Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹೀಗೊಂದು ಸಂವಾದ…
Share:
Poems April 6, 2023 ಕೆ.ಆರ್ ಮಂಗಳಾ

ಹೀಗೊಂದು ಸಂವಾದ…

ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು
ಬಯಕೆಯ ಸೆಲೆಗೆ ಮರುಳಾಗಿಹುದು
ಕಾಣುವೆನೆಂತು ಜೀವದ ಸೊಬಗ
ಅರಿಯುವುದೆಂತು ಪ್ರಾಣದ ಹೊಲಬ
ಗೊತ್ತಿಲ್ಲದ ನಡಿಗೆ ಕತ್ತಲ ದಾರಿ
ಕಾಲಿಡಲೆಲ್ಲಿ ಹೇಳು ಗುರು
ಗುರು: ಕಂಡುದ ಹಿಡಿಯದ ಅಜ್ಞಾನಕೆ ಮರುಗುವೆ
ಕಾಣದ ಠಾವಿನ ಕನಸಿಗೆ ಕನಿಕರಿಸುವೆ
ಇಳಿಯದೆ ಕಾಣದು, ಹುಡುಕದೆ ದಕ್ಕದು
ನಡೆಯದೆ ಸೋತರೆ ಹೇಗಮ್ಮಾ…

ಶಿಷ್ಯೆ: ಎಲ್ಲಿಂದಲೋ ಬಂದು ಎತ್ತೆತ್ತಲೋ ಎಳೆವ
ನೋವು- ನಗು- ಉದ್ವೇಗದ ಸರಿಗಮ
ಪ್ರೀತಿ- ಪ್ರೇಮ- ವ್ಯಾಮೋಹದ ಪದನಿಸ
ದ್ವೇಷ, ರೋಷ, ಕುಹಕ, ಸೇಡು
ಒಂದೇ ಎರಡೇ ಉನ್ಮಾದದ ಅಲೆಬಲೆ
ಯಾವುದು ದಿಟ, ಯಾವುದು ಸೆಟೆ
ಕಂಗೆಟ್ಟಿರುವೆ ಹೇಳು ಗುರು
ಗುರು: ರುಚಿಗಳ ಸೆಳೆತಕೆ, ಬದಲಾಗುವ ಬಣ್ಣಕೆ
ನಿಲುಕುವುದಲ್ಲ ನಿಜದ ನೆಲೆ
ಇಲ್ಲದ ಸವಿಗೆ ನಾಲಿಗೆ ಚಾಚಿ
ಸುಮ್ಮನೆ ಬಳಲಿಕೆ ಯಾಕಮ್ಮಾ?

ಶಿಷ್ಯೆ: ದೇಹದಲಿರುವೆ, ಜ್ಞಾನದಲಿರುವೆ
ಬುದ್ಧಿಯಲಿರುವೆ, ಭಾವದಲಿರುವೆ
ಮಾತೂ ನನದೆ, ಮೌನವೂ ನನದೆ
ಅಲ್ಲಿಯೂ ನಾನೇ, ಇಲ್ಲಿಯೂ ನಾನೇ
ಎಲ್ಲೆಲ್ಲಿಯೂ ಥಕದಿಮಿ ಎನುತಿದೆ ‘ನಾನು’
ನಾನಿಲ್ಲದ ಠಾವಾದರೂ ಎಲ್ಲಿದೆ…
ಯಾರೀ ‘ನಾನು’ ಹೇಳು ಗುರು…
ಗುರು: ಗಗನದ ಕುಸುಮಕೆ ಕೈ ಚಾಚಿರುವೆ
ಕನಸಿನ ಸಿರಿಗೆ ಮನಸೋತಿರುವೆ
ಹುಸಿಯಲಿ ನಿಂತು ಹುಸಿಯನೇ ಹೊದ್ದು
ನಾ… ನಾ… ಎಂದರೆ ಹೇಗಮ್ಮಾ?

