Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸನ್ಯಾಸ ದೀಕ್ಷೆ
Share:
Poems June 12, 2025 ಜಬೀವುಲ್ಲಾ ಎಂ.ಅಸದ್

ಸನ್ಯಾಸ ದೀಕ್ಷೆ

ತುಂಬಿದ ಅಹಂ- ಸ್ವಾರ್ಥದ ಚೀಲವನು
ಬಯಲಿಗೊಯ್ದು ಸುರಿದು
ಸ್ವತಃ ಖಾಲಿಯಾಗಿ
ಸಂಭ್ರಮಿಸುವುದು – ಸನ್ಯಾಸ

ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ
ಬೇರು ಬಿಟ್ಟು ಬಿಸಿಲು ಗಾಳಿಗೆ ತೂಗಿ
ನೆರಳು, ಫಲ ನೀಡಿ
ಜೀವ ಸಂಕುಲಕೆ ನೆರವಾಗುವುದು – ಸನ್ಯಾಸ

ಇರುವುದನ್ನೆಲ್ಲ ಕಳೆದುಕೊಂಡು
ಪಡೆದದ್ದೆಲ್ಲವ ಹಂಚಿ ಬರಡಾಗಿ
ಬರಿಗೈಗಳ ಕಂಡು
ತಾನೇ ಧನ್ಯಗೊಳ್ಳುವುದು – ಸನ್ಯಾಸ

ಹಸಿವನ್ನು ನುಂಗಿ, ತೃಷೆಯನ್ನು ಮೀರಿ
ಧ್ಯಾನದಿ ಮುಗುಳ್ನಕ್ಕು,
ಕೈಗೆ ಸಿಕ್ಕ ಅರಿವೆ ಸುತ್ತಿ
ಬಯಲಾಗುವುದು – ಸನ್ಯಾಸ

ಸೂರ್ಯನೊಂದಿಗೆ ಎದ್ದು
ಚಂದಿರನೊಟ್ಟಿಗೆ ಆಕಳಿಸಿ
ಕಾಲದೊಂದಿಗೆ ಕೂಡಿ
ಲೋಕದ ಹೊಲಸು ಗುಡಿಸುವುದು – ಸನ್ಯಾಸ

ಹಕ್ಕಿಯ ರೆಕ್ಕೆ ಸವರಿ, ಚಿಗುರುವ ಎಲೆಗೆ ನಮಿಸಿ
ಅರಳುವ ಹೂವಿಗೆ ಮುತ್ತಿಟ್ಟು
ಮಗುವಂತೆ ಮಕ್ಕಳೊಟ್ಟಿಗೆ
ಆಡಿ ದಣಿಯುವುದು – ಸನ್ಯಾಸ!

ಬಿದಿರ ಮೆಳೆಯ ನಡುವೆ ಕೂತು
ಜಗದ ಸಂತೆಯ ಮರೆತು
ಕೊಳಲ ದೇಹಕೆ ಉಸಿರ ಸುರಿದು
ಪ್ರಕೃತಿಗೆ ಕೃತಜ್ಞನಾಗುವುದು – ಸನ್ಯಾಸ!

Previous post ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
Next post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು

Related Posts

WHO AM I?
Share:
Poems

WHO AM I?

June 17, 2020 Chittara K. V
I have a wide brain And a open mind I think a lot at times But I come to a point To ask myself- Who am I? I swallow the pain But speak with the...
ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...

Comments 2

  1. Pro. Mallesh K.S, Mysuru
    Jun 12, 2025 Reply

    ಸನ್ಯಾಸ ಕವನದ ಹೂರಣ ಚೆನ್ನಾಗಿದೆ. ಆದರೆ ಗದ್ಯ ಪದ್ಯದ ಮಿಶ್ರಣದಂತಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಜಬೀವುಲ್ಲಾ ಎಂ ಅಸದರವರ ಸನ್ಯಾಸ ದೀಕ್ಷೆ ಕವನ 👌👌

Leave a Reply to ಶೋಭಾದೇವಿ, ಧಾರವಾಡ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ನೆಲದ ಮರೆಯ ನಿಧಾನದಂತೆ…
ನೆಲದ ಮರೆಯ ನಿಧಾನದಂತೆ…
April 29, 2018
ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ
May 6, 2021
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
Copyright © 2026 Bayalu