Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಾವಿನ ಅರಿವೆ ಕಳಚಿ!
Share:
Poems September 14, 2024 ಜಬೀವುಲ್ಲಾ ಎಂ.ಅಸದ್

ಸಾವಿನ ಅರಿವೆ ಕಳಚಿ!

ತೆರೆದ ಬೆಂಕಿಯ ಕಣ್ಣಲಿ
ತಾವರೆಯ ಪ್ರತಿಬಿಂಬ
ಕತ್ತಲೆ ಬೆಳಕಿನ ನಡುವಿನ ಯುದ್ಧ
ಮುಗುಳ್ನಕ್ಕ ಬುದ್ಧ!

ಕಟ್ಟಿದ ಸೇತುವೆ ಬಳಸಿದ ಲತೆ
ಚಿಗುರಿದ ಎಲೆಎಲೆಯ ತುಂಬಾ
ಇಬ್ಬನಿಯ ಕಲರವ
ಧ್ಯಾನವಾಯಿತು ಭಂಗ!

ನೀಲಮೆಯ ಈಜಿ
ಮರಳಿದೆ ರೆಕ್ಕೆ ಸಂಕುಲ
ಕಡಲ ದಂಡೆಯಲಿ ಗೂಡು ಕಟ್ಟಿ
ಹುಟ್ಟಿತು ಸ್ಥಾವರ!

ದಿಗಂತದ ಬುಟ್ಟಿಯಲಿ
ಹಣ್ಣಾಗಿ ನೇಸರ
ನಾಳೆಗೆ ಮತ್ತೆ ಹುಟ್ಟುವನು
ಸಾವಿನ ಅರಿವೆ ಕಳಚಿ!

Previous post ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
Next post ಹಣತೆ ಸಾಕು
ಹಣತೆ ಸಾಕು

Related Posts

ನಾನು… ನನ್ನದು
Share:
Poems

ನಾನು… ನನ್ನದು

July 4, 2021 ಜ್ಯೋತಿಲಿಂಗಪ್ಪ
ಅಪ್ಪ ತನ್ನೆಲ್ಲಾ ಆಸೆಗಳ ಸಾಕಿಕೊಂಡೇ ಮಗನ ಬೆಳೆಸಿದ ಮಗ ತನ್ನೆಲ್ಲಾ ಆಸೆ ಇಟ್ಟುಕೊಂಡೇ ಮಗನ ಸಾಕಿದ ಅಪ್ಪನ ಸಾವಿನ ನೆರಳು ಮಗನನು ಮುಟ್ಟದೇ… ಈ ಕತ್ತಲಲಿ ಒಬ್ಬನೇ ಹೋಗುವಾಗ...
ದಡ ಸೋಂಕದ ಅಲೆಗಳು
Share:
Poems

ದಡ ಸೋಂಕದ ಅಲೆಗಳು

July 10, 2025 ಜ್ಯೋತಿಲಿಂಗಪ್ಪ
ನದಿ ಕೂಡುವ ಕಡಲ ಅಂಚು ನಿಂತು ಸಂಬಂಧ ಹುಡುಕುತಿರುವೆ ಕಡಲ ಸೇರುವ ನೀರು ನದಿ ಯಾವುದು ಕಡಲು ಯಾವುದು ಸಂಬಂಧ ಅಸಂಬಂಧ ಎರಡೆಂಬ ಭಿನ್ನ ಅಳಿಯದೇ.. ದಾರಿ ತೋರುವ ಕೈಯ ಹಿಡಿದಿರುವೆ...

Comments 4

  1. ಮಧು ಬಿ.ಎನ್.
    Sep 17, 2024 Reply

    ಜಬೀವುಲ್ಲಾ ರವರ ‘ ಸಾವಿನ ಅರಿವೆ ಕಳಚಿ…’ ಕವಿತೆ ಇತ್ತೀಚೆಗೆ ನಾನು ಆಸ್ವಾದಿಸಿದ ಅತ್ಯುತ್ತಮ ಕವಿತೆ. ಬಳಸಿಕೊಂಡ ರೂಪಕಗಳು ಕೂಡಾ ನವನವೀನ. ಧನ್ಯವಾದಗಳು.

    • Zabiulla M Asad
      Sep 19, 2024 Reply

      ಧನ್ಯವಾದಗಳು ಸರ್ 🙏

  2. ಗಂಗಾಧರ ಜವಳೂರು
    Sep 19, 2024 Reply

    ‘ಕಡಲ ದಂಡೆಯಲಿ ಗೂಡು ಕಟ್ಟಿ
    ಹುಟ್ಟಿತು ಸ್ಥಾವರ!’… ತುಂಬಾ ಚೆನ್ನಾಗಿದೆ ಸರ್.

  3. Harsha, Raichur
    Sep 22, 2024 Reply

    ಕತ್ತಲೆ- ಬೆಳಗಿನ ನಡುವಿನ ಯುದ್ಧದಲ್ಲಿ ಬಿದ್ದವರು ನಾವಲ್ಲವೇ? ಅದಕ್ಕೇ ಬುದ್ಧ ನಕ್ಕಿದ್ದು… ನಮ್ಮ ಮತಿಹೀನತೆಯನ್ನು ಕಂಡು…..

Leave a Reply to Harsha, Raichur Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
ಮಣ್ಣಿನ ಹೃದಯದಲಿ
ಮಣ್ಣಿನ ಹೃದಯದಲಿ
September 13, 2025
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಲಿಂಗದ ಹಂಗೇ…
ಲಿಂಗದ ಹಂಗೇ…
September 10, 2022
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ವಚನ – ಸಾಂಸ್ಕೃತಿಕ ತಲ್ಲಣಗಳು
ವಚನ – ಸಾಂಸ್ಕೃತಿಕ ತಲ್ಲಣಗಳು
November 1, 2018
Copyright © 2026 Bayalu