Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯ ಸಂತ
Share:
Poems September 7, 2020 ಜ್ಯೋತಿಲಿಂಗಪ್ಪ

ಸಂತೆಯ ಸಂತ

ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ
ಕಣ್ಣಿಗೆ ಕರುಳು ಇರಬಾರದು
ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ
ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ

ಈ ಮೂರು ಮೊಳದ ಗುಂಡಿಯ ತೋಡುವರೈದು ಮಂದಿ
ಓಡುವ ಸೂರ್ಯನ ಹಿಡಿಯಲಾಗದು ನೆರಳು
ಬಿಡಮ್ಮಾ ಇದು ಯಾವ ತತ್ವದ ಹಾಡೋ
ತಂಬೂರಿ ಮೀಟುವ ಬೆರಳು ಮೊಂಡು

ನೆನೆದರೆ ಕಾಡುವುದು ಮರೆಹು
ಮರೆದರೆ ಕಾಡುವುದು ನೆನಹು
ಅರಿದರೆ ಕಾಡುವುದು ನೆನಹು ಮರೆಹು
ಶಬ್ದದೊಳಗಣ ನಿಸದ್ದುವ ಬಲ್ಲವರೇ ಬಲ್ಲರು

ನಿನ್ನಿಂದ ನಾನರಿದೆನಲ್ಲದೆ ಎನ್ನಿಂದ ನೀನಾಗಲಿಲ್ಲ
ಅಂತರಂಗದಲಿ ಅಡಗಿಸಿಟ್ಟ ಭಾವ
ಬಹಿರಂಗದಲಿ ಪೂಜೆಗೊಳ್ಳದು
ಕಣ್ಣ ಒಳಗಣ ಬಿಂಬ ಕಣ್ಣಿಗೆ ಇಂಬು

ಬೆಟ್ಟ ಏರಿ ಬಂದವನ ಕೂಡೇನು ಕಷ್ಟ ಸುಖ
ನೆಲದಲಿ ತೆವಳುವ ಮಣ್ಣು
ಮಣ್ಣಿಲ್ಲದೆ ಇರದು
ಅಂಗವಿಲ್ಲದವಗೆ ಅಂಗಿ ತೊಡಿಸಲುಂಟೇ…

Previous post ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
Next post ಮನಸ್ಸು
ಮನಸ್ಸು

Related Posts

ಸುಮ್ಮನೆ ಇರು
Share:
Poems

ಸುಮ್ಮನೆ ಇರು

December 6, 2020 ಜ್ಯೋತಿಲಿಂಗಪ್ಪ
ನಾನು ನೋಡಿದ್ದೇನು ಕೇಳಿದ್ದೇನು ಬಿಡು ನಾನಿರುವುದೇ ಹೀಗೆ ನೋಡೆ ಕೇಳೆ ಕಣ್ಣ ಕೊಳೆ ಕಿವಿಯ ಕಸ ತೊಳೆ ಇರುವೆ ಇರುವ ಹಾಗೆ ನಿನ್ನ ಬೆಳಕಲಿ ನನ್ನ ನೆಳಲ ತುಂಬದಿರು ಕೇಡು ನನದಲ್ಲ...
ಈ ಕನ್ನಡಿ
Share:
Poems

ಈ ಕನ್ನಡಿ

March 6, 2024 ಜ್ಯೋತಿಲಿಂಗಪ್ಪ
ಈಗೀಗ ಈ ಕನ್ನಡಿ ನನ್ನ ಮುದುಕನಾಗಿ ತೋರಿಸುತ್ತಿದೆ ಯುವಕನಾಗಿ ಕಾಣಿಸುತ್ತದೆ ನಾನೇನು…. ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ ಈ ಕನ್ನಡಿ...

Comments 2

  1. Mariswamy Gowdar
    Sep 10, 2020 Reply

    ಕಣ್ಣೊಳಗಣ ಕರುಳು ಹಿಂಗಿದಲ್ಲದೆ ನಿನ್ನ ನೋಡಲಾಗದು… ವಚನ ನೆನಪಿಸಿದಿರಿ. ಸುಂದರ ಕವನ.

  2. Nagaraju M.P
    Sep 13, 2020 Reply

    ಕವನ abstract art ಅನ್ನು ನೆನಪಿಸುವಂತಿದೆ. ನಿಮ್ಮ ಅಲ್ಲಮ ಮತ್ತು ಅಕ್ಕನ ನೆನಪಿನ ಕವನಗಳನ್ನು ನಾನು ಓದಿದ್ದೇನೆ, ಚೆನ್ನಾಗಿವೆ ಸರ್.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಬ್ದದೊಳಗಣ ನಿಶ್ಶಬ್ದ…
ಶಬ್ದದೊಳಗಣ ನಿಶ್ಶಬ್ದ…
July 21, 2024
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ನಿನ್ನೆ-ಇಂದು
ನಿನ್ನೆ-ಇಂದು
May 10, 2022
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ಹಣತೆ ಸಾಕು
ಹಣತೆ ಸಾಕು
September 14, 2024
ವಚನ – ಚಿಂತನ
ವಚನ – ಚಿಂತನ
October 10, 2023
ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…
November 10, 2022
ಶರಣ ಕುಂಬಾರಣ್ಣನ ಸರಸ ದಾಂಪತ್ಯ
ಶರಣ ಕುಂಬಾರಣ್ಣನ ಸರಸ ದಾಂಪತ್ಯ
May 1, 2019
Copyright © 2025 Bayalu