Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಣತೆ ಸಾಕು
Share:
Poems September 14, 2024 ಜ್ಯೋತಿಲಿಂಗಪ್ಪ

ಹಣತೆ ಸಾಕು

ಬೆಳಕ ನೋಡಲಾಗದ ಕಣ್ಣು
ದೀಪ ಹಚ್ಚಿದರೆ ಕಣ್ಣು ಕತ್ತಲು
ಹಚ್ಚದಿರೆ ಹೃದಯ ಕತ್ತಲು

ದೀಪ ಬೆಳಗಿಸುವ ಕಷ್ಟ

ಕತ್ತಲೆಂಬುದು ಕತ್ತಲಾಗದು
ಬೆಳಕೆಂಬುದು ಬೆಳಕಾಗದು

ಏನೂ ಕೂಡಿಡದೆ
ಕಳೆಯುವುದು ಹೇಗೆ

ಈಗ
ಇರುವ ಸುಳ್ಳೇ ಅರಗಿಸಲಾಗಿಲ್ಲ
ಇನ್ನೇನು ಹೊಸಾ ಸುಳ್ಳು

ಬೆಟ್ಟದ
ತುದಿಯ ಬಂಡೆ
ಬಂಡೆಯ ಮೇಲೆ ನಿಂತಿರುವ
ಹೆಮ್ಮೆ
ಅಲುಗಾಡದೆ ಬಂಡೆ

ನಾನು ಸಾಯದೆ
ಕಾಣುವುದೇ ಬಯಲು

ಮತ್ತೇನೂ ಇಲ್ಲ ಸಾಯಲಿ

ಮುದ್ದಾದ ಮಿಥ್ಯ ಈ ದೇವರು

ಮನ ಮರೆತು
ಅಚಲವಾಗಿ ಹಾಯ್ಕು

ಮರೆತುದು ಏನು

ಈ ಕತ್ತಲು
ಬೆಳಗಿಸಲು ಒಂದು
ಹಣತೆ ಸಾಕು

ದೀಪ ಹಚ್ಚಲು ಗಾಳಿಗೆ
ಹೇಳಿರುವೆ.

Previous post ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
Next post ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!

Related Posts

ಮನವೇ ಮನವೇ…
Share:
Poems

ಮನವೇ ಮನವೇ…

May 6, 2020 Bayalu
ಭವ ಸಂಸಾರದ ಸವಿಯನು ನಂಬಿ ಸವೆಯದಿರು ಮನವೇ ಶಿವಜ್ಞಾನಿಗಳ ತವಕದಿ ಬೆರಸು ಸವಿಯುಂಟಲೆ ಮನವೇ //ಪ// ಎಲುವನು ಕಡಿದ ಸೊಣಗನು ಕಂಡ ಫಲದಂತೆ ಮನವೇ ವಿಲವಿಲ ಎನ್ನುತ ನಲುಗಿದೆ ನೀನು...
ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...

Comments 4

  1. ಲಹರಿ ಬೆಂಗಳೂರು
    Sep 19, 2024 Reply

    ತಮಂಧ ಘನವ ಓಡಿಸಲು ಹಣತೆ ಸಾಕು. ಬಯಲ ಅರಿಯಲು ‘ನಾನು’ ಸಾಯಲೇ ಬೇಕು… ಕವನ ಅರ್ಥಗರ್ಭಿತ.💥💥

  2. ಸಂತೋಷ ಕುಮಾರ್, ಸಿ
    Sep 22, 2024 Reply

    ದೇವರು ಅದ್ಭುತ ಸುಳ್ಳು ಅಂತ ಹೇಳುತ್ತಿದ್ದೆ, ‘ಮುದ್ದಾದ ಮಿಥ್ಯ’ ಅನ್ನೋದು ಇನ್ನೂ ಮುದ್ದಾಗಿದೆ ಸರ್😀

  3. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Sep 27, 2024 Reply

    ನಿಮ್ಮ ಓದಿಗಾಗಿ ಧನ್ಯವಾದಗಳು

  4. ಶ್ರೀಶೈಲ ಹಾದಿಮನಿ, ಅಮೆರಿಕ
    Oct 3, 2024 Reply

    ತುಂಬಾ ಚೆನ್ನಾಗಿ ರಚಿತವಾದ ಕವನಗಳು. ತಮ್ಮ ನಿರಂತರ ಸೇವೆಗೆ ಧನ್ಯವಾದಗಳು 💐🙏

Leave a Reply to ಲಹರಿ ಬೆಂಗಳೂರು Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
March 9, 2023
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!
September 14, 2024
ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
June 5, 2021
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಶರಣ ಕುಂಬಾರಣ್ಣನ ಸರಸ ದಾಂಪತ್ಯ
ಶರಣ ಕುಂಬಾರಣ್ಣನ ಸರಸ ದಾಂಪತ್ಯ
May 1, 2019
Copyright © 2025 Bayalu