Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸನ್ಯಾಸ ದೀಕ್ಷೆ
Share:
Poems June 12, 2025 ಜಬೀವುಲ್ಲಾ ಎಂ.ಅಸದ್

ಸನ್ಯಾಸ ದೀಕ್ಷೆ

ತುಂಬಿದ ಅಹಂ- ಸ್ವಾರ್ಥದ ಚೀಲವನು
ಬಯಲಿಗೊಯ್ದು ಸುರಿದು
ಸ್ವತಃ ಖಾಲಿಯಾಗಿ
ಸಂಭ್ರಮಿಸುವುದು – ಸನ್ಯಾಸ

ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ
ಬೇರು ಬಿಟ್ಟು ಬಿಸಿಲು ಗಾಳಿಗೆ ತೂಗಿ
ನೆರಳು, ಫಲ ನೀಡಿ
ಜೀವ ಸಂಕುಲಕೆ ನೆರವಾಗುವುದು – ಸನ್ಯಾಸ

ಇರುವುದನ್ನೆಲ್ಲ ಕಳೆದುಕೊಂಡು
ಪಡೆದದ್ದೆಲ್ಲವ ಹಂಚಿ ಬರಡಾಗಿ
ಬರಿಗೈಗಳ ಕಂಡು
ತಾನೇ ಧನ್ಯಗೊಳ್ಳುವುದು – ಸನ್ಯಾಸ

ಹಸಿವನ್ನು ನುಂಗಿ, ತೃಷೆಯನ್ನು ಮೀರಿ
ಧ್ಯಾನದಿ ಮುಗುಳ್ನಕ್ಕು,
ಕೈಗೆ ಸಿಕ್ಕ ಅರಿವೆ ಸುತ್ತಿ
ಬಯಲಾಗುವುದು – ಸನ್ಯಾಸ

ಸೂರ್ಯನೊಂದಿಗೆ ಎದ್ದು
ಚಂದಿರನೊಟ್ಟಿಗೆ ಆಕಳಿಸಿ
ಕಾಲದೊಂದಿಗೆ ಕೂಡಿ
ಲೋಕದ ಹೊಲಸು ಗುಡಿಸುವುದು – ಸನ್ಯಾಸ

ಹಕ್ಕಿಯ ರೆಕ್ಕೆ ಸವರಿ, ಚಿಗುರುವ ಎಲೆಗೆ ನಮಿಸಿ
ಅರಳುವ ಹೂವಿಗೆ ಮುತ್ತಿಟ್ಟು
ಮಗುವಂತೆ ಮಕ್ಕಳೊಟ್ಟಿಗೆ
ಆಡಿ ದಣಿಯುವುದು – ಸನ್ಯಾಸ!

ಬಿದಿರ ಮೆಳೆಯ ನಡುವೆ ಕೂತು
ಜಗದ ಸಂತೆಯ ಮರೆತು
ಕೊಳಲ ದೇಹಕೆ ಉಸಿರ ಸುರಿದು
ಪ್ರಕೃತಿಗೆ ಕೃತಜ್ಞನಾಗುವುದು – ಸನ್ಯಾಸ!

Previous post ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
Next post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು

Related Posts

ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...
ಭವ ರಾಟಾಳ
Share:
Poems

ಭವ ರಾಟಾಳ

September 10, 2022 ಕೆ.ಆರ್ ಮಂಗಳಾ
ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...

Comments 2

  1. Pro. Mallesh K.S, Mysuru
    Jun 12, 2025 Reply

    ಸನ್ಯಾಸ ಕವನದ ಹೂರಣ ಚೆನ್ನಾಗಿದೆ. ಆದರೆ ಗದ್ಯ ಪದ್ಯದ ಮಿಶ್ರಣದಂತಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಜಬೀವುಲ್ಲಾ ಎಂ ಅಸದರವರ ಸನ್ಯಾಸ ದೀಕ್ಷೆ ಕವನ 👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ನನ್ನ ಶರಣರು…
ನನ್ನ ಶರಣರು…
April 9, 2021
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಈ ಕನ್ನಡಿ
ಈ ಕನ್ನಡಿ
March 6, 2024
ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
September 14, 2024
Copyright © 2025 Bayalu