Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸನ್ಯಾಸ ದೀಕ್ಷೆ
Share:
Poems June 12, 2025 ಜಬೀವುಲ್ಲಾ ಎಂ.ಅಸದ್

ಸನ್ಯಾಸ ದೀಕ್ಷೆ

ತುಂಬಿದ ಅಹಂ- ಸ್ವಾರ್ಥದ ಚೀಲವನು
ಬಯಲಿಗೊಯ್ದು ಸುರಿದು
ಸ್ವತಃ ಖಾಲಿಯಾಗಿ
ಸಂಭ್ರಮಿಸುವುದು – ಸನ್ಯಾಸ

ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ
ಬೇರು ಬಿಟ್ಟು ಬಿಸಿಲು ಗಾಳಿಗೆ ತೂಗಿ
ನೆರಳು, ಫಲ ನೀಡಿ
ಜೀವ ಸಂಕುಲಕೆ ನೆರವಾಗುವುದು – ಸನ್ಯಾಸ

ಇರುವುದನ್ನೆಲ್ಲ ಕಳೆದುಕೊಂಡು
ಪಡೆದದ್ದೆಲ್ಲವ ಹಂಚಿ ಬರಡಾಗಿ
ಬರಿಗೈಗಳ ಕಂಡು
ತಾನೇ ಧನ್ಯಗೊಳ್ಳುವುದು – ಸನ್ಯಾಸ

ಹಸಿವನ್ನು ನುಂಗಿ, ತೃಷೆಯನ್ನು ಮೀರಿ
ಧ್ಯಾನದಿ ಮುಗುಳ್ನಕ್ಕು,
ಕೈಗೆ ಸಿಕ್ಕ ಅರಿವೆ ಸುತ್ತಿ
ಬಯಲಾಗುವುದು – ಸನ್ಯಾಸ

ಸೂರ್ಯನೊಂದಿಗೆ ಎದ್ದು
ಚಂದಿರನೊಟ್ಟಿಗೆ ಆಕಳಿಸಿ
ಕಾಲದೊಂದಿಗೆ ಕೂಡಿ
ಲೋಕದ ಹೊಲಸು ಗುಡಿಸುವುದು – ಸನ್ಯಾಸ

ಹಕ್ಕಿಯ ರೆಕ್ಕೆ ಸವರಿ, ಚಿಗುರುವ ಎಲೆಗೆ ನಮಿಸಿ
ಅರಳುವ ಹೂವಿಗೆ ಮುತ್ತಿಟ್ಟು
ಮಗುವಂತೆ ಮಕ್ಕಳೊಟ್ಟಿಗೆ
ಆಡಿ ದಣಿಯುವುದು – ಸನ್ಯಾಸ!

ಬಿದಿರ ಮೆಳೆಯ ನಡುವೆ ಕೂತು
ಜಗದ ಸಂತೆಯ ಮರೆತು
ಕೊಳಲ ದೇಹಕೆ ಉಸಿರ ಸುರಿದು
ಪ್ರಕೃತಿಗೆ ಕೃತಜ್ಞನಾಗುವುದು – ಸನ್ಯಾಸ!

Previous post ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
Next post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು

Related Posts

ಎರಡು ಎಲ್ಲಿ?
Share:
Poems

ಎರಡು ಎಲ್ಲಿ?

October 5, 2021 ಕೆ.ಆರ್ ಮಂಗಳಾ
ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...
ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...

Comments 2

  1. Pro. Mallesh K.S, Mysuru
    Jun 12, 2025 Reply

    ಸನ್ಯಾಸ ಕವನದ ಹೂರಣ ಚೆನ್ನಾಗಿದೆ. ಆದರೆ ಗದ್ಯ ಪದ್ಯದ ಮಿಶ್ರಣದಂತಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಜಬೀವುಲ್ಲಾ ಎಂ ಅಸದರವರ ಸನ್ಯಾಸ ದೀಕ್ಷೆ ಕವನ 👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ಒಳಗಣ ಮರ
ಒಳಗಣ ಮರ
March 12, 2022
ಮೊಟ್ಟೆ- ಗೂಡು
ಮೊಟ್ಟೆ- ಗೂಡು
April 11, 2025
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
Copyright © 2026 Bayalu