Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾದಿಯ ಹಣತೆ…
Share:
Poems June 12, 2025 ಕೆ.ಆರ್ ಮಂಗಳಾ

ಹಾದಿಯ ಹಣತೆ…

ಕೈಯಲಿ ಹಿಡಿದು
ಅಲೆಯುತಲಿದ್ದೆ
ಕಣ್ಣಿಗೊತ್ತಿಕೊಂಡು
ಕರಗುತಲಿದ್ದೆ
ಎದೆಗವುಚಿಕೊಂಡು
ಮುದ್ದಾಡುತಲಿದ್ದೆ
ತಲೆಯ ಮೇಲೆ ಹೊತ್ತು
ಬೀಗುತಲಿದ್ದೆ…

ವಚನ ರಾಶಿಯಲಿ
ಅರಸುತಲಿದ್ದೆ
ಹಿರಿಯರ ಮಾತಲಿ
ಹುಡುಕುತಲಿದ್ದೆ
ಯೋಗಸಿದ್ದಿಗಳಿಗೆ
ತವಕಿಸುತಿದ್ದೆ
ಪೂಜೆ-ಪ್ರಾರ್ಥನೆಯಲಿ
ಪರಿತಪಿಸುತಿದ್ದೆ…

ಅಲ್ಲೆಲ್ಲೋ ಮಿಂಚಿದಂತೆ
ಇಲ್ಲೇನೋ ಹೊಳೆದಂತೆ
ಮತ್ತೆಲ್ಲೋ ಸುಳಿದಂತೆ
ಸಿಕ್ಕು ಸಿಗದ
ಬಿಸಿಲ್ಗುದುರೆಯಂತೆ…

ನೀರು ಹಿಡಿದು
ಬಾಯಾರಿ ಬಳಲುವ
ಬುತ್ತಿ ಹಿಡಿದು
ಹಸಿವಿಗೆ ಹಲಬುವ
ಬೆಪ್ಪುತನಕೆ ಮರುಗಿ
ಬಂದ ನೋಡವ್ವಾ… ನನ್ನ ಗುರು

ಕಣ್ಣೊಳಿತ್ತು
ಕಾರುಣ್ಯದ ಕಡಲು
ಹೃದಯವೋ
ವಾತ್ಸಲ್ಯದ ಒಡಲು
ಮಾತುಗಳೋ
ಚಾಟಿಯ ಏಟು

ಜ್ಞಾನದ ಬಣವೆಗೆ
ಕಿಚ್ಚನು ಹಚ್ಚಿದ
ಭಾವುಕ ಭ್ರಮೆಗೆ
ಬೆಂಕಿಯ ಹಾಕಿದ
ಕಳೆ-ಕೊಳೆ ತುಂಬಿದ
ಮನವ ತೊಳೆಸಿದ
ಕಣ್ಣಿಗೆ ಮೆತ್ತಿದ
ಪೊರೆಗಳ ಹರಿಸಿದ

ಅವಿತಿಹ ಅಹಮಿನ
ಆಟವ ತೋರಿಸಿ
ನಿಜನೆಲೆ ಅರಿಯಲು
ದಾರಿಯ ಮಾಡಿದ
ಹಿಂದಣ ಹಂಗಿನ
ಸಂಗವ ಬಿಡಿಸಿದ
ಮುಂದಣ ಮಾಯೆಯ
ತೆರೆಯನು ಸರಿಸಿದ

ಮಂತ್ರವ ಮರೆಸಿದ
ಮಾತನು ಬಿಡಿಸಿದ
ಮೌನದ ಬಯಲಿಗೆ
ಮಾರ್ಗವ ತೋರಿದ

Previous post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
Next post ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ

Related Posts

ಈ ಕನ್ನಡಿ
Share:
Poems

ಈ ಕನ್ನಡಿ

March 6, 2024 ಜ್ಯೋತಿಲಿಂಗಪ್ಪ
ಈಗೀಗ ಈ ಕನ್ನಡಿ ನನ್ನ ಮುದುಕನಾಗಿ ತೋರಿಸುತ್ತಿದೆ ಯುವಕನಾಗಿ ಕಾಣಿಸುತ್ತದೆ ನಾನೇನು…. ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ ಈ ಕನ್ನಡಿ...
ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...

Comments 3

  1. Dr. K.S.Mallesh, Mysuru
    Jun 12, 2025 Reply

    ನಿಮ್ಮ ಕವನ “ಹಾದಿಯ ಹಣತೆ” ( ಅರಿವಿನ ಹಣತೆ ಅಲ್ಲ) ಸರಳ ಭಾಷೆ ಚಿಕ್ಕ ಸಾಲುಗಳಲ್ಲಿ ನಿಮ್ಮ ನಿರಂತರ ಹುಡುಕಾಟದ ದಾರಿಯಲ್ಲಿ ಸಿಕ್ಕ ಗುರುವಿನ ಬಗ್ಗೆ ಹೃದ್ಯವಾಗಿ ಮೂಡಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಗುರುವು ನಿಜವಾದ ಆಧ್ಯಾತ್ಮದ ದಾರಿ ತೋರಿದ ಹಾದಿಯ ಹಣತೆ. ಕವನ ತುಂಬಾ ಚೆನ್ನಾಗಿದೆ.

  3. Mate Kasturidevi
    Jun 19, 2025 Reply

    ಹಾದಿಯ ಹಣತೆಯ ಬೆಳಕಲ್ಲಿ ನಿಮ್ಮ ಮನದ ಅಳಲು ಜತೆಗೆ ಅರಸುವ ಧಾವಂತ ನಿಚ್ಚಳವಾಗಿ ಕಾಣಬರುತ್ತಿದೆ

Leave a Reply to ಶೋಭಾದೇವಿ, ಧಾರವಾಡ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ಹಾಯ್ಕು
ಹಾಯ್ಕು
September 6, 2023
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ನನ್ನೆದುರು ನಾ…
ನನ್ನೆದುರು ನಾ…
March 6, 2024
ಮೂರನೇ ಕಣ್ಣು: ಅನಿಮಿಷ(11)
ಮೂರನೇ ಕಣ್ಣು: ಅನಿಮಿಷ(11)
October 19, 2025
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಕಣ್ಣ ದೀಪ
ಕಣ್ಣ ದೀಪ
September 7, 2021
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
Copyright © 2025 Bayalu