Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸುಮ್ಮನೆ ಇರು
Share:
Poems December 6, 2020 ಜ್ಯೋತಿಲಿಂಗಪ್ಪ

ಸುಮ್ಮನೆ ಇರು

ನಾನು
ನೋಡಿದ್ದೇನು ಕೇಳಿದ್ದೇನು
ಬಿಡು
ನಾನಿರುವುದೇ ಹೀಗೆ ನೋಡೆ
ಕೇಳೆ
ಕಣ್ಣ ಕೊಳೆ ಕಿವಿಯ ಕಸ
ತೊಳೆ
ಇರುವೆ ಇರುವ ಹಾಗೆ

ನಿನ್ನ
ಬೆಳಕಲಿ ನನ್ನ ನೆಳಲ ತುಂಬದಿರು
ಕೇಡು
ನನದಲ್ಲ ನಿನದು ನನಗಾವ
ಸೋಲೂ
ಗೆಲುವೂ ಇಲ್ಲ

ಆ
ಜೇಡನ
ಬಲೆಯಲಿ ಸಿಲುಕಿರುವ
ಕಪ್ಪೆ
ಕಾಲುಗಳ ಬಿಡಿಸುವ ಜೇಡ
ನೋಡು
ತನದಲ್ಲದುದ ತಾನೆಂದೂ ತಿನದು
ಅರಿವು
ತನ್ನೊಳಗಲ್ಲದೆ ಅನ್ಯದೊಳಿಲ್ಲ
ತೋರದು
ಅಡಗದು ಕಂಡೀತೇ ಮೂಗಿನ
ತುದಿ
ಸುಮ್ಮನೆ ಇರು.

Previous post ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
Next post ದಾರಿ ಬಿಡಿ…
ದಾರಿ ಬಿಡಿ…

Related Posts

ಗಡಿಯಲ್ಲಿ ನಿಂತು…
Share:
Poems

ಗಡಿಯಲ್ಲಿ ನಿಂತು…

May 6, 2021 ಜ್ಯೋತಿಲಿಂಗಪ್ಪ
ಈ ಬಯಲಲಿ ಕುಳಿತು ಹಿಂದಣ ಹೆಜ್ಜೆಗಳ ಎಣಿಸುತಿರುವೆ ಖಾಲಿ ಮುಖವಿಲ್ಲದ ನಾಳೆಗಳು ಮುಖವಾಡದ ನಿನ್ನೆಗಳು ಮುಖಾಮುಖಿ ಯ ಇಂದು ಈ ಅರಳಿದ ಅರಳೆ ರಾಟೆಯಲಿ ಸಿಲುಕಿ ನೂಲು ಹಾಸು ಹೊಕ್ಕು...
ಸಂತೆಯೊಳಗಿನ ಧ್ಯಾನ
Share:
Poems

ಸಂತೆಯೊಳಗಿನ ಧ್ಯಾನ

May 10, 2022 ಜ್ಯೋತಿಲಿಂಗಪ್ಪ
ಈಗ ಗಾಳಿಗೆ ತೂರಿ ಹೋಗುವ ಜೊಳ್ಳು ಬಯಲೊಳಗೆ ಜೋಳಿಗೆಗೆ ಖಾಲಿ ಈ ಊರೇನು ಆ ಊರೇನು ಇರದ ಊರಲಿ ಕಾಲೂರುವೆ ಮೋಡದ ಮರೆಯಿಂದ ಬಂದ ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ ಗಾಳಿಯೂ ತೂರದ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಅರಸೊತ್ತಿಗೆಯಿಂದ ಅರಿವಿನೆಡೆಗೆ
ಅರಸೊತ್ತಿಗೆಯಿಂದ ಅರಿವಿನೆಡೆಗೆ
April 29, 2018
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
Copyright © 2026 Bayalu