Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೋತ ಅಂಗೈಗಳಿಗಂಟಿ…
Share:
Poems October 19, 2025 ಜಬೀವುಲ್ಲಾ ಎಂ.ಅಸದ್

ಸೋತ ಅಂಗೈಗಳಿಗಂಟಿ…

ನನ್ನಲ್ಲಿ ನೀನು ತುಂಬಿರಲು
ನಿನ್ನಲ್ಲಿಲ್ಲ ನಾನು
ಇಲ್ಲವೆಂಬ ಅರಿವು ನನ್ನಲ್ಲಿರಲು
ಇನ್ನೂ ಹೇಳಲಿ ಏನು?

ಒಡೆದ ಗಾಜಿನ ಲೋಟ
ಚೂರಾದ ಹೃದಯದ ನೋಟ
ಎರಡೂ ಒಂದೇ ಆಗಿರುವಾಗ ಈಗ

ಮುರಿದ ರೆಕ್ಕೆಯ ಹಕ್ಕಿಯ ಶೋಕ
ಮನ ಅನುಭವಿಸುತ್ತಿರುವಾಗ
ಮಾತು ಹುಟ್ಟಿತು ಹೇಗೆ ಈ ಸಮಯ
ಮೌನವೇ ಎಲ್ಲವನ್ನು ಸಂಹರಿಸುವಾಗ

ದಿಕ್ಕಿಲ್ಲದ ದಾರಿಯ ಒಂಟಿ ಪಯಣಿಗ
ನಡೆದಷ್ಟು ದೂರ
ತಲುಪುವುದಾದರೂ ಎಲ್ಲಿಗೆ?
ಕೊನೆ ಮುಟ್ಟುವುದಾದರೂ ಹೇಗೆ?
ಕಾಣದ ಗಮ್ಯ, ಅನಾಥ ಭಾವ
ಹುಟ್ಟು ಅರಸುತ್ತಿದೆ ಸಾವಿನ ಮನೆಯಂಗಳವ
ಸೋತ ಅಂಗೈಗಳಿಗಂಟಿ ನಗುತಿದೆ ಶೂನ್ಯ

ಅದೇ ಎಲ್ಲಾ… ಎಲ್ಲಾ…

Previous post ಮಾಯದ ಗಾಯ
ಮಾಯದ ಗಾಯ
Next post ಹಣತೆಯ ಹಂಗು
ಹಣತೆಯ ಹಂಗು

Related Posts

ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...
ಕಣ್ಣ ಪರಿಧಿ
Share:
Poems

ಕಣ್ಣ ಪರಿಧಿ

February 10, 2023 ಜ್ಯೋತಿಲಿಂಗಪ್ಪ
ಕಣ್ಣ ಬಿಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಮುಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಒಳಗ ಕಾಣುವುದು ಕಾಣು ಕಾಣು ಕಾಣು ಏನು ಏನೂ ಇಲ್ಲ ಕಣ್ಣ ಪರದೆಯ ದಾಟಿ ಹೋದವರು ಯಾರು...

Comments 2

  1. ಗಿರೀಶ್ ವಿ
    Oct 27, 2025 Reply

    ಕಾಣದ ಗಮ್ಯ, ಕಾಣುವ ಶೂನ್ಯ… ಗಹನವಾದ ಪರಿಕಲ್ಪನೆಗಳು ಸರ್.

  2. ಜಾಹ್ನವಿ ಬೆಂಗಳೂರು
    Nov 7, 2025 Reply

    ಸೋಲು- ಗೆಲುವು ಎರಡೂ ನಮ್ಮ ನಮ್ಮ perceptions….. ಜಗದ ದುಃಖಕ್ಕೇಲ್ಲಾ ಸೋಲೇ ಕಾರಣವಲ್ಲಾ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
June 14, 2024
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಲಿಂಗಾಯತ ಮಠಗಳು ಮತ್ತು ಬಸವತತ್ವ
ಲಿಂಗಾಯತ ಮಠಗಳು ಮತ್ತು ಬಸವತತ್ವ
July 21, 2024
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
Copyright © 2026 Bayalu