Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ರೆಕ್ಕೆ ಬಿಚ್ಚಿ…
Share:
Poems May 8, 2024 ಕೆ.ಆರ್ ಮಂಗಳಾ

ರೆಕ್ಕೆ ಬಿಚ್ಚಿ…

‘ವರ್ಚ್ಯುವಲ್ ವರ್ಲ್ಡ್’ ಎನುವುದು
ಕಂಪ್ಯೂಟರ್ ಯುಗದ ಕೂಸಲ್ಲ ಸ್ವಾಮಿ…
ಅದರದು ಅನಾದಿ ಇತಿಹಾಸ
ಸರ್ವವ್ಯಾಪಿ, ಸರ್ವಶಕ್ತ ಸ್ವರೂಪಿ
ಸೂರ್ಯನ ಸುತ್ತ ಭೂಮಿ ಸುತ್ತಿದರೆ
ಇದರ ಕಿರುಬೆರಳಲ್ಲೇ
ಜಗ ಗಿರಕಿ ಹೊಡೆಯುತಿದೆ

ಹೇಗೆನ್ನುವಿರಾ?
ಗಮನವಿಟ್ಟು ಆಲಿಸಿ-

ಹುಟ್ಟಿ ಕಣ್ಣುಬಿಡುವ ಜೀವಕೆ
ನೆಲದ ನಂಟೇ ಸಿಗದಂತೆ
ಸುತ್ತುವವು ಜೋಡಿ ಸರಗಂಟು
ಹೆಸರು- ಮನೆತನ, ಗಂಡು- ಹೆಣ್ಣು,
ಗಳಿಗೆ- ನಕ್ಷತ್ರ, ಜಾತಿ- ವಿಜಾತಿ,
ನಮ್ಮವರು- ತಮ್ಮವರು, ಸರಿ- ತಪ್ಪು,
ಗೌರವ- ಅಭಿಮಾನಗಳ ಸ್ಥಾನಮಾನ
ಗೆಲುವು- ಸೋಲುಗಳ ಜಿದ್ದಾಜಿದ್ದಿ…

ಬೆಳೆಯುತ್ತಾ ಹೋದಂತೆ ಕಾಲಿಗೂ,ಕೈಗೂ,
ಇನ್ನಷ್ಟು ಸರಪಳಿಗಳ ಸರಮಾಲೆ
ಸುಖ-ಸವಲತ್ತುಗಳ ಹಂಬಲ,
ಕೂಡಿಗುಡ್ಡೆ ಹಾಕುವ ತೆವಲು
ಹಂಚಿಕೊಳ್ಳಲೊಪ್ಪದ ಜಿಗುಟು
ಜ್ಞಾನಿ ಎನಿಸಿಕೊಳುವ ಬಯಕೆ
ನಾಮುಂದು ತಾಮುಂದು ಎನುವ
ಮದ-ಮತ್ಸರಗಳ ಬಡಿವಾರ…

ಈ ನಡುವೆ ದೈವ ಭಕ್ತಿಯ ಸೋಗು
ಅರ್ಚನೆ- ಪೂಜೆ- ಆರಾಧನೆಗಳು
ವ್ರತ- ನೇಮ- ಉಪವಾಸಗಳು
ತೀರ್ಥಕ್ಷೇತ್ರ ಪುಣ್ಯಸ್ನಾನಗಳು
ಜಪ- ತಪ, ಯೋಗ- ಧ್ಯಾನಗಳು
ಕುಂಡಲಿನಿ ಜಾಗೃತಿಯ ಸರ್ಕಸ್ಸುಗಳು
ಚಕ್ರಗಳು, ಮಂಡಲಗಳು
ಶಾಸ್ತ್ರ ಪುರಾಣಗಳ ತಾಕೀತುಗಳು
ಧರ್ಮ– ಸಂಸ್ಕೃತಿಯ ಹೇರಿಕೆಗಳು
ಸಂಪ್ರದಾಯದ ಕಟ್ಟುಪಾಡುಗಳು…

ಸತ್ತವರಿಂದ, ಹೆತ್ತವರಿಂದ,
ನೆಂಟರಿಂದ, ನೆರೆಯವರಿಂದ,
ಶಾಲೆಯಿಂದ, ಓಣಿಗಳಿಂದ,
ಊರವರಿಂದ, ನಾಡವರಿಂದ,
ನೆನಪುಗಳಿಂದ, ನಂಬಿಕೆಗಳಿಂದ,
ತಲೆ ತಲೆಗೂ ಸಾಗಿಬಂದ
ಪಿತ್ರಾರ್ಜಿತ ಬಳುವಳಿಗಳಿವು…

