Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹೀಗೊಂದು ಸಂವಾದ…
Share:
Poems April 6, 2023 ಕೆ.ಆರ್ ಮಂಗಳಾ

ಹೀಗೊಂದು ಸಂವಾದ…

ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು
ಬಯಕೆಯ ಸೆಲೆಗೆ ಮರುಳಾಗಿಹುದು
ಕಾಣುವೆನೆಂತು ಜೀವದ ಸೊಬಗ
ಅರಿಯುವುದೆಂತು ಪ್ರಾಣದ ಹೊಲಬ
ಗೊತ್ತಿಲ್ಲದ ನಡಿಗೆ ಕತ್ತಲ ದಾರಿ
ಕಾಲಿಡಲೆಲ್ಲಿ ಹೇಳು ಗುರು
ಗುರು: ಕಂಡುದ ಹಿಡಿಯದ ಅಜ್ಞಾನಕೆ ಮರುಗುವೆ
ಕಾಣದ ಠಾವಿನ ಕನಸಿಗೆ ಕನಿಕರಿಸುವೆ
ಇಳಿಯದೆ ಕಾಣದು, ಹುಡುಕದೆ ದಕ್ಕದು
ನಡೆಯದೆ ಸೋತರೆ ಹೇಗಮ್ಮಾ…

ಶಿಷ್ಯೆ: ಎಲ್ಲಿಂದಲೋ ಬಂದು ಎತ್ತೆತ್ತಲೋ ಎಳೆವ
ನೋವು- ನಗು- ಉದ್ವೇಗದ ಸರಿಗಮ
ಪ್ರೀತಿ- ಪ್ರೇಮ- ವ್ಯಾಮೋಹದ ಪದನಿಸ
ದ್ವೇಷ, ರೋಷ, ಕುಹಕ, ಸೇಡು
ಒಂದೇ ಎರಡೇ ಉನ್ಮಾದದ ಅಲೆಬಲೆ
ಯಾವುದು ದಿಟ, ಯಾವುದು ಸೆಟೆ
ಕಂಗೆಟ್ಟಿರುವೆ ಹೇಳು ಗುರು
ಗುರು: ರುಚಿಗಳ ಸೆಳೆತಕೆ, ಬದಲಾಗುವ ಬಣ್ಣಕೆ
ನಿಲುಕುವುದಲ್ಲ ನಿಜದ ನೆಲೆ
ಇಲ್ಲದ ಸವಿಗೆ ನಾಲಿಗೆ ಚಾಚಿ
ಸುಮ್ಮನೆ ಬಳಲಿಕೆ ಯಾಕಮ್ಮಾ?

ಶಿಷ್ಯೆ: ದೇಹದಲಿರುವೆ, ಜ್ಞಾನದಲಿರುವೆ
ಬುದ್ಧಿಯಲಿರುವೆ, ಭಾವದಲಿರುವೆ
ಮಾತೂ ನನದೆ, ಮೌನವೂ ನನದೆ
ಅಲ್ಲಿಯೂ ನಾನೇ, ಇಲ್ಲಿಯೂ ನಾನೇ
ಎಲ್ಲೆಲ್ಲಿಯೂ ಥಕದಿಮಿ ಎನುತಿದೆ ‘ನಾನು’
ನಾನಿಲ್ಲದ ಠಾವಾದರೂ ಎಲ್ಲಿದೆ…
ಯಾರೀ ‘ನಾನು’ ಹೇಳು ಗುರು…
ಗುರು: ಗಗನದ ಕುಸುಮಕೆ ಕೈ ಚಾಚಿರುವೆ
ಕನಸಿನ ಸಿರಿಗೆ ಮನಸೋತಿರುವೆ
ಹುಸಿಯಲಿ ನಿಂತು ಹುಸಿಯನೇ ಹೊದ್ದು
ನಾ… ನಾ… ಎಂದರೆ ಹೇಗಮ್ಮಾ?

