Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ರೆಕ್ಕೆ ಬಿಚ್ಚಿ…
Share:
Poems May 8, 2024 ಕೆ.ಆರ್ ಮಂಗಳಾ

ರೆಕ್ಕೆ ಬಿಚ್ಚಿ…

‘ವರ್ಚ್ಯುವಲ್ ವರ್ಲ್ಡ್’ ಎನುವುದು
ಕಂಪ್ಯೂಟರ್ ಯುಗದ ಕೂಸಲ್ಲ ಸ್ವಾಮಿ…
ಅದರದು ಅನಾದಿ ಇತಿಹಾಸ
ಸರ್ವವ್ಯಾಪಿ, ಸರ್ವಶಕ್ತ ಸ್ವರೂಪಿ
ಸೂರ್ಯನ ಸುತ್ತ ಭೂಮಿ ಸುತ್ತಿದರೆ
ಇದರ ಕಿರುಬೆರಳಲ್ಲೇ
ಜಗ ಗಿರಕಿ ಹೊಡೆಯುತಿದೆ

ಹೇಗೆನ್ನುವಿರಾ?
ಗಮನವಿಟ್ಟು ಆಲಿಸಿ-

ಹುಟ್ಟಿ ಕಣ್ಣುಬಿಡುವ ಜೀವಕೆ
ನೆಲದ ನಂಟೇ ಸಿಗದಂತೆ
ಸುತ್ತುವವು ಜೋಡಿ ಸರಗಂಟು
ಹೆಸರು- ಮನೆತನ, ಗಂಡು- ಹೆಣ್ಣು,
ಗಳಿಗೆ- ನಕ್ಷತ್ರ, ಜಾತಿ- ವಿಜಾತಿ,
ನಮ್ಮವರು- ತಮ್ಮವರು, ಸರಿ- ತಪ್ಪು,
ಗೌರವ- ಅಭಿಮಾನಗಳ ಸ್ಥಾನಮಾನ
ಗೆಲುವು- ಸೋಲುಗಳ ಜಿದ್ದಾಜಿದ್ದಿ…

ಬೆಳೆಯುತ್ತಾ ಹೋದಂತೆ ಕಾಲಿಗೂ,ಕೈಗೂ,
ಇನ್ನಷ್ಟು ಸರಪಳಿಗಳ ಸರಮಾಲೆ
ಸುಖ-ಸವಲತ್ತುಗಳ ಹಂಬಲ,
ಕೂಡಿಗುಡ್ಡೆ ಹಾಕುವ ತೆವಲು
ಹಂಚಿಕೊಳ್ಳಲೊಪ್ಪದ ಜಿಗುಟು
ಜ್ಞಾನಿ ಎನಿಸಿಕೊಳುವ ಬಯಕೆ
ನಾಮುಂದು ತಾಮುಂದು ಎನುವ
ಮದ-ಮತ್ಸರಗಳ ಬಡಿವಾರ…

ಈ ನಡುವೆ ದೈವ ಭಕ್ತಿಯ ಸೋಗು
ಅರ್ಚನೆ- ಪೂಜೆ- ಆರಾಧನೆಗಳು
ವ್ರತ- ನೇಮ- ಉಪವಾಸಗಳು
ತೀರ್ಥಕ್ಷೇತ್ರ ಪುಣ್ಯಸ್ನಾನಗಳು
ಜಪ- ತಪ, ಯೋಗ- ಧ್ಯಾನಗಳು
ಕುಂಡಲಿನಿ ಜಾಗೃತಿಯ ಸರ್ಕಸ್ಸುಗಳು
ಚಕ್ರಗಳು, ಮಂಡಲಗಳು
ಶಾಸ್ತ್ರ ಪುರಾಣಗಳ ತಾಕೀತುಗಳು
ಧರ್ಮ– ಸಂಸ್ಕೃತಿಯ ಹೇರಿಕೆಗಳು
ಸಂಪ್ರದಾಯದ ಕಟ್ಟುಪಾಡುಗಳು…

ಸತ್ತವರಿಂದ, ಹೆತ್ತವರಿಂದ,
ನೆಂಟರಿಂದ, ನೆರೆಯವರಿಂದ,
ಶಾಲೆಯಿಂದ, ಓಣಿಗಳಿಂದ,
ಊರವರಿಂದ, ನಾಡವರಿಂದ,
ನೆನಪುಗಳಿಂದ, ನಂಬಿಕೆಗಳಿಂದ,
ತಲೆ ತಲೆಗೂ ಸಾಗಿಬಂದ
ಪಿತ್ರಾರ್ಜಿತ ಬಳುವಳಿಗಳಿವು…

ಈ ಅನಂತ ಆವರಣಗಳ
ಬಂಧವೇ ‘ವರ್ಚ್ಯುವಲ್ ರಿಯಾಲಿಟಿ’
ಇರುವಂತೇ ತೋರುತಿರುವ
ನಿಜವೆಂದೇ ನಂಬಿಸಿರುವ
ನಾವಪ್ಪಿ ಜೀವಿಸುವ ಮನೋಲೋಕ,
ಕಣ್ಣಿಗೆ ಕಾಣದ, ಮುಟ್ಟಲು ಸಿಗದ
‘ವರ್ಚ್ಯುವಲ್ ರಿಯಾಲಿಟಿ’
ವಸ್ತುಜಗತ್ತಿನ ನೆಲೆಯರಿಯದ
ಈ ಭ್ರಮೆಗಳಿಗೆಲ್ಲ ಜೀತಕಿದ್ದು
ದಿನರಾತ್ರಿ ಸೆಣಸಾಡಿ, ತೆವಳಿದ್ದೇ ಬಂತು
ರೆಕ್ಕೆಗಳು ಇರುವುದೇ ಮರೆತು ಹೋಗಿತ್ತು
ಜೊತೆಯಲೇ ಪ್ರಾಣಾಧಾರವಾಗಿದ್ದ
‘ರಿಯಲ್ ವರ್ಲ್ಡ್’ ಕಾಣದಾಗಿತ್ತು…

