Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ವರದಿ ಕೊಡಬೇಕಿದೆ
Share:
Poems March 17, 2021 ಕೆ.ಆರ್ ಮಂಗಳಾ

ವರದಿ ಕೊಡಬೇಕಿದೆ

ತನುವ ಭೇದಿಸಿ, ಮನವ ಶೋಧಿಸಿ
ವರದಿ ಕೊಡಲು ಅಟ್ಟಿದ್ದಾನೆ ಗುರು
ನನ್ನೊಳಗೆ ನನ್ನ…

ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ
ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ
ಎಲ್ಲೋ ಓದಿದ್ದನ್ನು, ಯಾರೋ ಹೇಳಿದ್ದನ್ನು
ನಕಲು ಮಾಡಿ ಒಪ್ಪಿಸುವಂತೆಯೂ ಇಲ್ಲ…
ಆಸೆಗಳ ಮೊಗೆತ, ಭಾವಗಳ ರಭಸ
ಕಲ್ಪಿತಗಳ ನೆಗೆತ, ವಿಚಾರಗಳ ಓಟ
ಏನ ಹಿಡಿಯಲಿ, ಎಲ್ಲಿ ಕೆದಕಲಿ?
ಪಾಚಿ ಇದೆ, ಸೆಳೆತ ಇದೆ
ಮರೆವಿನ ಜಾಲಗಳಿವೆ, ಅಪರಿಚಿತ ಜಾಗಗಳಿವೆ
ದಾರಿ ತಪ್ಪಿಸುವ ಕತ್ತಲಿದೆ…

ಹೊರ ಸುದ್ದಿಗಳನು ವರದಿ ಮಾಡಿ
ಅಭ್ಯಾಸವಾದವಳಿಗೆ
ಮನವ ನೋಡುವುದು,
ಅಂತರಂಗದ ಸಮಾಚಾರ ಬರೆವುದು
ಇಷ್ಟು ಸವಾಲಿನದೆಂದು ತಿಳಿದಿರಲೇ ಇಲ್ಲ…
ಕಂಗಾಲಾಗಿ ಕೂರುವಂತಿಲ್ಲ
ಗಡುವು ಮೀರುವಂತಿಲ್ಲ
ಗುರು ಕೊಟ್ಟ ಕಂದೀಲು ಹಿಡಿದು
ಒಳಗಡಿ ಇಟ್ಟಾಗಿದೆ…
ಒಂದೊಂದನೆ ಎತ್ತಿ, ಬಗೆಬಗೆದು ನೋಡಿ
ಹಿಂದು-ಮುಂದಿನ ತಂತುಗಳ ಹುಡುಕಿ
ವರದಿ ಕೊಡಬೇಕಿದೆ ಗುರುವಿಗೆ ವರದಿ ಕೊಡಬೇಕಿದೆ…

Previous post ಬಯಲಾಟ
ಬಯಲಾಟ
Next post ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು

Related Posts

ಗುರುವೆಂಬೋ ಬೆಳಗು…
Share:
Poems

ಗುರುವೆಂಬೋ ಬೆಳಗು…

February 6, 2025 ಕೆ.ಆರ್ ಮಂಗಳಾ
ಒಳಗಿರುವುದೆಲ್ಲವೂ ಕೂಡಿಸಿಟ್ಟುಕೊಂಡದ್ದೇ ಬುದ್ಧಿ ಬಲಿತಾಗಿನಿಂದ ಗೊತ್ತಿದ್ದೋ… ಇಲ್ಲದೆಯೋ ನನಗೆ ನೆನಪಿದೆ ಕಂಡದ್ದು ಉಂಡದ್ದು ಮುಟ್ಟಿದ್ದು ಮೂಸಿದ್ದು ತಟ್ಟಿದ್ದು ಸೆಳೆದದ್ದು...
ನಿನ್ನೆ-ಇಂದು
Share:
Poems

ನಿನ್ನೆ-ಇಂದು

May 10, 2022 ಕೆ.ಆರ್ ಮಂಗಳಾ
ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...

Comments 1

  1. Vinay Bengaluru
    Mar 20, 2021 Reply

    ಯಾವ ಗುರುವಿಗೆ ವರದಿ ಕೊಡಬೇಕು ಅಕ್ಕಾ? ಹಾಗೆ ವರದಿ ಕೇಳಿದ ಗುರು ಯಾರು?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಅನಿಮಿಷನ ಕಥೆ- 6
ಅನಿಮಿಷನ ಕಥೆ- 6
April 11, 2025
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಅನುಭವ ಮಂಟಪ
ಅನುಭವ ಮಂಟಪ
April 11, 2025
ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ
October 19, 2025
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
Copyright © 2026 Bayalu