Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ರೆಕ್ಕೆ ಬಿಚ್ಚಿ…
Share:
Poems May 8, 2024 ಕೆ.ಆರ್ ಮಂಗಳಾ

ರೆಕ್ಕೆ ಬಿಚ್ಚಿ…

‘ವರ್ಚ್ಯುವಲ್ ವರ್ಲ್ಡ್’ ಎನುವುದು
ಕಂಪ್ಯೂಟರ್ ಯುಗದ ಕೂಸಲ್ಲ ಸ್ವಾಮಿ…
ಅದರದು ಅನಾದಿ ಇತಿಹಾಸ
ಸರ್ವವ್ಯಾಪಿ, ಸರ್ವಶಕ್ತ ಸ್ವರೂಪಿ
ಸೂರ್ಯನ ಸುತ್ತ ಭೂಮಿ ಸುತ್ತಿದರೆ
ಇದರ ಕಿರುಬೆರಳಲ್ಲೇ
ಜಗ ಗಿರಕಿ ಹೊಡೆಯುತಿದೆ

ಹೇಗೆನ್ನುವಿರಾ?
ಗಮನವಿಟ್ಟು ಆಲಿಸಿ-

ಹುಟ್ಟಿ ಕಣ್ಣುಬಿಡುವ ಜೀವಕೆ
ನೆಲದ ನಂಟೇ ಸಿಗದಂತೆ
ಸುತ್ತುವವು ಜೋಡಿ ಸರಗಂಟು
ಹೆಸರು- ಮನೆತನ, ಗಂಡು- ಹೆಣ್ಣು,
ಗಳಿಗೆ- ನಕ್ಷತ್ರ, ಜಾತಿ- ವಿಜಾತಿ,
ನಮ್ಮವರು- ತಮ್ಮವರು, ಸರಿ- ತಪ್ಪು,
ಗೌರವ- ಅಭಿಮಾನಗಳ ಸ್ಥಾನಮಾನ
ಗೆಲುವು- ಸೋಲುಗಳ ಜಿದ್ದಾಜಿದ್ದಿ…

ಬೆಳೆಯುತ್ತಾ ಹೋದಂತೆ ಕಾಲಿಗೂ,ಕೈಗೂ,
ಇನ್ನಷ್ಟು ಸರಪಳಿಗಳ ಸರಮಾಲೆ
ಸುಖ-ಸವಲತ್ತುಗಳ ಹಂಬಲ,
ಕೂಡಿಗುಡ್ಡೆ ಹಾಕುವ ತೆವಲು
ಹಂಚಿಕೊಳ್ಳಲೊಪ್ಪದ ಜಿಗುಟು
ಜ್ಞಾನಿ ಎನಿಸಿಕೊಳುವ ಬಯಕೆ
ನಾಮುಂದು ತಾಮುಂದು ಎನುವ
ಮದ-ಮತ್ಸರಗಳ ಬಡಿವಾರ…

ಈ ನಡುವೆ ದೈವ ಭಕ್ತಿಯ ಸೋಗು
ಅರ್ಚನೆ- ಪೂಜೆ- ಆರಾಧನೆಗಳು
ವ್ರತ- ನೇಮ- ಉಪವಾಸಗಳು
ತೀರ್ಥಕ್ಷೇತ್ರ ಪುಣ್ಯಸ್ನಾನಗಳು
ಜಪ- ತಪ, ಯೋಗ- ಧ್ಯಾನಗಳು
ಕುಂಡಲಿನಿ ಜಾಗೃತಿಯ ಸರ್ಕಸ್ಸುಗಳು
ಚಕ್ರಗಳು, ಮಂಡಲಗಳು
ಶಾಸ್ತ್ರ ಪುರಾಣಗಳ ತಾಕೀತುಗಳು
ಧರ್ಮ– ಸಂಸ್ಕೃತಿಯ ಹೇರಿಕೆಗಳು
ಸಂಪ್ರದಾಯದ ಕಟ್ಟುಪಾಡುಗಳು…

ಸತ್ತವರಿಂದ, ಹೆತ್ತವರಿಂದ,
ನೆಂಟರಿಂದ, ನೆರೆಯವರಿಂದ,
ಶಾಲೆಯಿಂದ, ಓಣಿಗಳಿಂದ,
ಊರವರಿಂದ, ನಾಡವರಿಂದ,
ನೆನಪುಗಳಿಂದ, ನಂಬಿಕೆಗಳಿಂದ,
ತಲೆ ತಲೆಗೂ ಸಾಗಿಬಂದ
ಪಿತ್ರಾರ್ಜಿತ ಬಳುವಳಿಗಳಿವು…

