Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಾವಿನ ಅರಿವೆ ಕಳಚಿ!
Share:
Poems September 14, 2024 ಜಬೀವುಲ್ಲಾ ಎಂ.ಅಸದ್

ಸಾವಿನ ಅರಿವೆ ಕಳಚಿ!

ತೆರೆದ ಬೆಂಕಿಯ ಕಣ್ಣಲಿ
ತಾವರೆಯ ಪ್ರತಿಬಿಂಬ
ಕತ್ತಲೆ ಬೆಳಕಿನ ನಡುವಿನ ಯುದ್ಧ
ಮುಗುಳ್ನಕ್ಕ ಬುದ್ಧ!

ಕಟ್ಟಿದ ಸೇತುವೆ ಬಳಸಿದ ಲತೆ
ಚಿಗುರಿದ ಎಲೆಎಲೆಯ ತುಂಬಾ
ಇಬ್ಬನಿಯ ಕಲರವ
ಧ್ಯಾನವಾಯಿತು ಭಂಗ!

ನೀಲಮೆಯ ಈಜಿ
ಮರಳಿದೆ ರೆಕ್ಕೆ ಸಂಕುಲ
ಕಡಲ ದಂಡೆಯಲಿ ಗೂಡು ಕಟ್ಟಿ
ಹುಟ್ಟಿತು ಸ್ಥಾವರ!

ದಿಗಂತದ ಬುಟ್ಟಿಯಲಿ
ಹಣ್ಣಾಗಿ ನೇಸರ
ನಾಳೆಗೆ ಮತ್ತೆ ಹುಟ್ಟುವನು
ಸಾವಿನ ಅರಿವೆ ಕಳಚಿ!

Previous post ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
Next post ಹಣತೆ ಸಾಕು
ಹಣತೆ ಸಾಕು

Related Posts

ರೆಕ್ಕೆ ಬಿಚ್ಚಿ…
Share:
Poems

ರೆಕ್ಕೆ ಬಿಚ್ಚಿ…

May 8, 2024 ಕೆ.ಆರ್ ಮಂಗಳಾ
‘ವರ್ಚ್ಯುವಲ್ ವರ್ಲ್ಡ್’ ಎನುವುದು ಕಂಪ್ಯೂಟರ್ ಯುಗದ ಕೂಸಲ್ಲ ಸ್ವಾಮಿ… ಅದರದು ಅನಾದಿ ಇತಿಹಾಸ ಸರ್ವವ್ಯಾಪಿ, ಸರ್ವಶಕ್ತ ಸ್ವರೂಪಿ ಸೂರ್ಯನ ಸುತ್ತ ಭೂಮಿ ಸುತ್ತಿದರೆ ಇದರ...
ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...

Comments 4

  1. ಮಧು ಬಿ.ಎನ್.
    Sep 17, 2024 Reply

    ಜಬೀವುಲ್ಲಾ ರವರ ‘ ಸಾವಿನ ಅರಿವೆ ಕಳಚಿ…’ ಕವಿತೆ ಇತ್ತೀಚೆಗೆ ನಾನು ಆಸ್ವಾದಿಸಿದ ಅತ್ಯುತ್ತಮ ಕವಿತೆ. ಬಳಸಿಕೊಂಡ ರೂಪಕಗಳು ಕೂಡಾ ನವನವೀನ. ಧನ್ಯವಾದಗಳು.

    • Zabiulla M Asad
      Sep 19, 2024 Reply

      ಧನ್ಯವಾದಗಳು ಸರ್ 🙏

  2. ಗಂಗಾಧರ ಜವಳೂರು
    Sep 19, 2024 Reply

    ‘ಕಡಲ ದಂಡೆಯಲಿ ಗೂಡು ಕಟ್ಟಿ
    ಹುಟ್ಟಿತು ಸ್ಥಾವರ!’… ತುಂಬಾ ಚೆನ್ನಾಗಿದೆ ಸರ್.

  3. Harsha, Raichur
    Sep 22, 2024 Reply

    ಕತ್ತಲೆ- ಬೆಳಗಿನ ನಡುವಿನ ಯುದ್ಧದಲ್ಲಿ ಬಿದ್ದವರು ನಾವಲ್ಲವೇ? ಅದಕ್ಕೇ ಬುದ್ಧ ನಕ್ಕಿದ್ದು… ನಮ್ಮ ಮತಿಹೀನತೆಯನ್ನು ಕಂಡು…..

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
October 21, 2024
ಗಣಾಚಾರ
ಗಣಾಚಾರ
August 8, 2021
Copyright © 2025 Bayalu