Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾದಿಯ ಹಣತೆ…
Share:
Poems June 12, 2025 ಕೆ.ಆರ್ ಮಂಗಳಾ

ಹಾದಿಯ ಹಣತೆ…

ಕೈಯಲಿ ಹಿಡಿದು
ಅಲೆಯುತಲಿದ್ದೆ
ಕಣ್ಣಿಗೊತ್ತಿಕೊಂಡು
ಕರಗುತಲಿದ್ದೆ
ಎದೆಗವುಚಿಕೊಂಡು
ಮುದ್ದಾಡುತಲಿದ್ದೆ
ತಲೆಯ ಮೇಲೆ ಹೊತ್ತು
ಬೀಗುತಲಿದ್ದೆ…

ವಚನ ರಾಶಿಯಲಿ
ಅರಸುತಲಿದ್ದೆ
ಹಿರಿಯರ ಮಾತಲಿ
ಹುಡುಕುತಲಿದ್ದೆ
ಯೋಗಸಿದ್ದಿಗಳಿಗೆ
ತವಕಿಸುತಿದ್ದೆ
ಪೂಜೆ-ಪ್ರಾರ್ಥನೆಯಲಿ
ಪರಿತಪಿಸುತಿದ್ದೆ…

ಅಲ್ಲೆಲ್ಲೋ ಮಿಂಚಿದಂತೆ
ಇಲ್ಲೇನೋ ಹೊಳೆದಂತೆ
ಮತ್ತೆಲ್ಲೋ ಸುಳಿದಂತೆ
ಸಿಕ್ಕು ಸಿಗದ
ಬಿಸಿಲ್ಗುದುರೆಯಂತೆ…

ನೀರು ಹಿಡಿದು
ಬಾಯಾರಿ ಬಳಲುವ
ಬುತ್ತಿ ಹಿಡಿದು
ಹಸಿವಿಗೆ ಹಲಬುವ
ಬೆಪ್ಪುತನಕೆ ಮರುಗಿ
ಬಂದ ನೋಡವ್ವಾ… ನನ್ನ ಗುರು

ಕಣ್ಣೊಳಿತ್ತು
ಕಾರುಣ್ಯದ ಕಡಲು
ಹೃದಯವೋ
ವಾತ್ಸಲ್ಯದ ಒಡಲು
ಮಾತುಗಳೋ
ಚಾಟಿಯ ಏಟು

ಜ್ಞಾನದ ಬಣವೆಗೆ
ಕಿಚ್ಚನು ಹಚ್ಚಿದ
ಭಾವುಕ ಭ್ರಮೆಗೆ
ಬೆಂಕಿಯ ಹಾಕಿದ
ಕಳೆ-ಕೊಳೆ ತುಂಬಿದ
ಮನವ ತೊಳೆಸಿದ
ಕಣ್ಣಿಗೆ ಮೆತ್ತಿದ
ಪೊರೆಗಳ ಹರಿಸಿದ

ಅವಿತಿಹ ಅಹಮಿನ
ಆಟವ ತೋರಿಸಿ
ನಿಜನೆಲೆ ಅರಿಯಲು
ದಾರಿಯ ಮಾಡಿದ
ಹಿಂದಣ ಹಂಗಿನ
ಸಂಗವ ಬಿಡಿಸಿದ
ಮುಂದಣ ಮಾಯೆಯ
ತೆರೆಯನು ಸರಿಸಿದ

ಮಂತ್ರವ ಮರೆಸಿದ
ಮಾತನು ಬಿಡಿಸಿದ
ಮೌನದ ಬಯಲಿಗೆ
ಮಾರ್ಗವ ತೋರಿದ

Previous post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
Next post ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ

Related Posts

ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
ರೆಕ್ಕೆ ಬಿಚ್ಚಿ…
Share:
Poems

ರೆಕ್ಕೆ ಬಿಚ್ಚಿ…

May 8, 2024 ಕೆ.ಆರ್ ಮಂಗಳಾ
‘ವರ್ಚ್ಯುವಲ್ ವರ್ಲ್ಡ್’ ಎನುವುದು ಕಂಪ್ಯೂಟರ್ ಯುಗದ ಕೂಸಲ್ಲ ಸ್ವಾಮಿ… ಅದರದು ಅನಾದಿ ಇತಿಹಾಸ ಸರ್ವವ್ಯಾಪಿ, ಸರ್ವಶಕ್ತ ಸ್ವರೂಪಿ ಸೂರ್ಯನ ಸುತ್ತ ಭೂಮಿ ಸುತ್ತಿದರೆ ಇದರ...

Comments 3

  1. Dr. K.S.Mallesh, Mysuru
    Jun 12, 2025 Reply

    ನಿಮ್ಮ ಕವನ “ಹಾದಿಯ ಹಣತೆ” ( ಅರಿವಿನ ಹಣತೆ ಅಲ್ಲ) ಸರಳ ಭಾಷೆ ಚಿಕ್ಕ ಸಾಲುಗಳಲ್ಲಿ ನಿಮ್ಮ ನಿರಂತರ ಹುಡುಕಾಟದ ದಾರಿಯಲ್ಲಿ ಸಿಕ್ಕ ಗುರುವಿನ ಬಗ್ಗೆ ಹೃದ್ಯವಾಗಿ ಮೂಡಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಗುರುವು ನಿಜವಾದ ಆಧ್ಯಾತ್ಮದ ದಾರಿ ತೋರಿದ ಹಾದಿಯ ಹಣತೆ. ಕವನ ತುಂಬಾ ಚೆನ್ನಾಗಿದೆ.

  3. Mate Kasturidevi
    Jun 19, 2025 Reply

    ಹಾದಿಯ ಹಣತೆಯ ಬೆಳಕಲ್ಲಿ ನಿಮ್ಮ ಮನದ ಅಳಲು ಜತೆಗೆ ಅರಸುವ ಧಾವಂತ ನಿಚ್ಚಳವಾಗಿ ಕಾಣಬರುತ್ತಿದೆ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗಂಟಿನ ನಂಟು
ಗಂಟಿನ ನಂಟು
November 7, 2020
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ವಚನಗಳ ಓದು ಮತ್ತು ಅರ್ಥೈಸುವಿಕೆ
ವಚನಗಳ ಓದು ಮತ್ತು ಅರ್ಥೈಸುವಿಕೆ
August 5, 2018
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
Copyright © 2026 Bayalu