ಸಂತರು ತೋರಿದ, ಶರಣರು ಬದುಕಿದ
ಮಹಂತರು ಕಂಡ ನಿಜದ ನೆಲೆಯಲ್ಲಿ
ನಿರೀಕ್ಷೆಗಳಿಲ್ಲ, ನೋವುಗಳಿಲ್ಲ
ಬೇಕು-ಬೇಡಗಳ ಸುಳಿಗಳಿಲ್ಲ
ಸಂದೇಹಗಳಿಲ್ಲ, ಸಂಕುಚಿತತೆಯಿಲ್ಲ
ಪೂರ್ವಾಗ್ರಹಗಳಿಲ್ಲ, ಪರನಿಂದೆಗಳಿಲ್ಲ
ನಾನೀನೆಂಬ ಬೇಧಗಳಿಲ್ಲ
ನಿನ್ನೆಯ ಹಳಹಳಿಕೆಗಳಿಲ್ಲ
ನಾಳೆಯ ಹಳವಂಡಗಳಿಲ್ಲ
ಅದು ನಿರಾಳದಾಗಸದ ಪ್ರಶಾಂತತಾಣ

ಹಾರಲರಿಯದ ನಮ್ಮ ರೆಕ್ಕೆಗಳಿಗೆ
ಬಲವೂ ಬೇಕು, ಛಲವೂ ಬೇಕು
ಸುಳ್ಳಿನಾವರಣಗಳಿಂದ
ಬಿಡಿಸಿಕೊಳುವ ಶ್ರದ್ಧೆ ಬೇಕು
‘ನಿನ್ನ ಸ್ವಾತಂತ್ರ್ಯದಿ ನೀನಿರು ಮಗು’
ಎನುವ ಗುರು ವಾಕ್ಯದ ಸೂಚನೆಯಲಿ
ಬಿಡುಗಡೆಯ ದಾರಿ ಕಾಣಬೇಕು
ರೆಕ್ಕೆಗಳ ಬಿಚ್ಚಿ ಚಿಮ್ಮಬೇಕು.

Previous post ಗುಟುಕು ಆಸೆ…
ಗುಟುಕು ಆಸೆ…
Next post ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…

Related Posts

ನನ್ನನ್ನು ಕ್ಷಮಿಸು
Share:
Poems

ನನ್ನನ್ನು ಕ್ಷಮಿಸು

April 5, 2026 ಜ್ಯೋತಿಲಿಂಗಪ್ಪ
ಆಸೆಗಳಿರಲು ಆತಂಕ ನಿಲ್ಲದು ಆಯುಷ್ಯ ಇಳಿಯುವಾಗ ಆಯುಷ್ಯ ರೇಖೆಯ ಹುಡುಗಾಟ ಹುಟ್ಟಿದರೆ ಸಾವು ಹುಟ್ಟದಿರೆ ಸಾವಿಲ್ಲ ಸಾವಿಗೇನು ಕೇಡೇ… ಸಂತೆಯ ಸದ್ದಿನಲಿ ಸಂತನಾಗುವೆಯಾದರೆ...
ಮಣ್ಣು ಮೆಟ್ಟಿದ ದಾರಿ
Share:
Poems

ಮಣ್ಣು ಮೆಟ್ಟಿದ ದಾರಿ

October 5, 2021 ಜ್ಯೋತಿಲಿಂಗಪ್ಪ
ಈ ಸಿಟ್ಟು ದ್ವೇಷ ಪ್ರೇಮ ಕಾಮ ಮದ… ಎಲ್ಲಾ ನಾನು ಹೊತ್ತು ಹೋಗುವನೇ… ಈ ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ ಇದೆಲ್ಲಾ ಮಣ್ಣಾಗುವುದು ಇದ್ದೇ ಇದೆ ನಾನು ಮಣ್ಣಾಗುವ...

Comments 2

  1. ಶ್ರದ್ಧಾನಂದ ಸ್ವಾಮೀಜಿ, ವಿಜಯಪುರ
    May 9, 2024 Reply

    ರೆಕ್ಕೆ ಬಿಚ್ಚಿ ಕವನ ಓದುವುದರಲ್ಲಿ ಅನಂತ ಆಗಸದಿ ಹೊಸ ಬೆಳಕಿನ ಅರಿವಿನ ರವಿಯ ಕಂಡಂತೆ ಆಯಿತು.

  2. Padmalaya
    May 16, 2024 Reply

    ಭಾಷೆ ಇನ್ನೂ ಸ್ವಲ್ಪ ಬದಲಾದರೆ ಚೆಂದ.ನಿರೂಪಣೆ ಮಾಡುವಾಗ ಎಚ್ಚರವಾಗಿರಬೇಕಕಮ್ಮ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಿವಾಚಾರ
ಶಿವಾಚಾರ
April 9, 2021
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
July 10, 2025
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ಹುಲಿ ಸವಾರಿ…
ಹುಲಿ ಸವಾರಿ…
June 10, 2023
ಕಲಿಸು ಗುರುವೆ…
ಕಲಿಸು ಗುರುವೆ…
July 10, 2025
ನಿನ್ನೆ-ಇಂದು
ನಿನ್ನೆ-ಇಂದು
May 10, 2022
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
Copyright © 2026 Bayalu