Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಶಾಂತಿ
Share:
Poems April 11, 2025 Bayalu

ಶಾಂತಿ

ಪಯಣದ ಉಬ್ಬುತಗ್ಗು ಹಾದಿಯಲಿ,
ಗಂಧದ ಕಣವಾಗು ಬಯಲಲಿ,
ಸುಮದ ದಳವಾಗು ವನದಲಿ,
ಓ ಮನವೇ,
ಕಂದನ ಮುಗ್ದ ನಗುವಾಗು.| ೧ |

ಹರುಷ ದುಗುಡಗಳ ಮೇಳದಲಿ,
ಮಧುರ ನೆನಪುಗಳ ಹೊಳೆಯಾಗು,
ಹಾಡಾಗು ಕಾಡುವ ನೋವಿಗೆ,
ಓ ಮನವೇ,
ಬಾನಲಿ ಹಾರುವ ಹಕ್ಕಿಯಾಗು. | ೨ |

ಕಷ್ಟಸುಖಗಳು ಬೆರೆತ ಬದುಕಿನಲಿ,
ಚಿಂತನೆಯ ಮುನಿಯಾಗು ಗದ್ದಲದಲಿ,
ಹರಿವ ನದಿಯಾಗು ಹರುಷದಲಿ
ಓ ಮನವೇ,
ಕರುಣೆ ಮಮತೆಗಳ ಸೆಲೆಯಾಗು. | ೩ |

ನೇಸರನ ದಿಗಂತದಂಚಿನ ಪಥದಲಿ,
ಮುಪ್ಪುದೇಹ ಕೊನೆ ಕೋರಿದಂದು,
ಮುಕ್ತನಾಗು ತುಂಬು ಹೃದಯದಲಿ,
ಓ ಮನವೇ,
ಪರಮ ಶಾಂತಿಯ ನೆಲೆಯಾಗು. | ೪ |

-ಅಂಬಳೆ ನಾಗ
(ರವೀಂದ್ರನಾಥ್ ಟಾಗೋರ್ ಅವರ ಕವಿತೆಯಿಂದ ಸ್ಫೂರ್ತಿ ಪಡೆದು)

Previous post ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
Next post ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು

Related Posts

ನಿನ್ನದೊಂದು ಸ್ಪರ್ಶ
Share:
Poems

ನಿನ್ನದೊಂದು ಸ್ಪರ್ಶ

February 16, 2026 ಕೆ.ಆರ್ ಮಂಗಳಾ
ಅಷ್ಟು ಸಲೀಸಲ್ಲಾ ಬಿಡು ನಿನ್ನ ಕೈ ಹಿಡಿಯುವುದು ಎದುರಿದ್ದೂ ಅವಿತಿರುವ ನಿನ್ನಿರುವಿಗೆ ಅಡಿಯಿಡುವುದು… ಇಲ್ಲೇ, ಇದೇ ಗಳಿಗೆಯಲ್ಲೇ… ಈ ಕ್ಷಣವೇ… ನೀನು ಪ್ರತ್ಯಕ್ಷವಂತೆ! ಯಾರಾದರೂ...
ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...

Comments 3

  1. Raviraju A
    Apr 20, 2025 Reply

    ಮುಕ್ತವಾಗಲಿ ಮನವು ಎಲ್ಲಾ ಕ್ಲೀಷೆಗಳಿಂದ… ಶಾಂತ ಲಹರಿಯಂತಿದೆ ಭಾವನೆ.

  2. ಕೀರ್ತಿ ಎನ್, ಗುಂಡ್ಲುಪೇಟೆ
    Apr 28, 2025 Reply

    ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ- ಮಾರ್ಮಿಕವಾದ ಸಾಲುಗಳು. ಗಂಧದ ಕಣವಾಗುವುದು!

  3. ಉಮಾದೇವಿ ಶಂಕರಪ್ಪ
    May 1, 2025 Reply

    ಬಯಲು ಕವನಗಳು ಮತ್ತೆ ಮತ್ತೆ ಓದುವಂತಿವೆ✌️

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ನೋಟದ ಕೂಟ…
ನೋಟದ ಕೂಟ…
May 10, 2023
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ಹೀಗೊಂದು ಸಂವಾದ…
ಹೀಗೊಂದು ಸಂವಾದ…
April 6, 2023
ಗ್ರಹಣ
ಗ್ರಹಣ
December 9, 2025
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
July 4, 2022
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ಅನುಭವ ಮಂಟಪ: ಮುಂದೇನು?
ಅನುಭವ ಮಂಟಪ: ಮುಂದೇನು?
April 5, 2026
Copyright © 2026 Bayalu