Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೋತ ಅಂಗೈಗಳಿಗಂಟಿ…
Share:
Poems October 19, 2025 ಜಬೀವುಲ್ಲಾ ಎಂ.ಅಸದ್

ಸೋತ ಅಂಗೈಗಳಿಗಂಟಿ…

ನನ್ನಲ್ಲಿ ನೀನು ತುಂಬಿರಲು
ನಿನ್ನಲ್ಲಿಲ್ಲ ನಾನು
ಇಲ್ಲವೆಂಬ ಅರಿವು ನನ್ನಲ್ಲಿರಲು
ಇನ್ನೂ ಹೇಳಲಿ ಏನು?

ಒಡೆದ ಗಾಜಿನ ಲೋಟ
ಚೂರಾದ ಹೃದಯದ ನೋಟ
ಎರಡೂ ಒಂದೇ ಆಗಿರುವಾಗ ಈಗ

ಮುರಿದ ರೆಕ್ಕೆಯ ಹಕ್ಕಿಯ ಶೋಕ
ಮನ ಅನುಭವಿಸುತ್ತಿರುವಾಗ
ಮಾತು ಹುಟ್ಟಿತು ಹೇಗೆ ಈ ಸಮಯ
ಮೌನವೇ ಎಲ್ಲವನ್ನು ಸಂಹರಿಸುವಾಗ

ದಿಕ್ಕಿಲ್ಲದ ದಾರಿಯ ಒಂಟಿ ಪಯಣಿಗ
ನಡೆದಷ್ಟು ದೂರ
ತಲುಪುವುದಾದರೂ ಎಲ್ಲಿಗೆ?
ಕೊನೆ ಮುಟ್ಟುವುದಾದರೂ ಹೇಗೆ?
ಕಾಣದ ಗಮ್ಯ, ಅನಾಥ ಭಾವ
ಹುಟ್ಟು ಅರಸುತ್ತಿದೆ ಸಾವಿನ ಮನೆಯಂಗಳವ
ಸೋತ ಅಂಗೈಗಳಿಗಂಟಿ ನಗುತಿದೆ ಶೂನ್ಯ

ಅದೇ ಎಲ್ಲಾ… ಎಲ್ಲಾ…

Previous post ಮಾಯದ ಗಾಯ
ಮಾಯದ ಗಾಯ
Next post ಹಣತೆಯ ಹಂಗು
ಹಣತೆಯ ಹಂಗು

Related Posts

ಸಂತೆಯೊಳಗಿನ ಧ್ಯಾನ
Share:
Poems

ಸಂತೆಯೊಳಗಿನ ಧ್ಯಾನ

May 10, 2022 ಜ್ಯೋತಿಲಿಂಗಪ್ಪ
ಈಗ ಗಾಳಿಗೆ ತೂರಿ ಹೋಗುವ ಜೊಳ್ಳು ಬಯಲೊಳಗೆ ಜೋಳಿಗೆಗೆ ಖಾಲಿ ಈ ಊರೇನು ಆ ಊರೇನು ಇರದ ಊರಲಿ ಕಾಲೂರುವೆ ಮೋಡದ ಮರೆಯಿಂದ ಬಂದ ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ ಗಾಳಿಯೂ ತೂರದ...
ಭವ ರಾಟಾಳ
Share:
Poems

ಭವ ರಾಟಾಳ

September 10, 2022 ಕೆ.ಆರ್ ಮಂಗಳಾ
ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...

Comments 2

  1. ಗಿರೀಶ್ ವಿ
    Oct 27, 2025 Reply

    ಕಾಣದ ಗಮ್ಯ, ಕಾಣುವ ಶೂನ್ಯ… ಗಹನವಾದ ಪರಿಕಲ್ಪನೆಗಳು ಸರ್.

  2. ಜಾಹ್ನವಿ ಬೆಂಗಳೂರು
    Nov 7, 2025 Reply

    ಸೋಲು- ಗೆಲುವು ಎರಡೂ ನಮ್ಮ ನಮ್ಮ perceptions….. ಜಗದ ದುಃಖಕ್ಕೇಲ್ಲಾ ಸೋಲೇ ಕಾರಣವಲ್ಲಾ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಸೂರ್ಯ
ಸೂರ್ಯ
January 8, 2023
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ದೇಹ ದೇವಾಲಯ
ದೇಹ ದೇವಾಲಯ
June 12, 2025
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
Copyright © 2026 Bayalu