Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹೀಗೊಂದು ಸಂವಾದ…
Share:
Poems April 6, 2023 ಕೆ.ಆರ್ ಮಂಗಳಾ

ಹೀಗೊಂದು ಸಂವಾದ…

ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು
ಬಯಕೆಯ ಸೆಲೆಗೆ ಮರುಳಾಗಿಹುದು
ಕಾಣುವೆನೆಂತು ಜೀವದ ಸೊಬಗ
ಅರಿಯುವುದೆಂತು ಪ್ರಾಣದ ಹೊಲಬ
ಗೊತ್ತಿಲ್ಲದ ನಡಿಗೆ ಕತ್ತಲ ದಾರಿ
ಕಾಲಿಡಲೆಲ್ಲಿ ಹೇಳು ಗುರು
ಗುರು: ಕಂಡುದ ಹಿಡಿಯದ ಅಜ್ಞಾನಕೆ ಮರುಗುವೆ
ಕಾಣದ ಠಾವಿನ ಕನಸಿಗೆ ಕನಿಕರಿಸುವೆ
ಇಳಿಯದೆ ಕಾಣದು, ಹುಡುಕದೆ ದಕ್ಕದು
ನಡೆಯದೆ ಸೋತರೆ ಹೇಗಮ್ಮಾ…

ಶಿಷ್ಯೆ: ಎಲ್ಲಿಂದಲೋ ಬಂದು ಎತ್ತೆತ್ತಲೋ ಎಳೆವ
ನೋವು- ನಗು- ಉದ್ವೇಗದ ಸರಿಗಮ
ಪ್ರೀತಿ- ಪ್ರೇಮ- ವ್ಯಾಮೋಹದ ಪದನಿಸ
ದ್ವೇಷ, ರೋಷ, ಕುಹಕ, ಸೇಡು
ಒಂದೇ ಎರಡೇ ಉನ್ಮಾದದ ಅಲೆಬಲೆ
ಯಾವುದು ದಿಟ, ಯಾವುದು ಸೆಟೆ
ಕಂಗೆಟ್ಟಿರುವೆ ಹೇಳು ಗುರು
ಗುರು: ರುಚಿಗಳ ಸೆಳೆತಕೆ, ಬದಲಾಗುವ ಬಣ್ಣಕೆ
ನಿಲುಕುವುದಲ್ಲ ನಿಜದ ನೆಲೆ
ಇಲ್ಲದ ಸವಿಗೆ ನಾಲಿಗೆ ಚಾಚಿ
ಸುಮ್ಮನೆ ಬಳಲಿಕೆ ಯಾಕಮ್ಮಾ?

ಶಿಷ್ಯೆ: ದೇಹದಲಿರುವೆ, ಜ್ಞಾನದಲಿರುವೆ
ಬುದ್ಧಿಯಲಿರುವೆ, ಭಾವದಲಿರುವೆ
ಮಾತೂ ನನದೆ, ಮೌನವೂ ನನದೆ
ಅಲ್ಲಿಯೂ ನಾನೇ, ಇಲ್ಲಿಯೂ ನಾನೇ
ಎಲ್ಲೆಲ್ಲಿಯೂ ಥಕದಿಮಿ ಎನುತಿದೆ ‘ನಾನು’
ನಾನಿಲ್ಲದ ಠಾವಾದರೂ ಎಲ್ಲಿದೆ…
ಯಾರೀ ‘ನಾನು’ ಹೇಳು ಗುರು…
ಗುರು: ಗಗನದ ಕುಸುಮಕೆ ಕೈ ಚಾಚಿರುವೆ
ಕನಸಿನ ಸಿರಿಗೆ ಮನಸೋತಿರುವೆ
ಹುಸಿಯಲಿ ನಿಂತು ಹುಸಿಯನೇ ಹೊದ್ದು
ನಾ… ನಾ… ಎಂದರೆ ಹೇಗಮ್ಮಾ?

