Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾದಿಯ ಹಣತೆ…
Share:
Poems June 12, 2025 ಕೆ.ಆರ್ ಮಂಗಳಾ

ಹಾದಿಯ ಹಣತೆ…

ಕೈಯಲಿ ಹಿಡಿದು
ಅಲೆಯುತಲಿದ್ದೆ
ಕಣ್ಣಿಗೊತ್ತಿಕೊಂಡು
ಕರಗುತಲಿದ್ದೆ
ಎದೆಗವುಚಿಕೊಂಡು
ಮುದ್ದಾಡುತಲಿದ್ದೆ
ತಲೆಯ ಮೇಲೆ ಹೊತ್ತು
ಬೀಗುತಲಿದ್ದೆ…

ವಚನ ರಾಶಿಯಲಿ
ಅರಸುತಲಿದ್ದೆ
ಹಿರಿಯರ ಮಾತಲಿ
ಹುಡುಕುತಲಿದ್ದೆ
ಯೋಗಸಿದ್ದಿಗಳಿಗೆ
ತವಕಿಸುತಿದ್ದೆ
ಪೂಜೆ-ಪ್ರಾರ್ಥನೆಯಲಿ
ಪರಿತಪಿಸುತಿದ್ದೆ…

ಅಲ್ಲೆಲ್ಲೋ ಮಿಂಚಿದಂತೆ
ಇಲ್ಲೇನೋ ಹೊಳೆದಂತೆ
ಮತ್ತೆಲ್ಲೋ ಸುಳಿದಂತೆ
ಸಿಕ್ಕು ಸಿಗದ
ಬಿಸಿಲ್ಗುದುರೆಯಂತೆ…

ನೀರು ಹಿಡಿದು
ಬಾಯಾರಿ ಬಳಲುವ
ಬುತ್ತಿ ಹಿಡಿದು
ಹಸಿವಿಗೆ ಹಲಬುವ
ಬೆಪ್ಪುತನಕೆ ಮರುಗಿ
ಬಂದ ನೋಡವ್ವಾ… ನನ್ನ ಗುರು

ಕಣ್ಣೊಳಿತ್ತು
ಕಾರುಣ್ಯದ ಕಡಲು
ಹೃದಯವೋ
ವಾತ್ಸಲ್ಯದ ಒಡಲು
ಮಾತುಗಳೋ
ಚಾಟಿಯ ಏಟು

ಜ್ಞಾನದ ಬಣವೆಗೆ
ಕಿಚ್ಚನು ಹಚ್ಚಿದ
ಭಾವುಕ ಭ್ರಮೆಗೆ
ಬೆಂಕಿಯ ಹಾಕಿದ
ಕಳೆ-ಕೊಳೆ ತುಂಬಿದ
ಮನವ ತೊಳೆಸಿದ
ಕಣ್ಣಿಗೆ ಮೆತ್ತಿದ
ಪೊರೆಗಳ ಹರಿಸಿದ

ಅವಿತಿಹ ಅಹಮಿನ
ಆಟವ ತೋರಿಸಿ
ನಿಜನೆಲೆ ಅರಿಯಲು
ದಾರಿಯ ಮಾಡಿದ
ಹಿಂದಣ ಹಂಗಿನ
ಸಂಗವ ಬಿಡಿಸಿದ
ಮುಂದಣ ಮಾಯೆಯ
ತೆರೆಯನು ಸರಿಸಿದ

ಮಂತ್ರವ ಮರೆಸಿದ
ಮಾತನು ಬಿಡಿಸಿದ
ಮೌನದ ಬಯಲಿಗೆ
ಮಾರ್ಗವ ತೋರಿದ

Previous post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
Next post ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ

Related Posts

ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...
ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...

Comments 3

  1. Dr. K.S.Mallesh, Mysuru
    Jun 12, 2025 Reply

    ನಿಮ್ಮ ಕವನ “ಹಾದಿಯ ಹಣತೆ” ( ಅರಿವಿನ ಹಣತೆ ಅಲ್ಲ) ಸರಳ ಭಾಷೆ ಚಿಕ್ಕ ಸಾಲುಗಳಲ್ಲಿ ನಿಮ್ಮ ನಿರಂತರ ಹುಡುಕಾಟದ ದಾರಿಯಲ್ಲಿ ಸಿಕ್ಕ ಗುರುವಿನ ಬಗ್ಗೆ ಹೃದ್ಯವಾಗಿ ಮೂಡಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಗುರುವು ನಿಜವಾದ ಆಧ್ಯಾತ್ಮದ ದಾರಿ ತೋರಿದ ಹಾದಿಯ ಹಣತೆ. ಕವನ ತುಂಬಾ ಚೆನ್ನಾಗಿದೆ.

  3. Mate Kasturidevi
    Jun 19, 2025 Reply

    ಹಾದಿಯ ಹಣತೆಯ ಬೆಳಕಲ್ಲಿ ನಿಮ್ಮ ಮನದ ಅಳಲು ಜತೆಗೆ ಅರಸುವ ಧಾವಂತ ನಿಚ್ಚಳವಾಗಿ ಕಾಣಬರುತ್ತಿದೆ

Leave a Reply to Dr. K.S.Mallesh, Mysuru Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಬದ್ಧ ಆರ್ಥಿಕತೆ
ಅಬದ್ಧ ಆರ್ಥಿಕತೆ
March 5, 2019
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
April 29, 2018
ಅಲ್ಲಮಪ್ರಭು ಮತ್ತು ಮಾಯೆ
ಅಲ್ಲಮಪ್ರಭು ಮತ್ತು ಮಾಯೆ
January 7, 2022
ನಾನು ಯಾರು? ಎಂಬ ಆಳ-ನಿರಾಳ-5
ನಾನು ಯಾರು? ಎಂಬ ಆಳ-ನಿರಾಳ-5
August 2, 2020
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
Copyright © 2025 Bayalu