Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಶಾಂತಿ
Share:
Poems April 11, 2025 Bayalu

ಶಾಂತಿ

ಪಯಣದ ಉಬ್ಬುತಗ್ಗು ಹಾದಿಯಲಿ,
ಗಂಧದ ಕಣವಾಗು ಬಯಲಲಿ,
ಸುಮದ ದಳವಾಗು ವನದಲಿ,
ಓ ಮನವೇ,
ಕಂದನ ಮುಗ್ದ ನಗುವಾಗು.| ೧ |

ಹರುಷ ದುಗುಡಗಳ ಮೇಳದಲಿ,
ಮಧುರ ನೆನಪುಗಳ ಹೊಳೆಯಾಗು,
ಹಾಡಾಗು ಕಾಡುವ ನೋವಿಗೆ,
ಓ ಮನವೇ,
ಬಾನಲಿ ಹಾರುವ ಹಕ್ಕಿಯಾಗು. | ೨ |

ಕಷ್ಟಸುಖಗಳು ಬೆರೆತ ಬದುಕಿನಲಿ,
ಚಿಂತನೆಯ ಮುನಿಯಾಗು ಗದ್ದಲದಲಿ,
ಹರಿವ ನದಿಯಾಗು ಹರುಷದಲಿ
ಓ ಮನವೇ,
ಕರುಣೆ ಮಮತೆಗಳ ಸೆಲೆಯಾಗು. | ೩ |

ನೇಸರನ ದಿಗಂತದಂಚಿನ ಪಥದಲಿ,
ಮುಪ್ಪುದೇಹ ಕೊನೆ ಕೋರಿದಂದು,
ಮುಕ್ತನಾಗು ತುಂಬು ಹೃದಯದಲಿ,
ಓ ಮನವೇ,
ಪರಮ ಶಾಂತಿಯ ನೆಲೆಯಾಗು. | ೪ |

-ಅಂಬಳೆ ನಾಗ
(ರವೀಂದ್ರನಾಥ್ ಟಾಗೋರ್ ಅವರ ಕವಿತೆಯಿಂದ ಸ್ಫೂರ್ತಿ ಪಡೆದು)

Previous post ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
Next post ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು

Related Posts

ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...

Comments 3

  1. Raviraju A
    Apr 20, 2025 Reply

    ಮುಕ್ತವಾಗಲಿ ಮನವು ಎಲ್ಲಾ ಕ್ಲೀಷೆಗಳಿಂದ… ಶಾಂತ ಲಹರಿಯಂತಿದೆ ಭಾವನೆ.

  2. ಕೀರ್ತಿ ಎನ್, ಗುಂಡ್ಲುಪೇಟೆ
    Apr 28, 2025 Reply

    ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ- ಮಾರ್ಮಿಕವಾದ ಸಾಲುಗಳು. ಗಂಧದ ಕಣವಾಗುವುದು!

  3. ಉಮಾದೇವಿ ಶಂಕರಪ್ಪ
    May 1, 2025 Reply

    ಬಯಲು ಕವನಗಳು ಮತ್ತೆ ಮತ್ತೆ ಓದುವಂತಿವೆ✌️

Leave a Reply to ಕೀರ್ತಿ ಎನ್, ಗುಂಡ್ಲುಪೇಟೆ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಗೇಣು ದಾರಿ
ಗೇಣು ದಾರಿ
July 10, 2023
ಕುರುಹೇ ಬಯಲು
ಕುರುಹೇ ಬಯಲು
February 16, 2026
ಕಾಯಕಯೋಗಿನಿ ಕದಿರ ರೆಮ್ಮವ್ವೆ
ಕಾಯಕಯೋಗಿನಿ ಕದಿರ ರೆಮ್ಮವ್ವೆ
April 29, 2018
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಸಕಾರವೋ… ನಕಾರವೋ…
ಸಕಾರವೋ… ನಕಾರವೋ…
July 5, 2019
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
January 7, 2022
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
Copyright © 2026 Bayalu