Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾದಿಯ ಹಣತೆ…
Share:
Poems June 12, 2025 ಕೆ.ಆರ್ ಮಂಗಳಾ

ಹಾದಿಯ ಹಣತೆ…

ಕೈಯಲಿ ಹಿಡಿದು
ಅಲೆಯುತಲಿದ್ದೆ
ಕಣ್ಣಿಗೊತ್ತಿಕೊಂಡು
ಕರಗುತಲಿದ್ದೆ
ಎದೆಗವುಚಿಕೊಂಡು
ಮುದ್ದಾಡುತಲಿದ್ದೆ
ತಲೆಯ ಮೇಲೆ ಹೊತ್ತು
ಬೀಗುತಲಿದ್ದೆ…

ವಚನ ರಾಶಿಯಲಿ
ಅರಸುತಲಿದ್ದೆ
ಹಿರಿಯರ ಮಾತಲಿ
ಹುಡುಕುತಲಿದ್ದೆ
ಯೋಗಸಿದ್ದಿಗಳಿಗೆ
ತವಕಿಸುತಿದ್ದೆ
ಪೂಜೆ-ಪ್ರಾರ್ಥನೆಯಲಿ
ಪರಿತಪಿಸುತಿದ್ದೆ…

ಅಲ್ಲೆಲ್ಲೋ ಮಿಂಚಿದಂತೆ
ಇಲ್ಲೇನೋ ಹೊಳೆದಂತೆ
ಮತ್ತೆಲ್ಲೋ ಸುಳಿದಂತೆ
ಸಿಕ್ಕು ಸಿಗದ
ಬಿಸಿಲ್ಗುದುರೆಯಂತೆ…

ನೀರು ಹಿಡಿದು
ಬಾಯಾರಿ ಬಳಲುವ
ಬುತ್ತಿ ಹಿಡಿದು
ಹಸಿವಿಗೆ ಹಲಬುವ
ಬೆಪ್ಪುತನಕೆ ಮರುಗಿ
ಬಂದ ನೋಡವ್ವಾ… ನನ್ನ ಗುರು

ಕಣ್ಣೊಳಿತ್ತು
ಕಾರುಣ್ಯದ ಕಡಲು
ಹೃದಯವೋ
ವಾತ್ಸಲ್ಯದ ಒಡಲು
ಮಾತುಗಳೋ
ಚಾಟಿಯ ಏಟು

ಜ್ಞಾನದ ಬಣವೆಗೆ
ಕಿಚ್ಚನು ಹಚ್ಚಿದ
ಭಾವುಕ ಭ್ರಮೆಗೆ
ಬೆಂಕಿಯ ಹಾಕಿದ
ಕಳೆ-ಕೊಳೆ ತುಂಬಿದ
ಮನವ ತೊಳೆಸಿದ
ಕಣ್ಣಿಗೆ ಮೆತ್ತಿದ
ಪೊರೆಗಳ ಹರಿಸಿದ

ಅವಿತಿಹ ಅಹಮಿನ
ಆಟವ ತೋರಿಸಿ
ನಿಜನೆಲೆ ಅರಿಯಲು
ದಾರಿಯ ಮಾಡಿದ
ಹಿಂದಣ ಹಂಗಿನ
ಸಂಗವ ಬಿಡಿಸಿದ
ಮುಂದಣ ಮಾಯೆಯ
ತೆರೆಯನು ಸರಿಸಿದ

ಮಂತ್ರವ ಮರೆಸಿದ
ಮಾತನು ಬಿಡಿಸಿದ
ಮೌನದ ಬಯಲಿಗೆ
ಮಾರ್ಗವ ತೋರಿದ

Previous post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
Next post ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ

Related Posts

ಸಂತೆಯೊಳಗಿನ ಧ್ಯಾನ
Share:
Poems

ಸಂತೆಯೊಳಗಿನ ಧ್ಯಾನ

May 10, 2022 ಜ್ಯೋತಿಲಿಂಗಪ್ಪ
ಈಗ ಗಾಳಿಗೆ ತೂರಿ ಹೋಗುವ ಜೊಳ್ಳು ಬಯಲೊಳಗೆ ಜೋಳಿಗೆಗೆ ಖಾಲಿ ಈ ಊರೇನು ಆ ಊರೇನು ಇರದ ಊರಲಿ ಕಾಲೂರುವೆ ಮೋಡದ ಮರೆಯಿಂದ ಬಂದ ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ ಗಾಳಿಯೂ ತೂರದ...
ಮಣ್ಣು ಮೆಟ್ಟಿದ ದಾರಿ
Share:
Poems

ಮಣ್ಣು ಮೆಟ್ಟಿದ ದಾರಿ

October 5, 2021 ಜ್ಯೋತಿಲಿಂಗಪ್ಪ
ಈ ಸಿಟ್ಟು ದ್ವೇಷ ಪ್ರೇಮ ಕಾಮ ಮದ… ಎಲ್ಲಾ ನಾನು ಹೊತ್ತು ಹೋಗುವನೇ… ಈ ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ ಇದೆಲ್ಲಾ ಮಣ್ಣಾಗುವುದು ಇದ್ದೇ ಇದೆ ನಾನು ಮಣ್ಣಾಗುವ...

Comments 3

  1. Dr. K.S.Mallesh, Mysuru
    Jun 12, 2025 Reply

    ನಿಮ್ಮ ಕವನ “ಹಾದಿಯ ಹಣತೆ” ( ಅರಿವಿನ ಹಣತೆ ಅಲ್ಲ) ಸರಳ ಭಾಷೆ ಚಿಕ್ಕ ಸಾಲುಗಳಲ್ಲಿ ನಿಮ್ಮ ನಿರಂತರ ಹುಡುಕಾಟದ ದಾರಿಯಲ್ಲಿ ಸಿಕ್ಕ ಗುರುವಿನ ಬಗ್ಗೆ ಹೃದ್ಯವಾಗಿ ಮೂಡಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಗುರುವು ನಿಜವಾದ ಆಧ್ಯಾತ್ಮದ ದಾರಿ ತೋರಿದ ಹಾದಿಯ ಹಣತೆ. ಕವನ ತುಂಬಾ ಚೆನ್ನಾಗಿದೆ.

  3. Mate Kasturidevi
    Jun 19, 2025 Reply

    ಹಾದಿಯ ಹಣತೆಯ ಬೆಳಕಲ್ಲಿ ನಿಮ್ಮ ಮನದ ಅಳಲು ಜತೆಗೆ ಅರಸುವ ಧಾವಂತ ನಿಚ್ಚಳವಾಗಿ ಕಾಣಬರುತ್ತಿದೆ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಅಚಲ ಕಥಾಲೋಕ
ಅಚಲ ಕಥಾಲೋಕ
February 10, 2023
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
ಪ್ರಭುವಿನ ಗುರು ಅನಿಮಿಷ -2
ಪ್ರಭುವಿನ ಗುರು ಅನಿಮಿಷ -2
September 14, 2024
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
Copyright © 2026 Bayalu