Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಾವಿನ ಅರಿವೆ ಕಳಚಿ!
Share:
Poems September 14, 2024 ಜಬೀವುಲ್ಲಾ ಎಂ.ಅಸದ್

ಸಾವಿನ ಅರಿವೆ ಕಳಚಿ!

ತೆರೆದ ಬೆಂಕಿಯ ಕಣ್ಣಲಿ
ತಾವರೆಯ ಪ್ರತಿಬಿಂಬ
ಕತ್ತಲೆ ಬೆಳಕಿನ ನಡುವಿನ ಯುದ್ಧ
ಮುಗುಳ್ನಕ್ಕ ಬುದ್ಧ!

ಕಟ್ಟಿದ ಸೇತುವೆ ಬಳಸಿದ ಲತೆ
ಚಿಗುರಿದ ಎಲೆಎಲೆಯ ತುಂಬಾ
ಇಬ್ಬನಿಯ ಕಲರವ
ಧ್ಯಾನವಾಯಿತು ಭಂಗ!

ನೀಲಮೆಯ ಈಜಿ
ಮರಳಿದೆ ರೆಕ್ಕೆ ಸಂಕುಲ
ಕಡಲ ದಂಡೆಯಲಿ ಗೂಡು ಕಟ್ಟಿ
ಹುಟ್ಟಿತು ಸ್ಥಾವರ!

ದಿಗಂತದ ಬುಟ್ಟಿಯಲಿ
ಹಣ್ಣಾಗಿ ನೇಸರ
ನಾಳೆಗೆ ಮತ್ತೆ ಹುಟ್ಟುವನು
ಸಾವಿನ ಅರಿವೆ ಕಳಚಿ!

Previous post ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
Next post ಹಣತೆ ಸಾಕು
ಹಣತೆ ಸಾಕು

Related Posts

ಲಿಂಗದ ಹಂಗೇ…
Share:
Poems

ಲಿಂಗದ ಹಂಗೇ…

September 10, 2022 ಜ್ಯೋತಿಲಿಂಗಪ್ಪ
ಹೊದಿಯೋಕೊಂದು ಆಕಾಶ ಮಲಗೋಕೊಂದು ನೆಲ ಕುಡಿಯೋಕೊಂದು ಸಿಂಧು ಉಣ್ಣೋಕೆ ಒಂದಿಷ್ಟು ಭಿಕ್ಷೆ ಹಾಡೋಕೊಂದು ತಂಬೂರಿ ಕೇಳೋಕೊಂದು ಕಿವಿ ಇನ್ನೇನು ಆಂ ಮರೆತೇ ಮೆರೆಯಲು ಒಂದು ಮರೆವು...
ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...

Comments 4

  1. ಮಧು ಬಿ.ಎನ್.
    Sep 17, 2024 Reply

    ಜಬೀವುಲ್ಲಾ ರವರ ‘ ಸಾವಿನ ಅರಿವೆ ಕಳಚಿ…’ ಕವಿತೆ ಇತ್ತೀಚೆಗೆ ನಾನು ಆಸ್ವಾದಿಸಿದ ಅತ್ಯುತ್ತಮ ಕವಿತೆ. ಬಳಸಿಕೊಂಡ ರೂಪಕಗಳು ಕೂಡಾ ನವನವೀನ. ಧನ್ಯವಾದಗಳು.

    • Zabiulla M Asad
      Sep 19, 2024 Reply

      ಧನ್ಯವಾದಗಳು ಸರ್ 🙏

  2. ಗಂಗಾಧರ ಜವಳೂರು
    Sep 19, 2024 Reply

    ‘ಕಡಲ ದಂಡೆಯಲಿ ಗೂಡು ಕಟ್ಟಿ
    ಹುಟ್ಟಿತು ಸ್ಥಾವರ!’… ತುಂಬಾ ಚೆನ್ನಾಗಿದೆ ಸರ್.

  3. Harsha, Raichur
    Sep 22, 2024 Reply

    ಕತ್ತಲೆ- ಬೆಳಗಿನ ನಡುವಿನ ಯುದ್ಧದಲ್ಲಿ ಬಿದ್ದವರು ನಾವಲ್ಲವೇ? ಅದಕ್ಕೇ ಬುದ್ಧ ನಕ್ಕಿದ್ದು… ನಮ್ಮ ಮತಿಹೀನತೆಯನ್ನು ಕಂಡು…..

Leave a Reply to ಗಂಗಾಧರ ಜವಳೂರು Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮರೆತೆ…
ಮರೆತೆ…
July 4, 2022
ವಚನ – ಚಿಂತನ
ವಚನ – ಚಿಂತನ
October 10, 2023
ಇದ್ದಷ್ಟೇ…
ಇದ್ದಷ್ಟೇ…
January 10, 2021
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
Copyright © 2026 Bayalu