Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಾಯದ ಗಾಯ
Share:
Poems October 19, 2025 ಜ್ಯೋತಿಲಿಂಗಪ್ಪ

ಮಾಯದ ಗಾಯ

ಯಾವಾಗ ಮಳೆ ಬರುವುದೋ
ಕಾಯುವ ಆ ದಿನ
ಯಾವಾಗ ಮಳೆ ನಿಲ್ಲುವುದೋ
ಕಾಯುವ ಈ ದಿನ

ದಿನಾ ಕಾಯುವ ಈ ದಿನಕರ
ತೋಯಗಳಲಿ ತುಯ್ಯಲಾಟ
ಘನವ ನಾನೇನು ಬಲ್ಲೆ

ಗೂಡು ಕಟ್ಟಿದ ಹಕ್ಕಿ
ಅಂಗಣದಲಿ ಹಾರಾಟ

ಗೂಡು ಘನವೇ ಕಿರಿದಾಗದು ತತ್ತಿ
ತತ್ತಿ ಘನವೇ ಕಿರಿದಾಗದು ಪ್ರಾಣ
ಪ್ರಾಣ ಘನವೇ ಕಿರಿದಾಗದು ಹಾರುವ ಹಕ್ಕಿ

ತತ್ತಿಯೊಳಗಣ ಆ ಹಕ್ಕಿ ಪ್ರಾಣ
ಗೂಡಲ್ಲಿ ಅಡಗಿತ್ತು

ಕಾಮದ ತುಂಟಾಟ
ಮೋಹದ ಮಿಂಡಾಟ
ಕ್ರೋಧದ ಛಲದಾಟ

ಮದದ ಹಮ್ಮಿನಾಟ
ಲೋಭದ ಜೂಜಾಟ
ಮತ್ಸರದ ಹೊಗೆಯಾಟ

ಆಡಿ ಕೆಡದಿರೆ ನಿಬ್ಬೆರಗು

ಮಾಯದ ಗಾಯವ
ನೆನಹು ನೆಕ್ಕಿತ್ತು

ಕಣ್ಣೊಳಗಣ ಬಿಂಬದ ಗೊಂಬೆ
ನೀರಾಯಿತು.

Previous post ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
Next post ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…

Related Posts

ಗಾಳಿ ಬುರುಡೆ
Share:
Poems

ಗಾಳಿ ಬುರುಡೆ

June 17, 2020 ಪದ್ಮಾಲಯ ನಾಗರಾಜ್
ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು ಗಾಳಿಗೆ ತೂರ್ಹೋಗಬೇಡಾ //ನಂಬಿ// ಚಿತ್ರಾ...
ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...

Comments 3

  1. ಕುಸುಮಾ ತಂಗಡಗಿ
    Oct 27, 2025 Reply

    ನೆನಪುಗಳು ಯಾವತ್ತೂ ಗಾಯವನ್ನು ಮಾಯಲು ಬಿಡುವುದಿಲ್ಲಾ😟

  2. ಸುಂದರ್ ಪೌಳಿ
    Nov 7, 2025 Reply

    ಕಣ್ಣ ಬಿಂಬ ಮನದ ಬಿಂಬ, ಬಿಂಬ ಅಳಿದರೆ ಎಲ್ಲವೂ ಶೂನ್ಯ… ಯಾವುದು ಹಿರಿದು, ಯಾವುದು ಕಿರಿದು?… ಚೆನ್ನಾಗಿದೆ ಕವನ.

    • ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
      Nov 25, 2025 Reply

      ಓದಿಗೆ… ಸಂತಸ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ಅವಿರಳ ಅನುಭಾವಿ-4
ಅವಿರಳ ಅನುಭಾವಿ-4
June 17, 2020
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ಸುಮ್ಮನೆ ಇರು
ಸುಮ್ಮನೆ ಇರು
December 6, 2020
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ನೆಲದ ನಿಧಾನ
ನೆಲದ ನಿಧಾನ
April 29, 2018
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
Copyright © 2026 Bayalu