Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯ ಸಂತ
Share:
Poems September 7, 2020 ಜ್ಯೋತಿಲಿಂಗಪ್ಪ

ಸಂತೆಯ ಸಂತ

ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ
ಕಣ್ಣಿಗೆ ಕರುಳು ಇರಬಾರದು
ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ
ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ

ಈ ಮೂರು ಮೊಳದ ಗುಂಡಿಯ ತೋಡುವರೈದು ಮಂದಿ
ಓಡುವ ಸೂರ್ಯನ ಹಿಡಿಯಲಾಗದು ನೆರಳು
ಬಿಡಮ್ಮಾ ಇದು ಯಾವ ತತ್ವದ ಹಾಡೋ
ತಂಬೂರಿ ಮೀಟುವ ಬೆರಳು ಮೊಂಡು

ನೆನೆದರೆ ಕಾಡುವುದು ಮರೆಹು
ಮರೆದರೆ ಕಾಡುವುದು ನೆನಹು
ಅರಿದರೆ ಕಾಡುವುದು ನೆನಹು ಮರೆಹು
ಶಬ್ದದೊಳಗಣ ನಿಸದ್ದುವ ಬಲ್ಲವರೇ ಬಲ್ಲರು

ನಿನ್ನಿಂದ ನಾನರಿದೆನಲ್ಲದೆ ಎನ್ನಿಂದ ನೀನಾಗಲಿಲ್ಲ
ಅಂತರಂಗದಲಿ ಅಡಗಿಸಿಟ್ಟ ಭಾವ
ಬಹಿರಂಗದಲಿ ಪೂಜೆಗೊಳ್ಳದು
ಕಣ್ಣ ಒಳಗಣ ಬಿಂಬ ಕಣ್ಣಿಗೆ ಇಂಬು

ಬೆಟ್ಟ ಏರಿ ಬಂದವನ ಕೂಡೇನು ಕಷ್ಟ ಸುಖ
ನೆಲದಲಿ ತೆವಳುವ ಮಣ್ಣು
ಮಣ್ಣಿಲ್ಲದೆ ಇರದು
ಅಂಗವಿಲ್ಲದವಗೆ ಅಂಗಿ ತೊಡಿಸಲುಂಟೇ…

Previous post ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
Next post ಮನಸ್ಸು
ಮನಸ್ಸು

Related Posts

ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...
ಮರೆತೆ…
Share:
Poems

ಮರೆತೆ…

July 4, 2022 ಜ್ಯೋತಿಲಿಂಗಪ್ಪ
ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...

Comments 2

  1. Mariswamy Gowdar
    Sep 10, 2020 Reply

    ಕಣ್ಣೊಳಗಣ ಕರುಳು ಹಿಂಗಿದಲ್ಲದೆ ನಿನ್ನ ನೋಡಲಾಗದು… ವಚನ ನೆನಪಿಸಿದಿರಿ. ಸುಂದರ ಕವನ.

  2. Nagaraju M.P
    Sep 13, 2020 Reply

    ಕವನ abstract art ಅನ್ನು ನೆನಪಿಸುವಂತಿದೆ. ನಿಮ್ಮ ಅಲ್ಲಮ ಮತ್ತು ಅಕ್ಕನ ನೆನಪಿನ ಕವನಗಳನ್ನು ನಾನು ಓದಿದ್ದೇನೆ, ಚೆನ್ನಾಗಿವೆ ಸರ್.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಿನಗೂ ನನಗೂ ಒಂದೇ ನಿಜ
ನಿನಗೂ ನನಗೂ ಒಂದೇ ನಿಜ
January 15, 2026
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ಹಾಯ್ಕು
ಹಾಯ್ಕು
September 6, 2023
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
August 6, 2022
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ಅನಿಮಿಷನ ಕಥೆ- 6
ಅನಿಮಿಷನ ಕಥೆ- 6
April 11, 2025
Copyright © 2026 Bayalu