Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾದಿಯ ಹಣತೆ…
Share:
Poems June 12, 2025 ಕೆ.ಆರ್ ಮಂಗಳಾ

ಹಾದಿಯ ಹಣತೆ…

ಕೈಯಲಿ ಹಿಡಿದು
ಅಲೆಯುತಲಿದ್ದೆ
ಕಣ್ಣಿಗೊತ್ತಿಕೊಂಡು
ಕರಗುತಲಿದ್ದೆ
ಎದೆಗವುಚಿಕೊಂಡು
ಮುದ್ದಾಡುತಲಿದ್ದೆ
ತಲೆಯ ಮೇಲೆ ಹೊತ್ತು
ಬೀಗುತಲಿದ್ದೆ…

ವಚನ ರಾಶಿಯಲಿ
ಅರಸುತಲಿದ್ದೆ
ಹಿರಿಯರ ಮಾತಲಿ
ಹುಡುಕುತಲಿದ್ದೆ
ಯೋಗಸಿದ್ದಿಗಳಿಗೆ
ತವಕಿಸುತಿದ್ದೆ
ಪೂಜೆ-ಪ್ರಾರ್ಥನೆಯಲಿ
ಪರಿತಪಿಸುತಿದ್ದೆ…

ಅಲ್ಲೆಲ್ಲೋ ಮಿಂಚಿದಂತೆ
ಇಲ್ಲೇನೋ ಹೊಳೆದಂತೆ
ಮತ್ತೆಲ್ಲೋ ಸುಳಿದಂತೆ
ಸಿಕ್ಕು ಸಿಗದ
ಬಿಸಿಲ್ಗುದುರೆಯಂತೆ…

ನೀರು ಹಿಡಿದು
ಬಾಯಾರಿ ಬಳಲುವ
ಬುತ್ತಿ ಹಿಡಿದು
ಹಸಿವಿಗೆ ಹಲಬುವ
ಬೆಪ್ಪುತನಕೆ ಮರುಗಿ
ಬಂದ ನೋಡವ್ವಾ… ನನ್ನ ಗುರು

ಕಣ್ಣೊಳಿತ್ತು
ಕಾರುಣ್ಯದ ಕಡಲು
ಹೃದಯವೋ
ವಾತ್ಸಲ್ಯದ ಒಡಲು
ಮಾತುಗಳೋ
ಚಾಟಿಯ ಏಟು

ಜ್ಞಾನದ ಬಣವೆಗೆ
ಕಿಚ್ಚನು ಹಚ್ಚಿದ
ಭಾವುಕ ಭ್ರಮೆಗೆ
ಬೆಂಕಿಯ ಹಾಕಿದ
ಕಳೆ-ಕೊಳೆ ತುಂಬಿದ
ಮನವ ತೊಳೆಸಿದ
ಕಣ್ಣಿಗೆ ಮೆತ್ತಿದ
ಪೊರೆಗಳ ಹರಿಸಿದ

ಅವಿತಿಹ ಅಹಮಿನ
ಆಟವ ತೋರಿಸಿ
ನಿಜನೆಲೆ ಅರಿಯಲು
ದಾರಿಯ ಮಾಡಿದ
ಹಿಂದಣ ಹಂಗಿನ
ಸಂಗವ ಬಿಡಿಸಿದ
ಮುಂದಣ ಮಾಯೆಯ
ತೆರೆಯನು ಸರಿಸಿದ

ಮಂತ್ರವ ಮರೆಸಿದ
ಮಾತನು ಬಿಡಿಸಿದ
ಮೌನದ ಬಯಲಿಗೆ
ಮಾರ್ಗವ ತೋರಿದ

Previous post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
Next post ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ

Related Posts

ನಿಮ್ಮಿಂದಲೇ ನಾನು
Share:
Poems

ನಿಮ್ಮಿಂದಲೇ ನಾನು

February 11, 2022 ಜ್ಯೋತಿಲಿಂಗಪ್ಪ
ನಾನು ಹುಟ್ಟಿದ ಮೇಲೆ ಹುಟ್ಟಿತು ನನ್ನ ಇತಿಹಾಸ ನಾನು ಸತ್ತ ಮೇಲೆ ಹುಟ್ಟಿದ್ದು ನನ್ನ ಚರಿತ್ರೆ ಈ ನಡುವಿನ ಅಂತರ ನಾನು ಇದ್ದುದ್ದು ನನ್ನ ಸುಳ್ಳು ನಿಜ ನಾನು ಹೇಳಬಲ್ಲನೇ ನನ್ನ...
ಕಾಯದೊಳಗಣ ಬಯಲು
Share:
Poems

ಕಾಯದೊಳಗಣ ಬಯಲು

November 7, 2020 ಜ್ಯೋತಿಲಿಂಗಪ್ಪ
ಈ ಬಯಲು ಗುರುತಿಸಲಾರೆ ನನ್ನ ಕಣ್ಣ ಎದುರು ನಾನು ಬಯಸುವ ರೂಹು ಇಲ್ಲ ಕಣ್ಣು ಹೇಳಿದುದು ಸುಳ್ಳೇ ನೀ ಬಿಟ್ಟ ಉಸಿರಲೊಂದು ದನಿ ಇದೆ ನಾ ಕೇಳಲಾರೆ ಉಸಿರು ಒಳಗಣ ದನಿ ಉಸಿರು ನುಂಗಿತು...

Comments 3

  1. Dr. K.S.Mallesh, Mysuru
    Jun 12, 2025 Reply

    ನಿಮ್ಮ ಕವನ “ಹಾದಿಯ ಹಣತೆ” ( ಅರಿವಿನ ಹಣತೆ ಅಲ್ಲ) ಸರಳ ಭಾಷೆ ಚಿಕ್ಕ ಸಾಲುಗಳಲ್ಲಿ ನಿಮ್ಮ ನಿರಂತರ ಹುಡುಕಾಟದ ದಾರಿಯಲ್ಲಿ ಸಿಕ್ಕ ಗುರುವಿನ ಬಗ್ಗೆ ಹೃದ್ಯವಾಗಿ ಮೂಡಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಗುರುವು ನಿಜವಾದ ಆಧ್ಯಾತ್ಮದ ದಾರಿ ತೋರಿದ ಹಾದಿಯ ಹಣತೆ. ಕವನ ತುಂಬಾ ಚೆನ್ನಾಗಿದೆ.

  3. Mate Kasturidevi
    Jun 19, 2025 Reply

    ಹಾದಿಯ ಹಣತೆಯ ಬೆಳಕಲ್ಲಿ ನಿಮ್ಮ ಮನದ ಅಳಲು ಜತೆಗೆ ಅರಸುವ ಧಾವಂತ ನಿಚ್ಚಳವಾಗಿ ಕಾಣಬರುತ್ತಿದೆ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
March 9, 2023
ದಾಸೋಹ ತತ್ವ
ದಾಸೋಹ ತತ್ವ
January 10, 2021
ಅವಿರಳ ಅನುಭಾವಿ-4
ಅವಿರಳ ಅನುಭಾವಿ-4
June 17, 2020
ಇದ್ದಷ್ಟೇ…
ಇದ್ದಷ್ಟೇ…
January 10, 2021
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಕಲಿಸು ಗುರುವೆ…
ಕಲಿಸು ಗುರುವೆ…
July 10, 2025
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
Copyright © 2026 Bayalu