Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಣತೆ ಸಾಕು
Share:
Poems September 14, 2024 ಜ್ಯೋತಿಲಿಂಗಪ್ಪ

ಹಣತೆ ಸಾಕು

ಬೆಳಕ ನೋಡಲಾಗದ ಕಣ್ಣು
ದೀಪ ಹಚ್ಚಿದರೆ ಕಣ್ಣು ಕತ್ತಲು
ಹಚ್ಚದಿರೆ ಹೃದಯ ಕತ್ತಲು

ದೀಪ ಬೆಳಗಿಸುವ ಕಷ್ಟ

ಕತ್ತಲೆಂಬುದು ಕತ್ತಲಾಗದು
ಬೆಳಕೆಂಬುದು ಬೆಳಕಾಗದು

ಏನೂ ಕೂಡಿಡದೆ
ಕಳೆಯುವುದು ಹೇಗೆ

ಈಗ
ಇರುವ ಸುಳ್ಳೇ ಅರಗಿಸಲಾಗಿಲ್ಲ
ಇನ್ನೇನು ಹೊಸಾ ಸುಳ್ಳು

ಬೆಟ್ಟದ
ತುದಿಯ ಬಂಡೆ
ಬಂಡೆಯ ಮೇಲೆ ನಿಂತಿರುವ
ಹೆಮ್ಮೆ
ಅಲುಗಾಡದೆ ಬಂಡೆ

ನಾನು ಸಾಯದೆ
ಕಾಣುವುದೇ ಬಯಲು

ಮತ್ತೇನೂ ಇಲ್ಲ ಸಾಯಲಿ

ಮುದ್ದಾದ ಮಿಥ್ಯ ಈ ದೇವರು

ಮನ ಮರೆತು
ಅಚಲವಾಗಿ ಹಾಯ್ಕು

ಮರೆತುದು ಏನು

ಈ ಕತ್ತಲು
ಬೆಳಗಿಸಲು ಒಂದು
ಹಣತೆ ಸಾಕು

ದೀಪ ಹಚ್ಚಲು ಗಾಳಿಗೆ
ಹೇಳಿರುವೆ.

Previous post ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
Next post ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!

Related Posts

ಮೀನಿನ ಬಯಕೆ
Share:
Poems

ಮೀನಿನ ಬಯಕೆ

June 10, 2023 ಡಾ. ಕೆ. ಎಸ್. ಮಲ್ಲೇಶ್
ಒಮ್ಮೆ ಒಂದು ಪುಟ್ಟ ಮೀನು ಈಜಿ ದಡದ ಬಳಿಗೆ ಬಂದು ಕೆರೆಯ ಪಕ್ಕ ಮನುಜನೊಬ್ಬನನ್ನು ಕಂಡಿತು ಬಟ್ಟಲಂತ ಕಣ್ಣ ತೆರೆದು ಪುಟ್ಟ ಮೀನು ನಗೆಯ ಸೂಸಿ ಗೆಳೆಯನಾಗು ನನಗೆ ಎನುತ ಅಂಗಲಾಚಿತು...
WHO AM I?
Share:
Poems

WHO AM I?

June 17, 2020 Chittara K. V
I have a wide brain And a open mind I think a lot at times But I come to a point To ask myself- Who am I? I swallow the pain But speak with the...

Comments 4

  1. ಲಹರಿ ಬೆಂಗಳೂರು
    Sep 19, 2024 Reply

    ತಮಂಧ ಘನವ ಓಡಿಸಲು ಹಣತೆ ಸಾಕು. ಬಯಲ ಅರಿಯಲು ‘ನಾನು’ ಸಾಯಲೇ ಬೇಕು… ಕವನ ಅರ್ಥಗರ್ಭಿತ.💥💥

  2. ಸಂತೋಷ ಕುಮಾರ್, ಸಿ
    Sep 22, 2024 Reply

    ದೇವರು ಅದ್ಭುತ ಸುಳ್ಳು ಅಂತ ಹೇಳುತ್ತಿದ್ದೆ, ‘ಮುದ್ದಾದ ಮಿಥ್ಯ’ ಅನ್ನೋದು ಇನ್ನೂ ಮುದ್ದಾಗಿದೆ ಸರ್😀

  3. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Sep 27, 2024 Reply

    ನಿಮ್ಮ ಓದಿಗಾಗಿ ಧನ್ಯವಾದಗಳು

  4. ಶ್ರೀಶೈಲ ಹಾದಿಮನಿ, ಅಮೆರಿಕ
    Oct 3, 2024 Reply

    ತುಂಬಾ ಚೆನ್ನಾಗಿ ರಚಿತವಾದ ಕವನಗಳು. ತಮ್ಮ ನಿರಂತರ ಸೇವೆಗೆ ಧನ್ಯವಾದಗಳು 💐🙏

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ಗುರುಪಥ
ಗುರುಪಥ
January 4, 2020
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ಆಸರೆ
ಆಸರೆ
August 6, 2022
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
ಶರಣನಾಗುವ ಪರಿ
ಶರಣನಾಗುವ ಪರಿ
June 3, 2019
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
Copyright © 2025 Bayalu