Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಣತೆ ಸಾಕು
Share:
Poems September 14, 2024 ಜ್ಯೋತಿಲಿಂಗಪ್ಪ

ಹಣತೆ ಸಾಕು

ಬೆಳಕ ನೋಡಲಾಗದ ಕಣ್ಣು
ದೀಪ ಹಚ್ಚಿದರೆ ಕಣ್ಣು ಕತ್ತಲು
ಹಚ್ಚದಿರೆ ಹೃದಯ ಕತ್ತಲು

ದೀಪ ಬೆಳಗಿಸುವ ಕಷ್ಟ

ಕತ್ತಲೆಂಬುದು ಕತ್ತಲಾಗದು
ಬೆಳಕೆಂಬುದು ಬೆಳಕಾಗದು

ಏನೂ ಕೂಡಿಡದೆ
ಕಳೆಯುವುದು ಹೇಗೆ

ಈಗ
ಇರುವ ಸುಳ್ಳೇ ಅರಗಿಸಲಾಗಿಲ್ಲ
ಇನ್ನೇನು ಹೊಸಾ ಸುಳ್ಳು

ಬೆಟ್ಟದ
ತುದಿಯ ಬಂಡೆ
ಬಂಡೆಯ ಮೇಲೆ ನಿಂತಿರುವ
ಹೆಮ್ಮೆ
ಅಲುಗಾಡದೆ ಬಂಡೆ

ನಾನು ಸಾಯದೆ
ಕಾಣುವುದೇ ಬಯಲು

ಮತ್ತೇನೂ ಇಲ್ಲ ಸಾಯಲಿ

ಮುದ್ದಾದ ಮಿಥ್ಯ ಈ ದೇವರು

ಮನ ಮರೆತು
ಅಚಲವಾಗಿ ಹಾಯ್ಕು

ಮರೆತುದು ಏನು

ಈ ಕತ್ತಲು
ಬೆಳಗಿಸಲು ಒಂದು
ಹಣತೆ ಸಾಕು

ದೀಪ ಹಚ್ಚಲು ಗಾಳಿಗೆ
ಹೇಳಿರುವೆ.

Previous post ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
Next post ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!

Related Posts

ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...
ಮರೆತೆ…
Share:
Poems

ಮರೆತೆ…

July 4, 2022 ಜ್ಯೋತಿಲಿಂಗಪ್ಪ
ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...

Comments 4

  1. ಲಹರಿ ಬೆಂಗಳೂರು
    Sep 19, 2024 Reply

    ತಮಂಧ ಘನವ ಓಡಿಸಲು ಹಣತೆ ಸಾಕು. ಬಯಲ ಅರಿಯಲು ‘ನಾನು’ ಸಾಯಲೇ ಬೇಕು… ಕವನ ಅರ್ಥಗರ್ಭಿತ.💥💥

  2. ಸಂತೋಷ ಕುಮಾರ್, ಸಿ
    Sep 22, 2024 Reply

    ದೇವರು ಅದ್ಭುತ ಸುಳ್ಳು ಅಂತ ಹೇಳುತ್ತಿದ್ದೆ, ‘ಮುದ್ದಾದ ಮಿಥ್ಯ’ ಅನ್ನೋದು ಇನ್ನೂ ಮುದ್ದಾಗಿದೆ ಸರ್😀

  3. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Sep 27, 2024 Reply

    ನಿಮ್ಮ ಓದಿಗಾಗಿ ಧನ್ಯವಾದಗಳು

  4. ಶ್ರೀಶೈಲ ಹಾದಿಮನಿ, ಅಮೆರಿಕ
    Oct 3, 2024 Reply

    ತುಂಬಾ ಚೆನ್ನಾಗಿ ರಚಿತವಾದ ಕವನಗಳು. ತಮ್ಮ ನಿರಂತರ ಸೇವೆಗೆ ಧನ್ಯವಾದಗಳು 💐🙏

Leave a Reply to ಸಂತೋಷ ಕುಮಾರ್, ಸಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ನೂರನೋದಿ ನೂರಕೇಳಿ…
ನೂರನೋದಿ ನೂರಕೇಳಿ…
April 29, 2018
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
July 10, 2023
ನಾನು ಯಾರು?
ನಾನು ಯಾರು?
December 8, 2021
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
Copyright © 2025 Bayalu