Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾದಿಯ ಹಣತೆ…
Share:
Poems June 12, 2025 ಕೆ.ಆರ್ ಮಂಗಳಾ

ಹಾದಿಯ ಹಣತೆ…

ಕೈಯಲಿ ಹಿಡಿದು
ಅಲೆಯುತಲಿದ್ದೆ
ಕಣ್ಣಿಗೊತ್ತಿಕೊಂಡು
ಕರಗುತಲಿದ್ದೆ
ಎದೆಗವುಚಿಕೊಂಡು
ಮುದ್ದಾಡುತಲಿದ್ದೆ
ತಲೆಯ ಮೇಲೆ ಹೊತ್ತು
ಬೀಗುತಲಿದ್ದೆ…

ವಚನ ರಾಶಿಯಲಿ
ಅರಸುತಲಿದ್ದೆ
ಹಿರಿಯರ ಮಾತಲಿ
ಹುಡುಕುತಲಿದ್ದೆ
ಯೋಗಸಿದ್ದಿಗಳಿಗೆ
ತವಕಿಸುತಿದ್ದೆ
ಪೂಜೆ-ಪ್ರಾರ್ಥನೆಯಲಿ
ಪರಿತಪಿಸುತಿದ್ದೆ…

ಅಲ್ಲೆಲ್ಲೋ ಮಿಂಚಿದಂತೆ
ಇಲ್ಲೇನೋ ಹೊಳೆದಂತೆ
ಮತ್ತೆಲ್ಲೋ ಸುಳಿದಂತೆ
ಸಿಕ್ಕು ಸಿಗದ
ಬಿಸಿಲ್ಗುದುರೆಯಂತೆ…

ನೀರು ಹಿಡಿದು
ಬಾಯಾರಿ ಬಳಲುವ
ಬುತ್ತಿ ಹಿಡಿದು
ಹಸಿವಿಗೆ ಹಲಬುವ
ಬೆಪ್ಪುತನಕೆ ಮರುಗಿ
ಬಂದ ನೋಡವ್ವಾ… ನನ್ನ ಗುರು

ಕಣ್ಣೊಳಿತ್ತು
ಕಾರುಣ್ಯದ ಕಡಲು
ಹೃದಯವೋ
ವಾತ್ಸಲ್ಯದ ಒಡಲು
ಮಾತುಗಳೋ
ಚಾಟಿಯ ಏಟು

ಜ್ಞಾನದ ಬಣವೆಗೆ
ಕಿಚ್ಚನು ಹಚ್ಚಿದ
ಭಾವುಕ ಭ್ರಮೆಗೆ
ಬೆಂಕಿಯ ಹಾಕಿದ
ಕಳೆ-ಕೊಳೆ ತುಂಬಿದ
ಮನವ ತೊಳೆಸಿದ
ಕಣ್ಣಿಗೆ ಮೆತ್ತಿದ
ಪೊರೆಗಳ ಹರಿಸಿದ

ಅವಿತಿಹ ಅಹಮಿನ
ಆಟವ ತೋರಿಸಿ
ನಿಜನೆಲೆ ಅರಿಯಲು
ದಾರಿಯ ಮಾಡಿದ
ಹಿಂದಣ ಹಂಗಿನ
ಸಂಗವ ಬಿಡಿಸಿದ
ಮುಂದಣ ಮಾಯೆಯ
ತೆರೆಯನು ಸರಿಸಿದ

ಮಂತ್ರವ ಮರೆಸಿದ
ಮಾತನು ಬಿಡಿಸಿದ
ಮೌನದ ಬಯಲಿಗೆ
ಮಾರ್ಗವ ತೋರಿದ

Previous post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
Next post ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ

Related Posts

ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...
ಸಂಭ್ರಮಿಸುವೆ ಬುದ್ದನಾಗಿ
Share:
Poems

ಸಂಭ್ರಮಿಸುವೆ ಬುದ್ದನಾಗಿ

August 11, 2025 ಜಬೀವುಲ್ಲಾ ಎಂ.ಅಸದ್
ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...

Comments 3

  1. Dr. K.S.Mallesh, Mysuru
    Jun 12, 2025 Reply

    ನಿಮ್ಮ ಕವನ “ಹಾದಿಯ ಹಣತೆ” ( ಅರಿವಿನ ಹಣತೆ ಅಲ್ಲ) ಸರಳ ಭಾಷೆ ಚಿಕ್ಕ ಸಾಲುಗಳಲ್ಲಿ ನಿಮ್ಮ ನಿರಂತರ ಹುಡುಕಾಟದ ದಾರಿಯಲ್ಲಿ ಸಿಕ್ಕ ಗುರುವಿನ ಬಗ್ಗೆ ಹೃದ್ಯವಾಗಿ ಮೂಡಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಗುರುವು ನಿಜವಾದ ಆಧ್ಯಾತ್ಮದ ದಾರಿ ತೋರಿದ ಹಾದಿಯ ಹಣತೆ. ಕವನ ತುಂಬಾ ಚೆನ್ನಾಗಿದೆ.

  3. Mate Kasturidevi
    Jun 19, 2025 Reply

    ಹಾದಿಯ ಹಣತೆಯ ಬೆಳಕಲ್ಲಿ ನಿಮ್ಮ ಮನದ ಅಳಲು ಜತೆಗೆ ಅರಸುವ ಧಾವಂತ ನಿಚ್ಚಳವಾಗಿ ಕಾಣಬರುತ್ತಿದೆ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ಹೊತ್ತು ಹೋಗದ ಮುನ್ನ…
ಹೊತ್ತು ಹೋಗದ ಮುನ್ನ…
April 29, 2018
ಅದ್ವಿತೀಯ ಶರಣರು
ಅದ್ವಿತೀಯ ಶರಣರು
February 6, 2025
ಶರಣನಾಗುವುದು…
ಶರಣನಾಗುವುದು…
February 10, 2023
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
September 6, 2023
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ನಾನರಿಯದ ಬಯಲು
ನಾನರಿಯದ ಬಯಲು
April 9, 2021
Copyright © 2025 Bayalu