Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಣತೆ ಸಾಕು
Share:
Poems September 14, 2024 ಜ್ಯೋತಿಲಿಂಗಪ್ಪ

ಹಣತೆ ಸಾಕು

ಬೆಳಕ ನೋಡಲಾಗದ ಕಣ್ಣು
ದೀಪ ಹಚ್ಚಿದರೆ ಕಣ್ಣು ಕತ್ತಲು
ಹಚ್ಚದಿರೆ ಹೃದಯ ಕತ್ತಲು

ದೀಪ ಬೆಳಗಿಸುವ ಕಷ್ಟ

ಕತ್ತಲೆಂಬುದು ಕತ್ತಲಾಗದು
ಬೆಳಕೆಂಬುದು ಬೆಳಕಾಗದು

ಏನೂ ಕೂಡಿಡದೆ
ಕಳೆಯುವುದು ಹೇಗೆ

ಈಗ
ಇರುವ ಸುಳ್ಳೇ ಅರಗಿಸಲಾಗಿಲ್ಲ
ಇನ್ನೇನು ಹೊಸಾ ಸುಳ್ಳು

ಬೆಟ್ಟದ
ತುದಿಯ ಬಂಡೆ
ಬಂಡೆಯ ಮೇಲೆ ನಿಂತಿರುವ
ಹೆಮ್ಮೆ
ಅಲುಗಾಡದೆ ಬಂಡೆ

ನಾನು ಸಾಯದೆ
ಕಾಣುವುದೇ ಬಯಲು

ಮತ್ತೇನೂ ಇಲ್ಲ ಸಾಯಲಿ

ಮುದ್ದಾದ ಮಿಥ್ಯ ಈ ದೇವರು

ಮನ ಮರೆತು
ಅಚಲವಾಗಿ ಹಾಯ್ಕು

ಮರೆತುದು ಏನು

ಈ ಕತ್ತಲು
ಬೆಳಗಿಸಲು ಒಂದು
ಹಣತೆ ಸಾಕು

ದೀಪ ಹಚ್ಚಲು ಗಾಳಿಗೆ
ಹೇಳಿರುವೆ.

Previous post ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
Next post ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!

Related Posts

ಕಾಯೋ ಗುರುವೇ…
Share:
Poems

ಕಾಯೋ ಗುರುವೇ…

February 11, 2022 ಕೆ.ಆರ್ ಮಂಗಳಾ
ನಾನು: ಗಾಳಿಯೇ ಆಡದ, ಕತ್ತಲ ಕೋಣ್ಯಾಗ ಕಳೆದು ಹೋಗಿನಿ ನನ ಗುರುವೆ ಚಿಲಕವ ಸರಿಸಿ, ಬಾಗಿಲು ತೆಗೆದು ಬೆಳಕಾ ತೋರಿಸು ನನ ಗುರುವೆ ತಡವುತ ಎಡವುತ, ಅಲ್ಲಲ್ಲೇ ಸುತ್ತುತ ಹೈರಾಣಾಗಿಹೆ...
ಸುತ್ತಿ ಸುಳಿವ ಆಟ
Share:
Poems

ಸುತ್ತಿ ಸುಳಿವ ಆಟ

May 6, 2021 ಕೆ.ಆರ್ ಮಂಗಳಾ
ಜೀವದ ಗೆಳೆಯಾ ಅಂತ ಕಟ್ಟಿಕೊಂಡೆ ಪ್ರಾಣ ಹಿಂಡೊ ಗಂಡನಾಗಿ ನನ್ನ ಆಳುತಾನವ್ವ ಜೇನಿನಂಥ ಮಾತುಗಳ ನಂಬಿಬಿಟ್ಟೆ ಗಾಳಿಯಲ್ಲಿ ಅವನ ಜೊತೆ ತೇಲಿಬಿಟ್ಟೆ ಗಿರಿಗಿಟ್ಲೆ ಆಟದಲ್ಲಿ...

Comments 4

  1. ಲಹರಿ ಬೆಂಗಳೂರು
    Sep 19, 2024 Reply

    ತಮಂಧ ಘನವ ಓಡಿಸಲು ಹಣತೆ ಸಾಕು. ಬಯಲ ಅರಿಯಲು ‘ನಾನು’ ಸಾಯಲೇ ಬೇಕು… ಕವನ ಅರ್ಥಗರ್ಭಿತ.💥💥

  2. ಸಂತೋಷ ಕುಮಾರ್, ಸಿ
    Sep 22, 2024 Reply

    ದೇವರು ಅದ್ಭುತ ಸುಳ್ಳು ಅಂತ ಹೇಳುತ್ತಿದ್ದೆ, ‘ಮುದ್ದಾದ ಮಿಥ್ಯ’ ಅನ್ನೋದು ಇನ್ನೂ ಮುದ್ದಾಗಿದೆ ಸರ್😀

  3. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Sep 27, 2024 Reply

    ನಿಮ್ಮ ಓದಿಗಾಗಿ ಧನ್ಯವಾದಗಳು

  4. ಶ್ರೀಶೈಲ ಹಾದಿಮನಿ, ಅಮೆರಿಕ
    Oct 3, 2024 Reply

    ತುಂಬಾ ಚೆನ್ನಾಗಿ ರಚಿತವಾದ ಕವನಗಳು. ತಮ್ಮ ನಿರಂತರ ಸೇವೆಗೆ ಧನ್ಯವಾದಗಳು 💐🙏

Leave a Reply to ಲಹರಿ ಬೆಂಗಳೂರು Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
ಮನವೇ ಮನವೇ…
ಮನವೇ ಮನವೇ…
May 6, 2020
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
Copyright © 2026 Bayalu