ಶಿಷ್ಯೆ: ಕಣ್ಣಿಗೆ ರಾಚಿದೆ ಅಹಮಿನ ದೂಳು
ಕಾಲಿಗೆ ನಾಟಿದೆ ಭವದ ಮುಳ್ಳು
ಕಲ್ಪಿತವನು ನಿಜವೆಂದೇ ಅಪ್ಪಿದೆ
ನಿತ್ಯವು ಸರಿದು ಆಯಸ್ಸು ಕರಗುವ
ಕಾಲದ ಓಟಕೆ ಭಯ ಬಿದ್ದಿರುವೆ
ಶಿವನನು ಕಾಣುವ ಬಯಲನು ಹೊಂದುವ
ಭಾಗ್ಯವು ದಕ್ಕೀತೆ ಹೇಳು ಗುರು
ಗುರು: ಕಣ್ಣಿನ ಕಸವನು, ಕಾಲಿನ ಮುಳ್ಳನು
ತೆಗೆಯಲು ಅಲ್ಲೇ ಇಹ ಅಕಲ್ಪಿತ ಶಿವನು
ಇಲ್ಲದ ಮನವನು ಜಾಡಿಸಿ ಕೊಡವಲು
ತನ್ನಲಿ ತಾನೇ ನಿಜ ನಿರ್ಬಯಲು.

Previous post ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
Next post ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು

Related Posts

ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...
ಭವ ರಾಟಾಳ
Share:
Poems

ಭವ ರಾಟಾಳ

September 10, 2022 ಕೆ.ಆರ್ ಮಂಗಳಾ
ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...

Comments 2

  1. K S Mallesh
    Apr 7, 2023 Reply

    ಪದ್ಮಾಲಯ ನಾಗರಾಜ್ ಅವರ ಲೇಖನ ಮತ್ತು ನಿಮ್ಮ ಹೀಗೊಂದು ಸಂವಾದ ಕವನ ಎರಡೂ ಮನಸೆಳೆದವು. ಎಳೆ ಎಳೆಯಾಗಿ ಬಿಡಿಸಿ ಬಿಡಿಸಿ ನಾನುವನ್ನು ಇಬ್ಬರೂ ತೋರಿದ್ದೀರಿ. ಇಬ್ಬನಿಯ ಹನಿಯಂತೆ ನಿಮ್ಮ ಕವನ ಪದ್ಮಾಲಯ ಅವರ ನಾನುವಿನ ವಿರಾಟ್ ರೂಪವನ್ನು ಹೃದ್ಯವಾಗಿ ಪ್ರತಿಬಿಂಬಿಸಿದೆ. ಪದ್ಮಾಲಯ ರವರ ಈ ಲೇಖನದಲ್ಲಿ ಸ್ವಾತಂತ್ರ್ಯ ಮುಂತಾದ ಪದಗಳ ಮಹತ್ವವನ್ನು ತಿಳಿದೆ. ಕೆಲವು ಉದಾಹರಣೆಗಳ ಮೂಲಕ ನಾನುವಿನ ಮೆರೆದಾಟಗಳನ್ನು ಮನಮುಟ್ಟುವಂತೆ ಚಿತ್ರಿಸಿದ್ದಾರೆ. ಮತ್ತೆ ಓದಿ ಮಗದೊಮ್ಮೆ ಓದಿ ಮನನಮಾಡಿಕೊಳ್ಳಬೇಕಾದ ಲೇಖನ. ನಿಮ್ಮ ಕವನವೂ ಕೂಡ ದಾರಿಯ ಬೇಲಿಯ ಹಸಿರ ಮಧ್ಯೆ ಅರಳಿನಿಂತ ಹೂವಂತಿದೆ.

  2. ಪಂಚಾಕ್ಷರಿ ಹಳೇಬೀಡು
    Apr 9, 2023 Reply

    “ಅಕಲ್ಪಿತ ಶಿವ ಇಲ್ಲದ ಮನವ ಜಾಡಿಸಿ ಕೊಡವಲು ನಿರ್ವಯಲು!” ಅದ್ಭುತ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ಹುಡುಕಾಟ
ಹುಡುಕಾಟ
January 15, 2026
ಅಂದು-ಇಂದು
ಅಂದು-ಇಂದು
December 8, 2021
ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ
May 6, 2021
ಶಿವಯೋಗ
ಶಿವಯೋಗ
July 4, 2021
ನೋಟದ ಕೂಟ…
ನೋಟದ ಕೂಟ…
May 10, 2023
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಭೃತ್ಯಾಚಾರ
ಭೃತ್ಯಾಚಾರ
June 5, 2021
ಕುರುಹೇ ಬಯಲು
ಕುರುಹೇ ಬಯಲು
February 16, 2026
Copyright © 2026 Bayalu