Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಾವಿನ ಅರಿವೆ ಕಳಚಿ!
Share:
Poems September 14, 2024 ಜಬೀವುಲ್ಲಾ ಎಂ.ಅಸದ್

ಸಾವಿನ ಅರಿವೆ ಕಳಚಿ!

ತೆರೆದ ಬೆಂಕಿಯ ಕಣ್ಣಲಿ
ತಾವರೆಯ ಪ್ರತಿಬಿಂಬ
ಕತ್ತಲೆ ಬೆಳಕಿನ ನಡುವಿನ ಯುದ್ಧ
ಮುಗುಳ್ನಕ್ಕ ಬುದ್ಧ!

ಕಟ್ಟಿದ ಸೇತುವೆ ಬಳಸಿದ ಲತೆ
ಚಿಗುರಿದ ಎಲೆಎಲೆಯ ತುಂಬಾ
ಇಬ್ಬನಿಯ ಕಲರವ
ಧ್ಯಾನವಾಯಿತು ಭಂಗ!

ನೀಲಮೆಯ ಈಜಿ
ಮರಳಿದೆ ರೆಕ್ಕೆ ಸಂಕುಲ
ಕಡಲ ದಂಡೆಯಲಿ ಗೂಡು ಕಟ್ಟಿ
ಹುಟ್ಟಿತು ಸ್ಥಾವರ!

ದಿಗಂತದ ಬುಟ್ಟಿಯಲಿ
ಹಣ್ಣಾಗಿ ನೇಸರ
ನಾಳೆಗೆ ಮತ್ತೆ ಹುಟ್ಟುವನು
ಸಾವಿನ ಅರಿವೆ ಕಳಚಿ!

Previous post ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
Next post ಹಣತೆ ಸಾಕು
ಹಣತೆ ಸಾಕು

Related Posts

ಗಡಿಯಲ್ಲಿ ನಿಂತು…
Share:
Poems

ಗಡಿಯಲ್ಲಿ ನಿಂತು…

May 6, 2021 ಜ್ಯೋತಿಲಿಂಗಪ್ಪ
ಈ ಬಯಲಲಿ ಕುಳಿತು ಹಿಂದಣ ಹೆಜ್ಜೆಗಳ ಎಣಿಸುತಿರುವೆ ಖಾಲಿ ಮುಖವಿಲ್ಲದ ನಾಳೆಗಳು ಮುಖವಾಡದ ನಿನ್ನೆಗಳು ಮುಖಾಮುಖಿ ಯ ಇಂದು ಈ ಅರಳಿದ ಅರಳೆ ರಾಟೆಯಲಿ ಸಿಲುಕಿ ನೂಲು ಹಾಸು ಹೊಕ್ಕು...
ಹುಡುಕಿಕೊಡು ಗುರುವೇ…
Share:
Poems

ಹುಡುಕಿಕೊಡು ಗುರುವೇ…

July 4, 2022 ಕೆ.ಆರ್ ಮಂಗಳಾ
ದೇಹದಲ್ಲೋ ಭಾವದಲ್ಲೋ ಎದೆಯ ಒಳಗೋ ತಲೆಯ ಒಳಗೋ ಕಳೆದುಹೋಗಿದ್ದೇನೆ ನಾನು ಕಳೆದುಹೋಗಿದ್ದೇನೆ… ಕುಲದಲ್ಲೋ ಛಲದಲ್ಲೋ ಹಠದಲ್ಲೋ ಅಹಮಿನಲ್ಲೋ ಸೇರಿಹೋಗಿದ್ದೇನೆ ನಾನು...

Comments 4

  1. ಮಧು ಬಿ.ಎನ್.
    Sep 17, 2024 Reply

    ಜಬೀವುಲ್ಲಾ ರವರ ‘ ಸಾವಿನ ಅರಿವೆ ಕಳಚಿ…’ ಕವಿತೆ ಇತ್ತೀಚೆಗೆ ನಾನು ಆಸ್ವಾದಿಸಿದ ಅತ್ಯುತ್ತಮ ಕವಿತೆ. ಬಳಸಿಕೊಂಡ ರೂಪಕಗಳು ಕೂಡಾ ನವನವೀನ. ಧನ್ಯವಾದಗಳು.

    • Zabiulla M Asad
      Sep 19, 2024 Reply

      ಧನ್ಯವಾದಗಳು ಸರ್ 🙏

  2. ಗಂಗಾಧರ ಜವಳೂರು
    Sep 19, 2024 Reply

    ‘ಕಡಲ ದಂಡೆಯಲಿ ಗೂಡು ಕಟ್ಟಿ
    ಹುಟ್ಟಿತು ಸ್ಥಾವರ!’… ತುಂಬಾ ಚೆನ್ನಾಗಿದೆ ಸರ್.

  3. Harsha, Raichur
    Sep 22, 2024 Reply

    ಕತ್ತಲೆ- ಬೆಳಗಿನ ನಡುವಿನ ಯುದ್ಧದಲ್ಲಿ ಬಿದ್ದವರು ನಾವಲ್ಲವೇ? ಅದಕ್ಕೇ ಬುದ್ಧ ನಕ್ಕಿದ್ದು… ನಮ್ಮ ಮತಿಹೀನತೆಯನ್ನು ಕಂಡು…..

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸುಮ್ಮನೆ ಇರು
ಸುಮ್ಮನೆ ಇರು
December 6, 2020
ಮಾತು ಮಾಯೆ
ಮಾತು ಮಾಯೆ
July 4, 2021
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಲಿಂಗ ಕೂಡಲ ಸಂಗಮ
ಲಿಂಗ ಕೂಡಲ ಸಂಗಮ
April 29, 2018
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
Copyright © 2026 Bayalu