ಶಿಷ್ಯೆ: ಕಣ್ಣಿಗೆ ರಾಚಿದೆ ಅಹಮಿನ ದೂಳು
ಕಾಲಿಗೆ ನಾಟಿದೆ ಭವದ ಮುಳ್ಳು
ಕಲ್ಪಿತವನು ನಿಜವೆಂದೇ ಅಪ್ಪಿದೆ
ನಿತ್ಯವು ಸರಿದು ಆಯಸ್ಸು ಕರಗುವ
ಕಾಲದ ಓಟಕೆ ಭಯ ಬಿದ್ದಿರುವೆ
ಶಿವನನು ಕಾಣುವ ಬಯಲನು ಹೊಂದುವ
ಭಾಗ್ಯವು ದಕ್ಕೀತೆ ಹೇಳು ಗುರು
ಗುರು: ಕಣ್ಣಿನ ಕಸವನು, ಕಾಲಿನ ಮುಳ್ಳನು
ತೆಗೆಯಲು ಅಲ್ಲೇ ಇಹ ಅಕಲ್ಪಿತ ಶಿವನು
ಇಲ್ಲದ ಮನವನು ಜಾಡಿಸಿ ಕೊಡವಲು
ತನ್ನಲಿ ತಾನೇ ನಿಜ ನಿರ್ಬಯಲು.

Previous post ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
Next post ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು

Related Posts

ಪಾದಕೂ ನೆಲಕೂ…
Share:
Poems

ಪಾದಕೂ ನೆಲಕೂ…

June 14, 2024 ಜ್ಯೋತಿಲಿಂಗಪ್ಪ
ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...
ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...

Comments 2

  1. K S Mallesh
    Apr 7, 2023 Reply

    ಪದ್ಮಾಲಯ ನಾಗರಾಜ್ ಅವರ ಲೇಖನ ಮತ್ತು ನಿಮ್ಮ ಹೀಗೊಂದು ಸಂವಾದ ಕವನ ಎರಡೂ ಮನಸೆಳೆದವು. ಎಳೆ ಎಳೆಯಾಗಿ ಬಿಡಿಸಿ ಬಿಡಿಸಿ ನಾನುವನ್ನು ಇಬ್ಬರೂ ತೋರಿದ್ದೀರಿ. ಇಬ್ಬನಿಯ ಹನಿಯಂತೆ ನಿಮ್ಮ ಕವನ ಪದ್ಮಾಲಯ ಅವರ ನಾನುವಿನ ವಿರಾಟ್ ರೂಪವನ್ನು ಹೃದ್ಯವಾಗಿ ಪ್ರತಿಬಿಂಬಿಸಿದೆ. ಪದ್ಮಾಲಯ ರವರ ಈ ಲೇಖನದಲ್ಲಿ ಸ್ವಾತಂತ್ರ್ಯ ಮುಂತಾದ ಪದಗಳ ಮಹತ್ವವನ್ನು ತಿಳಿದೆ. ಕೆಲವು ಉದಾಹರಣೆಗಳ ಮೂಲಕ ನಾನುವಿನ ಮೆರೆದಾಟಗಳನ್ನು ಮನಮುಟ್ಟುವಂತೆ ಚಿತ್ರಿಸಿದ್ದಾರೆ. ಮತ್ತೆ ಓದಿ ಮಗದೊಮ್ಮೆ ಓದಿ ಮನನಮಾಡಿಕೊಳ್ಳಬೇಕಾದ ಲೇಖನ. ನಿಮ್ಮ ಕವನವೂ ಕೂಡ ದಾರಿಯ ಬೇಲಿಯ ಹಸಿರ ಮಧ್ಯೆ ಅರಳಿನಿಂತ ಹೂವಂತಿದೆ.

  2. ಪಂಚಾಕ್ಷರಿ ಹಳೇಬೀಡು
    Apr 9, 2023 Reply

    “ಅಕಲ್ಪಿತ ಶಿವ ಇಲ್ಲದ ಮನವ ಜಾಡಿಸಿ ಕೊಡವಲು ನಿರ್ವಯಲು!” ಅದ್ಭುತ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಆಫ್ರಿಕಾದ ಸೂರ್ಯ
ಆಫ್ರಿಕಾದ ಸೂರ್ಯ
December 13, 2024
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ವಚನ – ಸಾಂಸ್ಕೃತಿಕ ತಲ್ಲಣಗಳು
ವಚನ – ಸಾಂಸ್ಕೃತಿಕ ತಲ್ಲಣಗಳು
November 1, 2018
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ವೀರ
ವೀರ
April 29, 2018
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
Copyright © 2025 Bayalu