ಈ ಅನಂತ ಆವರಣಗಳ
ಬಂಧವೇ ‘ವರ್ಚ್ಯುವಲ್ ರಿಯಾಲಿಟಿ’
ಇರುವಂತೇ ತೋರುತಿರುವ
ನಿಜವೆಂದೇ ನಂಬಿಸಿರುವ
ನಾವಪ್ಪಿ ಜೀವಿಸುವ ಮನೋಲೋಕ,
ಕಣ್ಣಿಗೆ ಕಾಣದ, ಮುಟ್ಟಲು ಸಿಗದ
‘ವರ್ಚ್ಯುವಲ್ ರಿಯಾಲಿಟಿ’
ವಸ್ತುಜಗತ್ತಿನ ನೆಲೆಯರಿಯದ
ಈ ಭ್ರಮೆಗಳಿಗೆಲ್ಲ ಜೀತಕಿದ್ದು
ದಿನರಾತ್ರಿ ಸೆಣಸಾಡಿ, ತೆವಳಿದ್ದೇ ಬಂತು
ರೆಕ್ಕೆಗಳು ಇರುವುದೇ ಮರೆತು ಹೋಗಿತ್ತು
ಜೊತೆಯಲೇ ಪ್ರಾಣಾಧಾರವಾಗಿದ್ದ
‘ರಿಯಲ್ ವರ್ಲ್ಡ್’ ಕಾಣದಾಗಿತ್ತು…

ಸಂತರು ತೋರಿದ, ಶರಣರು ಬದುಕಿದ
ಮಹಂತರು ಕಂಡ ನಿಜದ ನೆಲೆಯಲ್ಲಿ
ನಿರೀಕ್ಷೆಗಳಿಲ್ಲ, ನೋವುಗಳಿಲ್ಲ
ಬೇಕು-ಬೇಡಗಳ ಸುಳಿಗಳಿಲ್ಲ
ಸಂದೇಹಗಳಿಲ್ಲ, ಸಂಕುಚಿತತೆಯಿಲ್ಲ
ಪೂರ್ವಾಗ್ರಹಗಳಿಲ್ಲ, ಪರನಿಂದೆಗಳಿಲ್ಲ
ನಾನೀನೆಂಬ ಬೇಧಗಳಿಲ್ಲ
ನಿನ್ನೆಯ ಹಳಹಳಿಕೆಗಳಿಲ್ಲ
ನಾಳೆಯ ಹಳವಂಡಗಳಿಲ್ಲ
ಅದು ನಿರಾಳದಾಗಸದ ಪ್ರಶಾಂತತಾಣ

ಹಾರಲರಿಯದ ನಮ್ಮ ರೆಕ್ಕೆಗಳಿಗೆ
ಬಲವೂ ಬೇಕು, ಛಲವೂ ಬೇಕು
ಸುಳ್ಳಿನಾವರಣಗಳಿಂದ
ಬಿಡಿಸಿಕೊಳುವ ಶ್ರದ್ಧೆ ಬೇಕು
‘ನಿನ್ನ ಸ್ವಾತಂತ್ರ್ಯದಿ ನೀನಿರು ಮಗು’
ಎನುವ ಗುರು ವಾಕ್ಯದ ಸೂಚನೆಯಲಿ
ಬಿಡುಗಡೆಯ ದಾರಿ ಕಾಣಬೇಕು
ರೆಕ್ಕೆಗಳ ಬಿಚ್ಚಿ ಚಿಮ್ಮಬೇಕು.

Previous post ಗುಟುಕು ಆಸೆ…
ಗುಟುಕು ಆಸೆ…
Next post ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…

Related Posts

ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...
ಗಾಳಿ ಬುರುಡೆ
Share:
Poems

ಗಾಳಿ ಬುರುಡೆ

June 17, 2020 ಪದ್ಮಾಲಯ ನಾಗರಾಜ್
ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು ಗಾಳಿಗೆ ತೂರ್ಹೋಗಬೇಡಾ //ನಂಬಿ// ಚಿತ್ರಾ...

Comments 2

  1. ಶ್ರದ್ಧಾನಂದ ಸ್ವಾಮೀಜಿ, ವಿಜಯಪುರ
    May 9, 2024 Reply

    ರೆಕ್ಕೆ ಬಿಚ್ಚಿ ಕವನ ಓದುವುದರಲ್ಲಿ ಅನಂತ ಆಗಸದಿ ಹೊಸ ಬೆಳಕಿನ ಅರಿವಿನ ರವಿಯ ಕಂಡಂತೆ ಆಯಿತು.

  2. Padmalaya
    May 16, 2024 Reply

    ಭಾಷೆ ಇನ್ನೂ ಸ್ವಲ್ಪ ಬದಲಾದರೆ ಚೆಂದ.ನಿರೂಪಣೆ ಮಾಡುವಾಗ ಎಚ್ಚರವಾಗಿರಬೇಕಕಮ್ಮ

Leave a Reply to Padmalaya Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
September 4, 2018
ಪೊರೆವ ದನಿ…
ಪೊರೆವ ದನಿ…
August 11, 2025
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ಮಾತು ಮಾಯೆ
ಮಾತು ಮಾಯೆ
July 4, 2021
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ದಡ ಸೋಂಕದ ಅಲೆಗಳು
ದಡ ಸೋಂಕದ ಅಲೆಗಳು
July 10, 2025
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
Copyright © 2026 Bayalu