Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಣತೆ ಸಾಕು
Share:
Poems September 14, 2024 ಜ್ಯೋತಿಲಿಂಗಪ್ಪ

ಹಣತೆ ಸಾಕು

ಬೆಳಕ ನೋಡಲಾಗದ ಕಣ್ಣು
ದೀಪ ಹಚ್ಚಿದರೆ ಕಣ್ಣು ಕತ್ತಲು
ಹಚ್ಚದಿರೆ ಹೃದಯ ಕತ್ತಲು

ದೀಪ ಬೆಳಗಿಸುವ ಕಷ್ಟ

ಕತ್ತಲೆಂಬುದು ಕತ್ತಲಾಗದು
ಬೆಳಕೆಂಬುದು ಬೆಳಕಾಗದು

ಏನೂ ಕೂಡಿಡದೆ
ಕಳೆಯುವುದು ಹೇಗೆ

ಈಗ
ಇರುವ ಸುಳ್ಳೇ ಅರಗಿಸಲಾಗಿಲ್ಲ
ಇನ್ನೇನು ಹೊಸಾ ಸುಳ್ಳು

ಬೆಟ್ಟದ
ತುದಿಯ ಬಂಡೆ
ಬಂಡೆಯ ಮೇಲೆ ನಿಂತಿರುವ
ಹೆಮ್ಮೆ
ಅಲುಗಾಡದೆ ಬಂಡೆ

ನಾನು ಸಾಯದೆ
ಕಾಣುವುದೇ ಬಯಲು

ಮತ್ತೇನೂ ಇಲ್ಲ ಸಾಯಲಿ

ಮುದ್ದಾದ ಮಿಥ್ಯ ಈ ದೇವರು

ಮನ ಮರೆತು
ಅಚಲವಾಗಿ ಹಾಯ್ಕು

ಮರೆತುದು ಏನು

ಈ ಕತ್ತಲು
ಬೆಳಗಿಸಲು ಒಂದು
ಹಣತೆ ಸಾಕು

ದೀಪ ಹಚ್ಚಲು ಗಾಳಿಗೆ
ಹೇಳಿರುವೆ.

Previous post ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
Next post ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!

Related Posts

ಸುತ್ತಿ ಸುಳಿವ ಆಟ
Share:
Poems

ಸುತ್ತಿ ಸುಳಿವ ಆಟ

May 6, 2021 ಕೆ.ಆರ್ ಮಂಗಳಾ
ಜೀವದ ಗೆಳೆಯಾ ಅಂತ ಕಟ್ಟಿಕೊಂಡೆ ಪ್ರಾಣ ಹಿಂಡೊ ಗಂಡನಾಗಿ ನನ್ನ ಆಳುತಾನವ್ವ ಜೇನಿನಂಥ ಮಾತುಗಳ ನಂಬಿಬಿಟ್ಟೆ ಗಾಳಿಯಲ್ಲಿ ಅವನ ಜೊತೆ ತೇಲಿಬಿಟ್ಟೆ ಗಿರಿಗಿಟ್ಲೆ ಆಟದಲ್ಲಿ...
ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...

Comments 4

  1. ಲಹರಿ ಬೆಂಗಳೂರು
    Sep 19, 2024 Reply

    ತಮಂಧ ಘನವ ಓಡಿಸಲು ಹಣತೆ ಸಾಕು. ಬಯಲ ಅರಿಯಲು ‘ನಾನು’ ಸಾಯಲೇ ಬೇಕು… ಕವನ ಅರ್ಥಗರ್ಭಿತ.💥💥

  2. ಸಂತೋಷ ಕುಮಾರ್, ಸಿ
    Sep 22, 2024 Reply

    ದೇವರು ಅದ್ಭುತ ಸುಳ್ಳು ಅಂತ ಹೇಳುತ್ತಿದ್ದೆ, ‘ಮುದ್ದಾದ ಮಿಥ್ಯ’ ಅನ್ನೋದು ಇನ್ನೂ ಮುದ್ದಾಗಿದೆ ಸರ್😀

  3. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Sep 27, 2024 Reply

    ನಿಮ್ಮ ಓದಿಗಾಗಿ ಧನ್ಯವಾದಗಳು

  4. ಶ್ರೀಶೈಲ ಹಾದಿಮನಿ, ಅಮೆರಿಕ
    Oct 3, 2024 Reply

    ತುಂಬಾ ಚೆನ್ನಾಗಿ ರಚಿತವಾದ ಕವನಗಳು. ತಮ್ಮ ನಿರಂತರ ಸೇವೆಗೆ ಧನ್ಯವಾದಗಳು 💐🙏

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
WHO AM I?
WHO AM I?
June 17, 2020
ಸೂರ್ಯ
ಸೂರ್ಯ
January 8, 2023
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
Copyright © 2025 Bayalu