Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ವರದಿ ಕೊಡಬೇಕಿದೆ
Share:
Poems March 17, 2021 ಕೆ.ಆರ್ ಮಂಗಳಾ

ವರದಿ ಕೊಡಬೇಕಿದೆ

ತನುವ ಭೇದಿಸಿ, ಮನವ ಶೋಧಿಸಿ
ವರದಿ ಕೊಡಲು ಅಟ್ಟಿದ್ದಾನೆ ಗುರು
ನನ್ನೊಳಗೆ ನನ್ನ…

ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ
ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ
ಎಲ್ಲೋ ಓದಿದ್ದನ್ನು, ಯಾರೋ ಹೇಳಿದ್ದನ್ನು
ನಕಲು ಮಾಡಿ ಒಪ್ಪಿಸುವಂತೆಯೂ ಇಲ್ಲ…
ಆಸೆಗಳ ಮೊಗೆತ, ಭಾವಗಳ ರಭಸ
ಕಲ್ಪಿತಗಳ ನೆಗೆತ, ವಿಚಾರಗಳ ಓಟ
ಏನ ಹಿಡಿಯಲಿ, ಎಲ್ಲಿ ಕೆದಕಲಿ?
ಪಾಚಿ ಇದೆ, ಸೆಳೆತ ಇದೆ
ಮರೆವಿನ ಜಾಲಗಳಿವೆ, ಅಪರಿಚಿತ ಜಾಗಗಳಿವೆ
ದಾರಿ ತಪ್ಪಿಸುವ ಕತ್ತಲಿದೆ…

ಹೊರ ಸುದ್ದಿಗಳನು ವರದಿ ಮಾಡಿ
ಅಭ್ಯಾಸವಾದವಳಿಗೆ
ಮನವ ನೋಡುವುದು,
ಅಂತರಂಗದ ಸಮಾಚಾರ ಬರೆವುದು
ಇಷ್ಟು ಸವಾಲಿನದೆಂದು ತಿಳಿದಿರಲೇ ಇಲ್ಲ…
ಕಂಗಾಲಾಗಿ ಕೂರುವಂತಿಲ್ಲ
ಗಡುವು ಮೀರುವಂತಿಲ್ಲ
ಗುರು ಕೊಟ್ಟ ಕಂದೀಲು ಹಿಡಿದು
ಒಳಗಡಿ ಇಟ್ಟಾಗಿದೆ…
ಒಂದೊಂದನೆ ಎತ್ತಿ, ಬಗೆಬಗೆದು ನೋಡಿ
ಹಿಂದು-ಮುಂದಿನ ತಂತುಗಳ ಹುಡುಕಿ
ವರದಿ ಕೊಡಬೇಕಿದೆ ಗುರುವಿಗೆ ವರದಿ ಕೊಡಬೇಕಿದೆ…

Previous post ಬಯಲಾಟ
ಬಯಲಾಟ
Next post ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು

Related Posts

ಅರ್ಥ – ವ್ಯರ್ಥ
Share:
Poems

ಅರ್ಥ – ವ್ಯರ್ಥ

April 5, 2026 ಜಬೀವುಲ್ಲಾ ಎಂ.ಅಸದ್
ಮುಗಿಲಿಗೆ ಜಿಗಿದ ಪಾದ ಮಸ್ತಕದ ಕಂದಕದಲ್ಲಿ ಚಿಗುರಿ ಶತಮಾನಗಳ ಮೊಳೆ ಹೊಡೆದ ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು ಕಾಲದ ಸಹಿಯಾಗಿ ಬದಲಾಗಿ ಉಸಿರ ಗೊರಿಯೊಳಗೆ ಬೆರೆತು ಹೆಜ್ಜೆ...
ಗ್ರಹಣ
Share:
Poems

ಗ್ರಹಣ

December 9, 2025 ಡಾ. ಪಂಚಾಕ್ಷರಿ ಹಳೇಬೀಡು
ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...

Comments 1

  1. Vinay Bengaluru
    Mar 20, 2021 Reply

    ಯಾವ ಗುರುವಿಗೆ ವರದಿ ಕೊಡಬೇಕು ಅಕ್ಕಾ? ಹಾಗೆ ವರದಿ ಕೇಳಿದ ಗುರು ಯಾರು?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
April 29, 2018
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ವಚನ – ಸಾಂಸ್ಕೃತಿಕ ತಲ್ಲಣಗಳು
ವಚನ – ಸಾಂಸ್ಕೃತಿಕ ತಲ್ಲಣಗಳು
November 1, 2018
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
September 14, 2024
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ
April 29, 2018
ಮನಸ್ಸು
ಮನಸ್ಸು
September 7, 2020
ಗುಟುಕು ಆಸೆ…
ಗುಟುಕು ಆಸೆ…
May 8, 2024
Copyright © 2026 Bayalu