Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾದಿಯ ಹಣತೆ…
Share:
Poems June 12, 2025 ಕೆ.ಆರ್ ಮಂಗಳಾ

ಹಾದಿಯ ಹಣತೆ…

ಕೈಯಲಿ ಹಿಡಿದು
ಅಲೆಯುತಲಿದ್ದೆ
ಕಣ್ಣಿಗೊತ್ತಿಕೊಂಡು
ಕರಗುತಲಿದ್ದೆ
ಎದೆಗವುಚಿಕೊಂಡು
ಮುದ್ದಾಡುತಲಿದ್ದೆ
ತಲೆಯ ಮೇಲೆ ಹೊತ್ತು
ಬೀಗುತಲಿದ್ದೆ…

ವಚನ ರಾಶಿಯಲಿ
ಅರಸುತಲಿದ್ದೆ
ಹಿರಿಯರ ಮಾತಲಿ
ಹುಡುಕುತಲಿದ್ದೆ
ಯೋಗಸಿದ್ದಿಗಳಿಗೆ
ತವಕಿಸುತಿದ್ದೆ
ಪೂಜೆ-ಪ್ರಾರ್ಥನೆಯಲಿ
ಪರಿತಪಿಸುತಿದ್ದೆ…

ಅಲ್ಲೆಲ್ಲೋ ಮಿಂಚಿದಂತೆ
ಇಲ್ಲೇನೋ ಹೊಳೆದಂತೆ
ಮತ್ತೆಲ್ಲೋ ಸುಳಿದಂತೆ
ಸಿಕ್ಕು ಸಿಗದ
ಬಿಸಿಲ್ಗುದುರೆಯಂತೆ…

ನೀರು ಹಿಡಿದು
ಬಾಯಾರಿ ಬಳಲುವ
ಬುತ್ತಿ ಹಿಡಿದು
ಹಸಿವಿಗೆ ಹಲಬುವ
ಬೆಪ್ಪುತನಕೆ ಮರುಗಿ
ಬಂದ ನೋಡವ್ವಾ… ನನ್ನ ಗುರು

ಕಣ್ಣೊಳಿತ್ತು
ಕಾರುಣ್ಯದ ಕಡಲು
ಹೃದಯವೋ
ವಾತ್ಸಲ್ಯದ ಒಡಲು
ಮಾತುಗಳೋ
ಚಾಟಿಯ ಏಟು

ಜ್ಞಾನದ ಬಣವೆಗೆ
ಕಿಚ್ಚನು ಹಚ್ಚಿದ
ಭಾವುಕ ಭ್ರಮೆಗೆ
ಬೆಂಕಿಯ ಹಾಕಿದ
ಕಳೆ-ಕೊಳೆ ತುಂಬಿದ
ಮನವ ತೊಳೆಸಿದ
ಕಣ್ಣಿಗೆ ಮೆತ್ತಿದ
ಪೊರೆಗಳ ಹರಿಸಿದ

ಅವಿತಿಹ ಅಹಮಿನ
ಆಟವ ತೋರಿಸಿ
ನಿಜನೆಲೆ ಅರಿಯಲು
ದಾರಿಯ ಮಾಡಿದ
ಹಿಂದಣ ಹಂಗಿನ
ಸಂಗವ ಬಿಡಿಸಿದ
ಮುಂದಣ ಮಾಯೆಯ
ತೆರೆಯನು ಸರಿಸಿದ

ಮಂತ್ರವ ಮರೆಸಿದ
ಮಾತನು ಬಿಡಿಸಿದ
ಮೌನದ ಬಯಲಿಗೆ
ಮಾರ್ಗವ ತೋರಿದ

Previous post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
Next post ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ

Related Posts

ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...
ಗ್ರಹಣ
Share:
Poems

ಗ್ರಹಣ

December 9, 2025 ಡಾ. ಪಂಚಾಕ್ಷರಿ ಹಳೇಬೀಡು
ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...

Comments 3

  1. Dr. K.S.Mallesh, Mysuru
    Jun 12, 2025 Reply

    ನಿಮ್ಮ ಕವನ “ಹಾದಿಯ ಹಣತೆ” ( ಅರಿವಿನ ಹಣತೆ ಅಲ್ಲ) ಸರಳ ಭಾಷೆ ಚಿಕ್ಕ ಸಾಲುಗಳಲ್ಲಿ ನಿಮ್ಮ ನಿರಂತರ ಹುಡುಕಾಟದ ದಾರಿಯಲ್ಲಿ ಸಿಕ್ಕ ಗುರುವಿನ ಬಗ್ಗೆ ಹೃದ್ಯವಾಗಿ ಮೂಡಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಗುರುವು ನಿಜವಾದ ಆಧ್ಯಾತ್ಮದ ದಾರಿ ತೋರಿದ ಹಾದಿಯ ಹಣತೆ. ಕವನ ತುಂಬಾ ಚೆನ್ನಾಗಿದೆ.

  3. Mate Kasturidevi
    Jun 19, 2025 Reply

    ಹಾದಿಯ ಹಣತೆಯ ಬೆಳಕಲ್ಲಿ ನಿಮ್ಮ ಮನದ ಅಳಲು ಜತೆಗೆ ಅರಸುವ ಧಾವಂತ ನಿಚ್ಚಳವಾಗಿ ಕಾಣಬರುತ್ತಿದೆ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಳಗಣ ಮರ
ಒಳಗಣ ಮರ
March 12, 2022
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ಶರಣರು ಕಂಡ ಸಮಸಮಾಜ
ಶರಣರು ಕಂಡ ಸಮಸಮಾಜ
July 4, 2022
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಹೀಗೊಂದು ತಲಪರಿಗೆ (ಭಾಗ-4)
ಹೀಗೊಂದು ತಲಪರಿಗೆ (ಭಾಗ-4)
October 5, 2021
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
Copyright © 2026 Bayalu