Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯ ಸಂತ
Share:
Poems September 7, 2020 ಜ್ಯೋತಿಲಿಂಗಪ್ಪ

ಸಂತೆಯ ಸಂತ

ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ
ಕಣ್ಣಿಗೆ ಕರುಳು ಇರಬಾರದು
ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ
ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ

ಈ ಮೂರು ಮೊಳದ ಗುಂಡಿಯ ತೋಡುವರೈದು ಮಂದಿ
ಓಡುವ ಸೂರ್ಯನ ಹಿಡಿಯಲಾಗದು ನೆರಳು
ಬಿಡಮ್ಮಾ ಇದು ಯಾವ ತತ್ವದ ಹಾಡೋ
ತಂಬೂರಿ ಮೀಟುವ ಬೆರಳು ಮೊಂಡು

ನೆನೆದರೆ ಕಾಡುವುದು ಮರೆಹು
ಮರೆದರೆ ಕಾಡುವುದು ನೆನಹು
ಅರಿದರೆ ಕಾಡುವುದು ನೆನಹು ಮರೆಹು
ಶಬ್ದದೊಳಗಣ ನಿಸದ್ದುವ ಬಲ್ಲವರೇ ಬಲ್ಲರು

ನಿನ್ನಿಂದ ನಾನರಿದೆನಲ್ಲದೆ ಎನ್ನಿಂದ ನೀನಾಗಲಿಲ್ಲ
ಅಂತರಂಗದಲಿ ಅಡಗಿಸಿಟ್ಟ ಭಾವ
ಬಹಿರಂಗದಲಿ ಪೂಜೆಗೊಳ್ಳದು
ಕಣ್ಣ ಒಳಗಣ ಬಿಂಬ ಕಣ್ಣಿಗೆ ಇಂಬು

ಬೆಟ್ಟ ಏರಿ ಬಂದವನ ಕೂಡೇನು ಕಷ್ಟ ಸುಖ
ನೆಲದಲಿ ತೆವಳುವ ಮಣ್ಣು
ಮಣ್ಣಿಲ್ಲದೆ ಇರದು
ಅಂಗವಿಲ್ಲದವಗೆ ಅಂಗಿ ತೊಡಿಸಲುಂಟೇ…

Previous post ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
Next post ಮನಸ್ಸು
ಮನಸ್ಸು

Related Posts

ನನ್ನ ಶರಣರು…
Share:
Poems

ನನ್ನ ಶರಣರು…

April 9, 2021 ಕೆ.ಆರ್ ಮಂಗಳಾ
ನನ್ನ ಶರಣರು ಅವರು- ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...
ಬೆಳಕಲಿ ದೀಪ
Share:
Poems

ಬೆಳಕಲಿ ದೀಪ

December 8, 2021 ಜ್ಯೋತಿಲಿಂಗಪ್ಪ
ಅಕಾಲ; ಹಗಲು ಕನಸು ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ.. ಈ ಜ್ಞಾನದ ಕೇಡು ನನಗೆ ಕಣ್ಣಲ್ಲಿ ಕತ್ತಲಿರಿಸಿದೆ ಬೆಳಕಲಿ ದೀಪ...

Comments 2

  1. Mariswamy Gowdar
    Sep 10, 2020 Reply

    ಕಣ್ಣೊಳಗಣ ಕರುಳು ಹಿಂಗಿದಲ್ಲದೆ ನಿನ್ನ ನೋಡಲಾಗದು… ವಚನ ನೆನಪಿಸಿದಿರಿ. ಸುಂದರ ಕವನ.

  2. Nagaraju M.P
    Sep 13, 2020 Reply

    ಕವನ abstract art ಅನ್ನು ನೆನಪಿಸುವಂತಿದೆ. ನಿಮ್ಮ ಅಲ್ಲಮ ಮತ್ತು ಅಕ್ಕನ ನೆನಪಿನ ಕವನಗಳನ್ನು ನಾನು ಓದಿದ್ದೇನೆ, ಚೆನ್ನಾಗಿವೆ ಸರ್.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತುತ್ತೂರಿ…
ತುತ್ತೂರಿ…
June 10, 2023
ಅನಿಶಾ…
ಅನಿಶಾ…
September 6, 2026
ಅನುಪಮ ಯೋಗಿ ಅನಿಮಿಷ
ಅನುಪಮ ಯೋಗಿ ಅನಿಮಿಷ
May 6, 2020
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಮನೆ ನೋಡಾ ಬಡವರು
ಮನೆ ನೋಡಾ ಬಡವರು
April 29, 2018
ಗಂಟಿನ ನಂಟು
ಗಂಟಿನ ನಂಟು
November 7, 2020
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
Copyright © 2026 Bayalu