ಈ ಅನಂತ ಆವರಣಗಳ
ಬಂಧವೇ ‘ವರ್ಚ್ಯುವಲ್ ರಿಯಾಲಿಟಿ’
ಇರುವಂತೇ ತೋರುತಿರುವ
ನಿಜವೆಂದೇ ನಂಬಿಸಿರುವ
ನಾವಪ್ಪಿ ಜೀವಿಸುವ ಮನೋಲೋಕ,
ಕಣ್ಣಿಗೆ ಕಾಣದ, ಮುಟ್ಟಲು ಸಿಗದ
‘ವರ್ಚ್ಯುವಲ್ ರಿಯಾಲಿಟಿ’
ವಸ್ತುಜಗತ್ತಿನ ನೆಲೆಯರಿಯದ
ಈ ಭ್ರಮೆಗಳಿಗೆಲ್ಲ ಜೀತಕಿದ್ದು
ದಿನರಾತ್ರಿ ಸೆಣಸಾಡಿ, ತೆವಳಿದ್ದೇ ಬಂತು
ರೆಕ್ಕೆಗಳು ಇರುವುದೇ ಮರೆತು ಹೋಗಿತ್ತು
ಜೊತೆಯಲೇ ಪ್ರಾಣಾಧಾರವಾಗಿದ್ದ
‘ರಿಯಲ್ ವರ್ಲ್ಡ್’ ಕಾಣದಾಗಿತ್ತು…

ಸಂತರು ತೋರಿದ, ಶರಣರು ಬದುಕಿದ
ಮಹಂತರು ಕಂಡ ನಿಜದ ನೆಲೆಯಲ್ಲಿ
ನಿರೀಕ್ಷೆಗಳಿಲ್ಲ, ನೋವುಗಳಿಲ್ಲ
ಬೇಕು-ಬೇಡಗಳ ಸುಳಿಗಳಿಲ್ಲ
ಸಂದೇಹಗಳಿಲ್ಲ, ಸಂಕುಚಿತತೆಯಿಲ್ಲ
ಪೂರ್ವಾಗ್ರಹಗಳಿಲ್ಲ, ಪರನಿಂದೆಗಳಿಲ್ಲ
ನಾನೀನೆಂಬ ಬೇಧಗಳಿಲ್ಲ
ನಿನ್ನೆಯ ಹಳಹಳಿಕೆಗಳಿಲ್ಲ
ನಾಳೆಯ ಹಳವಂಡಗಳಿಲ್ಲ
ಅದು ನಿರಾಳದಾಗಸದ ಪ್ರಶಾಂತತಾಣ

ಹಾರಲರಿಯದ ನಮ್ಮ ರೆಕ್ಕೆಗಳಿಗೆ
ಬಲವೂ ಬೇಕು, ಛಲವೂ ಬೇಕು
ಸುಳ್ಳಿನಾವರಣಗಳಿಂದ
ಬಿಡಿಸಿಕೊಳುವ ಶ್ರದ್ಧೆ ಬೇಕು
‘ನಿನ್ನ ಸ್ವಾತಂತ್ರ್ಯದಿ ನೀನಿರು ಮಗು’
ಎನುವ ಗುರು ವಾಕ್ಯದ ಸೂಚನೆಯಲಿ
ಬಿಡುಗಡೆಯ ದಾರಿ ಕಾಣಬೇಕು
ರೆಕ್ಕೆಗಳ ಬಿಚ್ಚಿ ಚಿಮ್ಮಬೇಕು.

Previous post ಗುಟುಕು ಆಸೆ…
ಗುಟುಕು ಆಸೆ…
Next post ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…

Related Posts

ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...
ಹುಲಿ ಸವಾರಿ…
Share:
Poems

ಹುಲಿ ಸವಾರಿ…

June 10, 2023 ಜ್ಯೋತಿಲಿಂಗಪ್ಪ
ಖಾಲೀ… ಇರುವೆಯಲ್ಲಾ ಏನಾದರೂ ನೋಡು ಕಣ್ಣು ತುಂಬಿದೆ ನೋಡಲೇನುಂಟು ನೋಡದು ಏನಾದರೂ ಕೇಳು ಕಿವಿ ತುಂಬಿದೆ ಕೇಳಲೇನುಂಟು ಕೇಳದು ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ...

Comments 2

  1. ಶ್ರದ್ಧಾನಂದ ಸ್ವಾಮೀಜಿ, ವಿಜಯಪುರ
    May 9, 2024 Reply

    ರೆಕ್ಕೆ ಬಿಚ್ಚಿ ಕವನ ಓದುವುದರಲ್ಲಿ ಅನಂತ ಆಗಸದಿ ಹೊಸ ಬೆಳಕಿನ ಅರಿವಿನ ರವಿಯ ಕಂಡಂತೆ ಆಯಿತು.

  2. Padmalaya
    May 16, 2024 Reply

    ಭಾಷೆ ಇನ್ನೂ ಸ್ವಲ್ಪ ಬದಲಾದರೆ ಚೆಂದ.ನಿರೂಪಣೆ ಮಾಡುವಾಗ ಎಚ್ಚರವಾಗಿರಬೇಕಕಮ್ಮ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ಗಣಾಚಾರ
ಗಣಾಚಾರ
August 8, 2021
ದೇಹ ದೇವಾಲಯ
ದೇಹ ದೇವಾಲಯ
June 12, 2025
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
Copyright © 2025 Bayalu