Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸನ್ಯಾಸ ದೀಕ್ಷೆ
Share:
Poems June 12, 2025 ಜಬೀವುಲ್ಲಾ ಎಂ.ಅಸದ್

ಸನ್ಯಾಸ ದೀಕ್ಷೆ

ತುಂಬಿದ ಅಹಂ- ಸ್ವಾರ್ಥದ ಚೀಲವನು
ಬಯಲಿಗೊಯ್ದು ಸುರಿದು
ಸ್ವತಃ ಖಾಲಿಯಾಗಿ
ಸಂಭ್ರಮಿಸುವುದು – ಸನ್ಯಾಸ

ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ
ಬೇರು ಬಿಟ್ಟು ಬಿಸಿಲು ಗಾಳಿಗೆ ತೂಗಿ
ನೆರಳು, ಫಲ ನೀಡಿ
ಜೀವ ಸಂಕುಲಕೆ ನೆರವಾಗುವುದು – ಸನ್ಯಾಸ

ಇರುವುದನ್ನೆಲ್ಲ ಕಳೆದುಕೊಂಡು
ಪಡೆದದ್ದೆಲ್ಲವ ಹಂಚಿ ಬರಡಾಗಿ
ಬರಿಗೈಗಳ ಕಂಡು
ತಾನೇ ಧನ್ಯಗೊಳ್ಳುವುದು – ಸನ್ಯಾಸ

ಹಸಿವನ್ನು ನುಂಗಿ, ತೃಷೆಯನ್ನು ಮೀರಿ
ಧ್ಯಾನದಿ ಮುಗುಳ್ನಕ್ಕು,
ಕೈಗೆ ಸಿಕ್ಕ ಅರಿವೆ ಸುತ್ತಿ
ಬಯಲಾಗುವುದು – ಸನ್ಯಾಸ

ಸೂರ್ಯನೊಂದಿಗೆ ಎದ್ದು
ಚಂದಿರನೊಟ್ಟಿಗೆ ಆಕಳಿಸಿ
ಕಾಲದೊಂದಿಗೆ ಕೂಡಿ
ಲೋಕದ ಹೊಲಸು ಗುಡಿಸುವುದು – ಸನ್ಯಾಸ

ಹಕ್ಕಿಯ ರೆಕ್ಕೆ ಸವರಿ, ಚಿಗುರುವ ಎಲೆಗೆ ನಮಿಸಿ
ಅರಳುವ ಹೂವಿಗೆ ಮುತ್ತಿಟ್ಟು
ಮಗುವಂತೆ ಮಕ್ಕಳೊಟ್ಟಿಗೆ
ಆಡಿ ದಣಿಯುವುದು – ಸನ್ಯಾಸ!

ಬಿದಿರ ಮೆಳೆಯ ನಡುವೆ ಕೂತು
ಜಗದ ಸಂತೆಯ ಮರೆತು
ಕೊಳಲ ದೇಹಕೆ ಉಸಿರ ಸುರಿದು
ಪ್ರಕೃತಿಗೆ ಕೃತಜ್ಞನಾಗುವುದು – ಸನ್ಯಾಸ!

Previous post ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
Next post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು

Related Posts

ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...
ನನ್ನ ಬುದ್ಧ ಮಹಾಗುರು
Share:
Poems

ನನ್ನ ಬುದ್ಧ ಮಹಾಗುರು

January 4, 2020 ಪದ್ಮಾಲಯ ನಾಗರಾಜ್
ನನ್ನ ಬುದ್ಧ ಮಹಾಗುರುವು… ಧರ್ಮವಲ್ಲ ದೈವವಲ್ಲ ನುಡಿಯಲ್ಲ ಪಡಿಯಲ್ಲ ವಿಗ್ರಹವಲ್ಲ ಅನುಗ್ರಹವಲ್ಲ ಸಂಭ್ರಮವಲ್ಲ ಉತ್ಸವವಲ್ಲ ಸುಖವಲ್ಲ ದುಃಖವಲ್ಲ ವಾದವಲ್ಲ ಬೇಧವಲ್ಲ ಮಂತ್ರವಲ್ಲ...

Comments 2

  1. Pro. Mallesh K.S, Mysuru
    Jun 12, 2025 Reply

    ಸನ್ಯಾಸ ಕವನದ ಹೂರಣ ಚೆನ್ನಾಗಿದೆ. ಆದರೆ ಗದ್ಯ ಪದ್ಯದ ಮಿಶ್ರಣದಂತಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಜಬೀವುಲ್ಲಾ ಎಂ ಅಸದರವರ ಸನ್ಯಾಸ ದೀಕ್ಷೆ ಕವನ 👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಶಿವಾಚಾರ
ಶಿವಾಚಾರ
April 9, 2021
ನಾನು… ನನ್ನದು
ನಾನು… ನನ್ನದು
July 4, 2021
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
September 14, 2024
Copyright © 2026 Bayalu