Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ವರದಿ ಕೊಡಬೇಕಿದೆ
Share:
Poems March 17, 2021 ಕೆ.ಆರ್ ಮಂಗಳಾ

ವರದಿ ಕೊಡಬೇಕಿದೆ

ತನುವ ಭೇದಿಸಿ, ಮನವ ಶೋಧಿಸಿ
ವರದಿ ಕೊಡಲು ಅಟ್ಟಿದ್ದಾನೆ ಗುರು
ನನ್ನೊಳಗೆ ನನ್ನ…

ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ
ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ
ಎಲ್ಲೋ ಓದಿದ್ದನ್ನು, ಯಾರೋ ಹೇಳಿದ್ದನ್ನು
ನಕಲು ಮಾಡಿ ಒಪ್ಪಿಸುವಂತೆಯೂ ಇಲ್ಲ…
ಆಸೆಗಳ ಮೊಗೆತ, ಭಾವಗಳ ರಭಸ
ಕಲ್ಪಿತಗಳ ನೆಗೆತ, ವಿಚಾರಗಳ ಓಟ
ಏನ ಹಿಡಿಯಲಿ, ಎಲ್ಲಿ ಕೆದಕಲಿ?
ಪಾಚಿ ಇದೆ, ಸೆಳೆತ ಇದೆ
ಮರೆವಿನ ಜಾಲಗಳಿವೆ, ಅಪರಿಚಿತ ಜಾಗಗಳಿವೆ
ದಾರಿ ತಪ್ಪಿಸುವ ಕತ್ತಲಿದೆ…

ಹೊರ ಸುದ್ದಿಗಳನು ವರದಿ ಮಾಡಿ
ಅಭ್ಯಾಸವಾದವಳಿಗೆ
ಮನವ ನೋಡುವುದು,
ಅಂತರಂಗದ ಸಮಾಚಾರ ಬರೆವುದು
ಇಷ್ಟು ಸವಾಲಿನದೆಂದು ತಿಳಿದಿರಲೇ ಇಲ್ಲ…
ಕಂಗಾಲಾಗಿ ಕೂರುವಂತಿಲ್ಲ
ಗಡುವು ಮೀರುವಂತಿಲ್ಲ
ಗುರು ಕೊಟ್ಟ ಕಂದೀಲು ಹಿಡಿದು
ಒಳಗಡಿ ಇಟ್ಟಾಗಿದೆ…
ಒಂದೊಂದನೆ ಎತ್ತಿ, ಬಗೆಬಗೆದು ನೋಡಿ
ಹಿಂದು-ಮುಂದಿನ ತಂತುಗಳ ಹುಡುಕಿ
ವರದಿ ಕೊಡಬೇಕಿದೆ ಗುರುವಿಗೆ ವರದಿ ಕೊಡಬೇಕಿದೆ…

Previous post ಬಯಲಾಟ
ಬಯಲಾಟ
Next post ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು

Related Posts

ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...
ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...

Comments 1

  1. Vinay Bengaluru
    Mar 20, 2021 Reply

    ಯಾವ ಗುರುವಿಗೆ ವರದಿ ಕೊಡಬೇಕು ಅಕ್ಕಾ? ಹಾಗೆ ವರದಿ ಕೇಳಿದ ಗುರು ಯಾರು?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
ನೆಮ್ಮದಿ
ನೆಮ್ಮದಿ
April 6, 2020
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
Copyright © 2026 Bayalu