Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ವರದಿ ಕೊಡಬೇಕಿದೆ
Share:
Poems March 17, 2021 ಕೆ.ಆರ್ ಮಂಗಳಾ

ವರದಿ ಕೊಡಬೇಕಿದೆ

ತನುವ ಭೇದಿಸಿ, ಮನವ ಶೋಧಿಸಿ
ವರದಿ ಕೊಡಲು ಅಟ್ಟಿದ್ದಾನೆ ಗುರು
ನನ್ನೊಳಗೆ ನನ್ನ…

ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ
ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ
ಎಲ್ಲೋ ಓದಿದ್ದನ್ನು, ಯಾರೋ ಹೇಳಿದ್ದನ್ನು
ನಕಲು ಮಾಡಿ ಒಪ್ಪಿಸುವಂತೆಯೂ ಇಲ್ಲ…
ಆಸೆಗಳ ಮೊಗೆತ, ಭಾವಗಳ ರಭಸ
ಕಲ್ಪಿತಗಳ ನೆಗೆತ, ವಿಚಾರಗಳ ಓಟ
ಏನ ಹಿಡಿಯಲಿ, ಎಲ್ಲಿ ಕೆದಕಲಿ?
ಪಾಚಿ ಇದೆ, ಸೆಳೆತ ಇದೆ
ಮರೆವಿನ ಜಾಲಗಳಿವೆ, ಅಪರಿಚಿತ ಜಾಗಗಳಿವೆ
ದಾರಿ ತಪ್ಪಿಸುವ ಕತ್ತಲಿದೆ…

ಹೊರ ಸುದ್ದಿಗಳನು ವರದಿ ಮಾಡಿ
ಅಭ್ಯಾಸವಾದವಳಿಗೆ
ಮನವ ನೋಡುವುದು,
ಅಂತರಂಗದ ಸಮಾಚಾರ ಬರೆವುದು
ಇಷ್ಟು ಸವಾಲಿನದೆಂದು ತಿಳಿದಿರಲೇ ಇಲ್ಲ…
ಕಂಗಾಲಾಗಿ ಕೂರುವಂತಿಲ್ಲ
ಗಡುವು ಮೀರುವಂತಿಲ್ಲ
ಗುರು ಕೊಟ್ಟ ಕಂದೀಲು ಹಿಡಿದು
ಒಳಗಡಿ ಇಟ್ಟಾಗಿದೆ…
ಒಂದೊಂದನೆ ಎತ್ತಿ, ಬಗೆಬಗೆದು ನೋಡಿ
ಹಿಂದು-ಮುಂದಿನ ತಂತುಗಳ ಹುಡುಕಿ
ವರದಿ ಕೊಡಬೇಕಿದೆ ಗುರುವಿಗೆ ವರದಿ ಕೊಡಬೇಕಿದೆ…

Previous post ಬಯಲಾಟ
ಬಯಲಾಟ
Next post ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು

Related Posts

ಮುಖ- ಮುಖವಾಡ
Share:
Poems

ಮುಖ- ಮುಖವಾಡ

February 7, 2021 ಕೆ.ಆರ್ ಮಂಗಳಾ
ಕಣ್ಣು-ಕೆನ್ನೆ-ಮೂಗು-ಕಿವಿಗಳನ್ನು ಕೈಯಿಂದ ತಡವಿಕೊಳ್ಳುತ್ತೇನೆ ಇದು ಮುಖವಾಡವೋ ಇಲ್ಲಾ ನನ್ನ ಮುಖವೋ? ಕನ್ನಡಿ ನೋಡುವಾಗೆಲ್ಲಾ ದಿಗಿಲಾಗುತ್ತದೆ ನಾನು ಅಂದುಕೊಂಡಿರುವಂತೆ...
ಶೂನ್ಯ ತುಂಬಿಕೊಂಡ ಬಿಂದಿಗೆ
Share:
Poems

ಶೂನ್ಯ ತುಂಬಿಕೊಂಡ ಬಿಂದಿಗೆ

September 6, 2026 ಜಬೀವುಲ್ಲಾ ಎಂ.ಅಸದ್
ಝೆನ್ ಹೇಳುತ್ತದೆ, ಹೀಗೆ… ನನಗೆ ಎಲ್ಲಾ ಗೊತ್ತಿದೆ ಎಂದರೆ ನಿನಗೆ ಏನೂ ಗೊತ್ತಿಲ್ಲ ಎಂದರ್ಥ ನನಗೇನೂ ಗೊತ್ತಿಲ್ಲ ಎಂದರೆ ಆಗಲೂ… ನಿನಗೆ ಏನೂ ಗೊತ್ತಿಲ್ಲವೆಂದೇ ಅರ್ಥ...

Comments 1

  1. Vinay Bengaluru
    Mar 20, 2021 Reply

    ಯಾವ ಗುರುವಿಗೆ ವರದಿ ಕೊಡಬೇಕು ಅಕ್ಕಾ? ಹಾಗೆ ವರದಿ ಕೇಳಿದ ಗುರು ಯಾರು?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಕಿನೆಡೆಗೆ…
ಬೆಳಕಿನೆಡೆಗೆ…
June 10, 2023
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ಮನಸ್ಸು
ಮನಸ್ಸು
September 7, 2020
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ಕಣ್ಣ ದೀಪ
ಕಣ್ಣ ದೀಪ
September 7, 2021
Copyright © 2026 Bayalu