂಹು ಇಲ್ಲ ಕಣ್ಣು ಹೇಳಿದುದು ಸುಳ್ಳೇ ನೀ ಬಿಟ್ಟ ಉಸಿರಲೊಂದು ದನಿ ಇದೆ ನಾ ಕೇಳಲಾರೆ ಉಸಿರು ಒಳಗಣ ದನಿ ಉಸಿರು ನುಂಗಿತು...

Comments 2

  1. Praveen Kammar
    Jul 5, 2022 Reply

    ಮರೆತದ್ದೇನು, ಅರಿತದ್ದೇನು? ದ್ವಂದ್ವಗಳಲ್ಲಿ ಸಿಕ್ಕಿದ್ದೇನು? ಸುಂದರ ಕವನ.

  2. Channabasappa B
    Jul 7, 2022 Reply

    ಮರೆಯಬೇಕಾದವುಗಳನ್ನು ಮರೆತಾಗಲೇ ಅರಿವು ಕಣ್ಣುತೆರೆಯುವುದು, ಬಯಲು ಸಾಕ್ಷಾತ್ಕಾರವಾಗುವುದು!!!

Leave a Reply to Channabasappa B Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗಾಚಾರ
ಲಿಂಗಾಚಾರ
May 6, 2021
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಕಣ್ಣ ದೀಪ
ಕಣ್ಣ ದೀಪ
September 7, 2021
ಗಣಾಚಾರ
ಗಣಾಚಾರ
August 8, 2021
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ
January 10, 2021
Copyright © 2026 Bayalu