ಶಿಷ್ಯೆ: ಕಣ್ಣಿಗೆ ರಾಚಿದೆ ಅಹಮಿನ ದೂಳು
ಕಾಲಿಗೆ ನಾಟಿದೆ ಭವದ ಮುಳ್ಳು
ಕಲ್ಪಿತವನು ನಿಜವೆಂದೇ ಅಪ್ಪಿದೆ
ನಿತ್ಯವು ಸರಿದು ಆಯಸ್ಸು ಕರಗುವ
ಕಾಲದ ಓಟಕೆ ಭಯ ಬಿದ್ದಿರುವೆ
ಶಿವನನು ಕಾಣುವ ಬಯಲನು ಹೊಂದುವ
ಭಾಗ್ಯವು ದಕ್ಕೀತೆ ಹೇಳು ಗುರು
ಗುರು: ಕಣ್ಣಿನ ಕಸವನು, ಕಾಲಿನ ಮುಳ್ಳನು
ತೆಗೆಯಲು ಅಲ್ಲೇ ಇಹ ಅಕಲ್ಪಿತ ಶಿವನು
ಇಲ್ಲದ ಮನವನು ಜಾಡಿಸಿ ಕೊಡವಲು
ತನ್ನಲಿ ತಾನೇ ನಿಜ ನಿರ್ಬಯಲು.

Previous post ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
Next post ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು

Related Posts

ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...
ಮರೆತೆ…
Share:
Poems

ಮರೆತೆ…

July 4, 2022 ಜ್ಯೋತಿಲಿಂಗಪ್ಪ
ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...

Comments 2

  1. K S Mallesh
    Apr 7, 2023 Reply

    ಪದ್ಮಾಲಯ ನಾಗರಾಜ್ ಅವರ ಲೇಖನ ಮತ್ತು ನಿಮ್ಮ ಹೀಗೊಂದು ಸಂವಾದ ಕವನ ಎರಡೂ ಮನಸೆಳೆದವು. ಎಳೆ ಎಳೆಯಾಗಿ ಬಿಡಿಸಿ ಬಿಡಿಸಿ ನಾನುವನ್ನು ಇಬ್ಬರೂ ತೋರಿದ್ದೀರಿ. ಇಬ್ಬನಿಯ ಹನಿಯಂತೆ ನಿಮ್ಮ ಕವನ ಪದ್ಮಾಲಯ ಅವರ ನಾನುವಿನ ವಿರಾಟ್ ರೂಪವನ್ನು ಹೃದ್ಯವಾಗಿ ಪ್ರತಿಬಿಂಬಿಸಿದೆ. ಪದ್ಮಾಲಯ ರವರ ಈ ಲೇಖನದಲ್ಲಿ ಸ್ವಾತಂತ್ರ್ಯ ಮುಂತಾದ ಪದಗಳ ಮಹತ್ವವನ್ನು ತಿಳಿದೆ. ಕೆಲವು ಉದಾಹರಣೆಗಳ ಮೂಲಕ ನಾನುವಿನ ಮೆರೆದಾಟಗಳನ್ನು ಮನಮುಟ್ಟುವಂತೆ ಚಿತ್ರಿಸಿದ್ದಾರೆ. ಮತ್ತೆ ಓದಿ ಮಗದೊಮ್ಮೆ ಓದಿ ಮನನಮಾಡಿಕೊಳ್ಳಬೇಕಾದ ಲೇಖನ. ನಿಮ್ಮ ಕವನವೂ ಕೂಡ ದಾರಿಯ ಬೇಲಿಯ ಹಸಿರ ಮಧ್ಯೆ ಅರಳಿನಿಂತ ಹೂವಂತಿದೆ.

  2. ಪಂಚಾಕ್ಷರಿ ಹಳೇಬೀಡು
    Apr 9, 2023 Reply

    “ಅಕಲ್ಪಿತ ಶಿವ ಇಲ್ಲದ ಮನವ ಜಾಡಿಸಿ ಕೊಡವಲು ನಿರ್ವಯಲು!” ಅದ್ಭುತ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ಅನಿಮಿಷನ ಕಥೆ- 6
ಅನಿಮಿಷನ ಕಥೆ- 6
April 11, 2025
ಕಡಕೋಳ ನೆಲದ ನೆನಪುಗಳು
ಕಡಕೋಳ ನೆಲದ ನೆನಪುಗಳು
August 10, 2023
ಅರ್ಥ – ವ್ಯರ್ಥ
ಅರ್ಥ – ವ್ಯರ್ಥ
April 5, 2026
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
November 9, 2021
ಶಿವಯೋಗ
ಶಿವಯೋಗ
July 4, 2021
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ಗಜಲ್…
ಗಜಲ್…
February 16, 2026
Copyright © 2026 Bayalu