Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಣತೆ ಸಾಕು
Share:
Poems September 14, 2024 ಜ್ಯೋತಿಲಿಂಗಪ್ಪ

ಹಣತೆ ಸಾಕು

ಬೆಳಕ ನೋಡಲಾಗದ ಕಣ್ಣು
ದೀಪ ಹಚ್ಚಿದರೆ ಕಣ್ಣು ಕತ್ತಲು
ಹಚ್ಚದಿರೆ ಹೃದಯ ಕತ್ತಲು

ದೀಪ ಬೆಳಗಿಸುವ ಕಷ್ಟ

ಕತ್ತಲೆಂಬುದು ಕತ್ತಲಾಗದು
ಬೆಳಕೆಂಬುದು ಬೆಳಕಾಗದು

ಏನೂ ಕೂಡಿಡದೆ
ಕಳೆಯುವುದು ಹೇಗೆ

ಈಗ
ಇರುವ ಸುಳ್ಳೇ ಅರಗಿಸಲಾಗಿಲ್ಲ
ಇನ್ನೇನು ಹೊಸಾ ಸುಳ್ಳು

ಬೆಟ್ಟದ
ತುದಿಯ ಬಂಡೆ
ಬಂಡೆಯ ಮೇಲೆ ನಿಂತಿರುವ
ಹೆಮ್ಮೆ
ಅಲುಗಾಡದೆ ಬಂಡೆ

ನಾನು ಸಾಯದೆ
ಕಾಣುವುದೇ ಬಯಲು

ಮತ್ತೇನೂ ಇಲ್ಲ ಸಾಯಲಿ

ಮುದ್ದಾದ ಮಿಥ್ಯ ಈ ದೇವರು

ಮನ ಮರೆತು
ಅಚಲವಾಗಿ ಹಾಯ್ಕು

ಮರೆತುದು ಏನು

ಈ ಕತ್ತಲು
ಬೆಳಗಿಸಲು ಒಂದು
ಹಣತೆ ಸಾಕು

ದೀಪ ಹಚ್ಚಲು ಗಾಳಿಗೆ
ಹೇಳಿರುವೆ.

Previous post ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
Next post ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!

Related Posts

ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
ನನ್ನೆದುರು ನಾ…
Share:
Poems

ನನ್ನೆದುರು ನಾ…

March 6, 2024 ಕೆ.ಆರ್ ಮಂಗಳಾ
ಅದೇಕೋ ಮೊನ್ನೆ ಮೊನ್ನೆ ಸಂತೆ ತೋರುವೆ, ಜಾತ್ರೆ ನೋಡುವೆ ನಡಿ ನನ್ನೊಡನೆ ಎಂದ ಗುರು ಹಿಗ್ಗಿನಲಿ, ಗೆಲುವಿನಲಿ ಚೆಂದದ ಸಿಂಗಾರದಲಿ ಹೊರಟಿತ್ತು ನನ್ನ ಮೆರವಣಿಗೆ ಸಂಭ್ರಮವೇನು,...

Comments 4

  1. ಲಹರಿ ಬೆಂಗಳೂರು
    Sep 19, 2024 Reply

    ತಮಂಧ ಘನವ ಓಡಿಸಲು ಹಣತೆ ಸಾಕು. ಬಯಲ ಅರಿಯಲು ‘ನಾನು’ ಸಾಯಲೇ ಬೇಕು… ಕವನ ಅರ್ಥಗರ್ಭಿತ.💥💥

  2. ಸಂತೋಷ ಕುಮಾರ್, ಸಿ
    Sep 22, 2024 Reply

    ದೇವರು ಅದ್ಭುತ ಸುಳ್ಳು ಅಂತ ಹೇಳುತ್ತಿದ್ದೆ, ‘ಮುದ್ದಾದ ಮಿಥ್ಯ’ ಅನ್ನೋದು ಇನ್ನೂ ಮುದ್ದಾಗಿದೆ ಸರ್😀

  3. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Sep 27, 2024 Reply

    ನಿಮ್ಮ ಓದಿಗಾಗಿ ಧನ್ಯವಾದಗಳು

  4. ಶ್ರೀಶೈಲ ಹಾದಿಮನಿ, ಅಮೆರಿಕ
    Oct 3, 2024 Reply

    ತುಂಬಾ ಚೆನ್ನಾಗಿ ರಚಿತವಾದ ಕವನಗಳು. ತಮ್ಮ ನಿರಂತರ ಸೇವೆಗೆ ಧನ್ಯವಾದಗಳು 💐🙏

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ಅಲ್ಲೀ ಸಾಹೇಬರು
ಅಲ್ಲೀ ಸಾಹೇಬರು
February 16, 2026
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ವಚನಗಳಲ್ಲಿ ಖಗೋಳ ವಿಜ್ಞಾನ
ವಚನಗಳಲ್ಲಿ ಖಗೋಳ ವಿಜ್ಞಾನ
September 7, 2020
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
Copyright © 2026 Bayalu