Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಾಯದ ಗಾಯ
Share:
Poems October 19, 2025 ಜ್ಯೋತಿಲಿಂಗಪ್ಪ

ಮಾಯದ ಗಾಯ

ಯಾವಾಗ ಮಳೆ ಬರುವುದೋ
ಕಾಯುವ ಆ ದಿನ
ಯಾವಾಗ ಮಳೆ ನಿಲ್ಲುವುದೋ
ಕಾಯುವ ಈ ದಿನ

ದಿನಾ ಕಾಯುವ ಈ ದಿನಕರ
ತೋಯಗಳಲಿ ತುಯ್ಯಲಾಟ
ಘನವ ನಾನೇನು ಬಲ್ಲೆ

ಗೂಡು ಕಟ್ಟಿದ ಹಕ್ಕಿ
ಅಂಗಣದಲಿ ಹಾರಾಟ

ಗೂಡು ಘನವೇ ಕಿರಿದಾಗದು ತತ್ತಿ
ತತ್ತಿ ಘನವೇ ಕಿರಿದಾಗದು ಪ್ರಾಣ
ಪ್ರಾಣ ಘನವೇ ಕಿರಿದಾಗದು ಹಾರುವ ಹಕ್ಕಿ

ತತ್ತಿಯೊಳಗಣ ಆ ಹಕ್ಕಿ ಪ್ರಾಣ
ಗೂಡಲ್ಲಿ ಅಡಗಿತ್ತು

ಕಾಮದ ತುಂಟಾಟ
ಮೋಹದ ಮಿಂಡಾಟ
ಕ್ರೋಧದ ಛಲದಾಟ

ಮದದ ಹಮ್ಮಿನಾಟ
ಲೋಭದ ಜೂಜಾಟ
ಮತ್ಸರದ ಹೊಗೆಯಾಟ

ಆಡಿ ಕೆಡದಿರೆ ನಿಬ್ಬೆರಗು

ಮಾಯದ ಗಾಯವ
ನೆನಹು ನೆಕ್ಕಿತ್ತು

ಕಣ್ಣೊಳಗಣ ಬಿಂಬದ ಗೊಂಬೆ
ನೀರಾಯಿತು.

Previous post ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
Next post ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…

Related Posts

ಶಾಂತಿ
Share:
Poems

ಶಾಂತಿ

April 11, 2025 Bayalu
ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ, ಸುಮದ ದಳವಾಗು ವನದಲಿ, ಓ ಮನವೇ, ಕಂದನ ಮುಗ್ದ ನಗುವಾಗು.| ೧ | ಹರುಷ ದುಗುಡಗಳ ಮೇಳದಲಿ, ಮಧುರ ನೆನಪುಗಳ ಹೊಳೆಯಾಗು,...
ಬೆಳಕು ಸಿಕ್ಕೀತೆ?
Share:
Poems

ಬೆಳಕು ಸಿಕ್ಕೀತೆ?

March 9, 2023 ಜ್ಯೋತಿಲಿಂಗಪ್ಪ
ಈಗ ನೀನು ಮರೆವು ನಾನು ಇರುವೆ ನಾ.. ಹೇಳ ಬಾರದು ಕೇಳ ಬಾರದು ಬಾಳೆ ಹಣ್ಣಾಗಿ ಈಗಷ್ಟೇ ಬಾಗಿದೆ ಏನೇ ಹೇಳಿ ಕಾಣುವುದೆಲ್ಲಾ ಸತ್ಯವೇ ಅಲ್ಲಾ ಏನೂ ಆಗಬಹುದು ಆಕಾಶ ಮೈದೆರೆದರೆ ಬಯಲು...

Comments 3

  1. ಕುಸುಮಾ ತಂಗಡಗಿ
    Oct 27, 2025 Reply

    ನೆನಪುಗಳು ಯಾವತ್ತೂ ಗಾಯವನ್ನು ಮಾಯಲು ಬಿಡುವುದಿಲ್ಲಾ😟

  2. ಸುಂದರ್ ಪೌಳಿ
    Nov 7, 2025 Reply

    ಕಣ್ಣ ಬಿಂಬ ಮನದ ಬಿಂಬ, ಬಿಂಬ ಅಳಿದರೆ ಎಲ್ಲವೂ ಶೂನ್ಯ… ಯಾವುದು ಹಿರಿದು, ಯಾವುದು ಕಿರಿದು?… ಚೆನ್ನಾಗಿದೆ ಕವನ.

    • ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
      Nov 25, 2025 Reply

      ಓದಿಗೆ… ಸಂತಸ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನುಭವ ಮಂಟಪ
ಅನುಭವ ಮಂಟಪ
April 11, 2025
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ಎರವಲು ಮನೆ…
ಎರವಲು ಮನೆ…
August 10, 2023
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
October 21, 2024
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
Copyright © 2026 Bayalu