Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾದಿಯ ಹಣತೆ…
Share:
Poems June 12, 2025 ಕೆ.ಆರ್ ಮಂಗಳಾ

ಹಾದಿಯ ಹಣತೆ…

ಕೈಯಲಿ ಹಿಡಿದು
ಅಲೆಯುತಲಿದ್ದೆ
ಕಣ್ಣಿಗೊತ್ತಿಕೊಂಡು
ಕರಗುತಲಿದ್ದೆ
ಎದೆಗವುಚಿಕೊಂಡು
ಮುದ್ದಾಡುತಲಿದ್ದೆ
ತಲೆಯ ಮೇಲೆ ಹೊತ್ತು
ಬೀಗುತಲಿದ್ದೆ…

ವಚನ ರಾಶಿಯಲಿ
ಅರಸುತಲಿದ್ದೆ
ಹಿರಿಯರ ಮಾತಲಿ
ಹುಡುಕುತಲಿದ್ದೆ
ಯೋಗಸಿದ್ದಿಗಳಿಗೆ
ತವಕಿಸುತಿದ್ದೆ
ಪೂಜೆ-ಪ್ರಾರ್ಥನೆಯಲಿ
ಪರಿತಪಿಸುತಿದ್ದೆ…

ಅಲ್ಲೆಲ್ಲೋ ಮಿಂಚಿದಂತೆ
ಇಲ್ಲೇನೋ ಹೊಳೆದಂತೆ
ಮತ್ತೆಲ್ಲೋ ಸುಳಿದಂತೆ
ಸಿಕ್ಕು ಸಿಗದ
ಬಿಸಿಲ್ಗುದುರೆಯಂತೆ…

ನೀರು ಹಿಡಿದು
ಬಾಯಾರಿ ಬಳಲುವ
ಬುತ್ತಿ ಹಿಡಿದು
ಹಸಿವಿಗೆ ಹಲಬುವ
ಬೆಪ್ಪುತನಕೆ ಮರುಗಿ
ಬಂದ ನೋಡವ್ವಾ… ನನ್ನ ಗುರು

ಕಣ್ಣೊಳಿತ್ತು
ಕಾರುಣ್ಯದ ಕಡಲು
ಹೃದಯವೋ
ವಾತ್ಸಲ್ಯದ ಒಡಲು
ಮಾತುಗಳೋ
ಚಾಟಿಯ ಏಟು

ಜ್ಞಾನದ ಬಣವೆಗೆ
ಕಿಚ್ಚನು ಹಚ್ಚಿದ
ಭಾವುಕ ಭ್ರಮೆಗೆ
ಬೆಂಕಿಯ ಹಾಕಿದ
ಕಳೆ-ಕೊಳೆ ತುಂಬಿದ
ಮನವ ತೊಳೆಸಿದ
ಕಣ್ಣಿಗೆ ಮೆತ್ತಿದ
ಪೊರೆಗಳ ಹರಿಸಿದ

ಅವಿತಿಹ ಅಹಮಿನ
ಆಟವ ತೋರಿಸಿ
ನಿಜನೆಲೆ ಅರಿಯಲು
ದಾರಿಯ ಮಾಡಿದ
ಹಿಂದಣ ಹಂಗಿನ
ಸಂಗವ ಬಿಡಿಸಿದ
ಮುಂದಣ ಮಾಯೆಯ
ತೆರೆಯನು ಸರಿಸಿದ

ಮಂತ್ರವ ಮರೆಸಿದ
ಮಾತನು ಬಿಡಿಸಿದ
ಮೌನದ ಬಯಲಿಗೆ
ಮಾರ್ಗವ ತೋರಿದ

Previous post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
Next post ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ

Related Posts

ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...
ಈ ಬಳ್ಳಿ…
Share:
Poems

ಈ ಬಳ್ಳಿ…

October 21, 2024 ಜ್ಯೋತಿಲಿಂಗಪ್ಪ
ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...

Comments 3

  1. Dr. K.S.Mallesh, Mysuru
    Jun 12, 2025 Reply

    ನಿಮ್ಮ ಕವನ “ಹಾದಿಯ ಹಣತೆ” ( ಅರಿವಿನ ಹಣತೆ ಅಲ್ಲ) ಸರಳ ಭಾಷೆ ಚಿಕ್ಕ ಸಾಲುಗಳಲ್ಲಿ ನಿಮ್ಮ ನಿರಂತರ ಹುಡುಕಾಟದ ದಾರಿಯಲ್ಲಿ ಸಿಕ್ಕ ಗುರುವಿನ ಬಗ್ಗೆ ಹೃದ್ಯವಾಗಿ ಮೂಡಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಗುರುವು ನಿಜವಾದ ಆಧ್ಯಾತ್ಮದ ದಾರಿ ತೋರಿದ ಹಾದಿಯ ಹಣತೆ. ಕವನ ತುಂಬಾ ಚೆನ್ನಾಗಿದೆ.

  3. Mate Kasturidevi
    Jun 19, 2025 Reply

    ಹಾದಿಯ ಹಣತೆಯ ಬೆಳಕಲ್ಲಿ ನಿಮ್ಮ ಮನದ ಅಳಲು ಜತೆಗೆ ಅರಸುವ ಧಾವಂತ ನಿಚ್ಚಳವಾಗಿ ಕಾಣಬರುತ್ತಿದೆ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಕಂಡದ್ದು- ಕಾಣದ್ದು
ಕಂಡದ್ದು- ಕಾಣದ್ದು
July 10, 2025
ದಡ ಸೋಂಕದ ಅಲೆಗಳು
ದಡ ಸೋಂಕದ ಅಲೆಗಳು
July 10, 2025
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
Copyright © 2026 Bayalu